ಮಂಗಳೂರು: ಯಕ್ಷಗಾನ ವಿಶ್ವಮಾನ್ಯತೆಯನ್ನು ಪಡೆಯಬೇಕೆಂಬುದು ನಮ್ಮೆಲ್ಲ ಕರಾವಳಿಗರ ಆಶಯ. ಭಾರತದ ಸಂಸ್ಕೃತಿ ಸಂಸ್ಕಾರವನ್ನು ಬಿಂಬಿಸುವಂತಹ ಕೇಂದ್ರ ಘಟ್ಟ ಎಂದರೆ ಅದು ಲಂಡನ್ನಲ್ಲಿರುವ ನೆಹರೂ ಸೆಂಟರ್ ಎಂದು ಪಟ್ಲ ಫೌಂಡೇಶನ್ನ ಸ್ಥಾಪಕಧ್ಯಕ್ಷ ಪಟ್ಲ ಸತೀಶ್ ಶೆಟ್ಟಿ ಹೇಳಿದ್ದಾರೆ.
ಇವರು ಮಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತಾನಾಡಿ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನಿಂದ ಸೆಪ್ಟೆಂಬರ್ 9 ರಿಂದ 17ರವರೆಗೆ ಯುರೋಪ್ – ಯಕ್ಷಗಾನ ಅಭಿಯಾನ ನಡೆಯಲಿದೆ. ಈಗಾಗಲೇ ಬೇರೆ ಬೇರೆ ದೇಶಗಳಲ್ಲಿ ಯಕ್ಷಗಾನವನ್ನು ಪಸರಿಸುವ ಕಾರ್ಯ ಮಾಡಿದ್ದೇವೆ. ಯಕ್ಷಗಾನ ಅಭಿಯಾನದಲ್ಲಿ ತೆಂಕುತಿಟ್ಟಿನ ರಾಜ ವೇಷ, ಬಣ್ಣದ ವೇಷ, ಪಗಡಿ ವೇಷ, ಸ್ತ್ರೀ ವೇಷ, ಹಾಸ್ಯ ವೇಷಗಳು ರಾರಾಜಿಸಲಿದ್ದು, ಯುರೋಪ್ ದೇಶದ ಬೇರೆ ಬೇರೆ ಭಾಗಗಳಲ್ಲಿ ಯಕ್ಷಗಾನ ಪ್ರದರ್ಶನಗೊಳ್ಳಲಿದೆ. ಸೆಪ್ಟೆಂಬರ್ 9 ರಂದು ಜರ್ಮನಿಯ ಪ್ರಾಂಕ್ ಫುಟ್ 9, ಸೆ. 11 ರಂದು ಯುಕೆಯ ಮಿಲ್ಟನ್ ಕೇಯ್ನ್ಸ್, ಸೆ. 12 ರಂದು ಯುಕೆಯ ಬಾಸಿಲ್ಡನ್, ಸೆ.13 ರಂದು ಸೆಂಟ್ರಲ್ ಲಂಡನ್, ಯುಕೆ (ವಿಶ್ವ ಪ್ರಸಿದ್ಧ ನೆಹರೂ ಸೆಂಟರ್), 14 ರಂದು ಸ್ಲೋಗ್, ಸೆ.16 ರಂದು ಫ್ರಾನ್ಸ್ ನ ಪ್ಯಾರಿಸ್, ಸೆ.17 ರಂದು ಸ್ವಿಝರ್ ಲ್ಯಾಂಡ್ ನ ಝುರಿಚ್ ನಲ್ಲಿ ಯಕ್ಷಗಾನ ಭರ್ಜರಿ ಪದರ್ಶನಗೊಳ್ಳಲಿದೆ.
ಹೊಸದಿಲ್ಲಿ: ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..! ಪ್ರಖ್ಯಾತ ಭಾಗವತ, ಸಂಘಟಕ ಪಟ್ಲ ಸತೀಶ್ ಶೆಟ್ಟಿ…
ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…
ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…
ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ…
ಮೂಲತಃ ಪುತ್ತೂರು ಬೆಂದ್ರುತೀರ್ಥ ನಿವಾಸಿ, ಪ್ರಸಕ್ತ ರಾಯಿ ಸಮೀಪದ ಮಾಬೆಟ್ಟು ಎಂಬಲ್ಲಿ ವಾಸವಾಗಿದ್ದ ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್…
ದೆಹಲಿ ಕರ್ನಾಟಕ ಸಂಘದಿಂದ ಖ್ಯಾತ ಯಕ್ಷಗಾನ ಭಾಗವತರಾದ ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ…