ಮಂಗಳೂರು: ಯಕ್ಷಗಾನ ವಿಶ್ವಮಾನ್ಯತೆಯನ್ನು ಪಡೆಯಬೇಕೆಂಬುದು ನಮ್ಮೆಲ್ಲ ಕರಾವಳಿಗರ ಆಶಯ. ಭಾರತದ ಸಂಸ್ಕೃತಿ ಸಂಸ್ಕಾರವನ್ನು ಬಿಂಬಿಸುವಂತಹ ಕೇಂದ್ರ ಘಟ್ಟ ಎಂದರೆ ಅದು ಲಂಡನ್ನಲ್ಲಿರುವ ನೆಹರೂ ಸೆಂಟರ್ ಎಂದು ಪಟ್ಲ ಫೌಂಡೇಶನ್ನ ಸ್ಥಾಪಕಧ್ಯಕ್ಷ ಪಟ್ಲ ಸತೀಶ್ ಶೆಟ್ಟಿ ಹೇಳಿದ್ದಾರೆ.
ಇವರು ಮಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತಾನಾಡಿ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನಿಂದ ಸೆಪ್ಟೆಂಬರ್ 9 ರಿಂದ 17ರವರೆಗೆ ಯುರೋಪ್ – ಯಕ್ಷಗಾನ ಅಭಿಯಾನ ನಡೆಯಲಿದೆ. ಈಗಾಗಲೇ ಬೇರೆ ಬೇರೆ ದೇಶಗಳಲ್ಲಿ ಯಕ್ಷಗಾನವನ್ನು ಪಸರಿಸುವ ಕಾರ್ಯ ಮಾಡಿದ್ದೇವೆ. ಯಕ್ಷಗಾನ ಅಭಿಯಾನದಲ್ಲಿ ತೆಂಕುತಿಟ್ಟಿನ ರಾಜ ವೇಷ, ಬಣ್ಣದ ವೇಷ, ಪಗಡಿ ವೇಷ, ಸ್ತ್ರೀ ವೇಷ, ಹಾಸ್ಯ ವೇಷಗಳು ರಾರಾಜಿಸಲಿದ್ದು, ಯುರೋಪ್ ದೇಶದ ಬೇರೆ ಬೇರೆ ಭಾಗಗಳಲ್ಲಿ ಯಕ್ಷಗಾನ ಪ್ರದರ್ಶನಗೊಳ್ಳಲಿದೆ. ಸೆಪ್ಟೆಂಬರ್ 9 ರಂದು ಜರ್ಮನಿಯ ಪ್ರಾಂಕ್ ಫುಟ್ 9, ಸೆ. 11 ರಂದು ಯುಕೆಯ ಮಿಲ್ಟನ್ ಕೇಯ್ನ್ಸ್, ಸೆ. 12 ರಂದು ಯುಕೆಯ ಬಾಸಿಲ್ಡನ್, ಸೆ.13 ರಂದು ಸೆಂಟ್ರಲ್ ಲಂಡನ್, ಯುಕೆ (ವಿಶ್ವ ಪ್ರಸಿದ್ಧ ನೆಹರೂ ಸೆಂಟರ್), 14 ರಂದು ಸ್ಲೋಗ್, ಸೆ.16 ರಂದು ಫ್ರಾನ್ಸ್ ನ ಪ್ಯಾರಿಸ್, ಸೆ.17 ರಂದು ಸ್ವಿಝರ್ ಲ್ಯಾಂಡ್ ನ ಝುರಿಚ್ ನಲ್ಲಿ ಯಕ್ಷಗಾನ ಭರ್ಜರಿ ಪದರ್ಶನಗೊಳ್ಳಲಿದೆ.
ಬಂಟ್ವಾಳ ಆಡಳಿತ ಸೌಧದ ಕಚೇರಿಯಲ್ಲಿ ಸಾರ್ವಜನಿಕ ಉಪಯೋಗಕ್ಕೆ ಅಳವಡಿಸಲಾಗಿರುವ ಲಿಪ್ಟ್ನೊಳಗೆ ಇಬ್ಬರು ವ್ಯಕ್ತಿಗಳು ಸುಮಾರು 45 ನಿಮಿಷಗಳ ಕಾಲ ಸಿಲುಕಿಕೊಂಡು…
ಶಾಲೆಗಳು ವಿದ್ಯಾರ್ಥಿ ಸ್ನೇಹಿಯಾಗಿರಬೇಕು, ಮಕ್ಕಳು ಸಂಭ್ರಮದಿಂದ ಕಲಿಕೆಯಲ್ಲಿ ತೊಡಗಬೇಕೆನ್ನುವ ಮಹತ್ವಕಾಂಕ್ಷೆ ಎಲ್ಲರಲ್ಲೂ ಇದೆ. ಬೇಸಿಗೆ ರಜೆಯ ಮಜಾವನ್ನು ಕಳೆದು ಸಪ್ಪೆ…
ಟೈಲ್ಸ್ ಸಾಗಿಸುತ್ತಿದ್ದ ಪಾಜೆರೋ ಕಾರೊಂದು ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಬ್ರಹ್ಮಾವರ ಸಮೀಪದ ಧರ್ಮಾವರಂ ಪೆಟ್ರೋಲ್ ಬಂಕ್ ಬಳಿ ಸಂಭವಿಸಿದೆ.…
ತೆಂಗಿನ ಮರದಿಂದ ಬಿದ್ದ ತೆಂಗಿನಕಾಯಿ ತಲೆಗೆ ಬಡಿದ ಪರಿಣಾಮ ಒಂದೂವರೆ ವರ್ಷದ ಗಂಡು ಮಗು ಮೃತಪಟ್ಟ ದಾರುಣ ಘಟನೆ ಬ್ರಹ್ಮಾವರ…
ನೆರೆಮನೆಯ ದನಗಳು ತನ್ನ ತೋಟಕ್ಕೆ ಬಂದು ಹಾನಿಗೊಳಿಸಿವೆ ಎಂಬ ಆಕ್ರೋಶದಿಂದ ಹಟ್ಟಿಯಲ್ಲಿ ಕಟ್ಟಿಹಾಕಿದ್ದ ದನಗಳಿಗೆ ಕತ್ತಿಯಿಂದ ಕಡಿದು ಹಲ್ಲೆ ನಡೆಸಿ…
ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನಿಸಿದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಮಂಗಳೂರು ದಕ್ಷಿಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಿಷೇಧಿತ ಮಾದಕ…