ಶಾಲೆಗೆ ನುಗ್ಗಿದ ಕೆಲ ಕಿಡಿಗೇಡಿಗಳು ಇಲ್ಲಿನ ಸ್ವತ್ತುಗಳಿಗೆ ಹಾನಿ ಮಾಡಿ, ಗೋಡೆಯ ಮೇಲೆ ಅಶ್ಲೀಲ ಬರಹಗಳನ್ನು ಬರೆದಿರುವ ಘಟನೆ ಜಿಲ್ಲೆಯ ಬಂಟ್ವಾಳ ತಾಲೂಕಿನ ವಿಟ್ಲದ ಸರಕಾರಿ ಪ್ರೌಢಶಾಲೆಯಲ್ಲಿ ನಡೆದಿದೆ. ಈ ಸಂಬಂಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇಂದು ಬೆಳಗ್ಗೆ ವಿದ್ಯಾರ್ಥಿಗಳು ಶಾಲೆಗೆ ಆಗಮಿಸಿದ ವೇಳೆ ಘಟನೆ ಬೆಳಕಿಗೆ ಬಂದಿದೆ.
ಕಿಡಿಗೇಡಿಗಳು ಶಾಲೆಯ ಎಲ್ಲ ತರಗತಿ ಕೊಠಡಿಯ ಬಾಗಿಲ ಬಳಿ ಮೊಟ್ಟೆ ಒಡೆದಿದ್ದಾರೆ. ಅಲ್ಲದೇ ಒಂದು ಕೊಠಡಿಯ ಕಿಟಕಿಯ ಗಾಜನ್ನು ಒಡೆದಿರುವುದಲ್ಲದೇ, ಮಕ್ಕಳ ಸೃಜನಾತ್ಮಕತೆಗೆ ಒದಗಿಸಿದ ಸೂಚನಾ ಫಲಕದ ಗಾಜು, ಜೊತೆಗೆ ಶಾಲೆಯ ಟ್ಯೂಬ್ ಲೈಟ್ಗಳನ್ನು ಒಡೆದು ಹಾಕಿದ್ದಾರೆ. ಪ್ರಾಥಮಿಕ ಶಾಲೆಯ ಗೇಟ್ ಮತ್ತು ಅಡುಗೆ ಕೋಣೆಯ ಬಾಗಿಲಿಗೆ ದುಷ್ಕರ್ಮಿಗಳು ಹಾನಿ ಮಾಡಿದ್ದಾರೆ. ವಿದ್ಯಾರ್ಥಿಗಳು ಬಿಡಿಸಿದ್ದ ಸ್ವಾತಂತ್ರ್ಯ ಹೋರಾಟಗಾರರ ಚಿತ್ರಗಳನ್ನು ಹರಿದು ಹಾಕಿದ್ದಾರೆ. ಅಲ್ಲದೆ ಶಾಲೆ ಗೋಡೆ ಮೇಲೆ ಅಶ್ಲೀಲ ಬರಹಗಳನ್ನು ಬರೆದಿದ್ದಾರೆ.
ಇದರಿಂದಾಗಿ ಶಾಲೆಯ ದೈನಂದಿನ ತರಗತಿಗೆ ತೊಂದರೆ ಉಂಟಾಗಿದ್ದು, ಈ ಕುರಿತು ಕ್ರಮ ಕೈಗೊಳ್ಳುವಂತೆ ವಿಟ್ಲ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ. ಶಾಲಾ ಮೈದಾನವನ್ನು ಅಕ್ರಮವಾಗಿ ಪ್ರವೇಶಿಸಿರುವ ತಂಡ ಕ್ರಿಕೆಟ್ ಆಡಿ ಬಳಿಕ ಈ ಕೃತ್ಯ ಎಸಗಿರಬಹುದು ಎಂದು ಸಂಶಯಿಸಲಾಗಿದೆ. ಈ ಸಂಬಂಧ ವಿಟ್ಲ ಪೊಲೀಸರು ತನಿಖೆ ಆರಂಭಿಸಿದ್ದಾರೆ.
ಹೊಸದಿಲ್ಲಿ: ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..! ಪ್ರಖ್ಯಾತ ಭಾಗವತ, ಸಂಘಟಕ ಪಟ್ಲ ಸತೀಶ್ ಶೆಟ್ಟಿ…
ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…
ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…
ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ…
ಮೂಲತಃ ಪುತ್ತೂರು ಬೆಂದ್ರುತೀರ್ಥ ನಿವಾಸಿ, ಪ್ರಸಕ್ತ ರಾಯಿ ಸಮೀಪದ ಮಾಬೆಟ್ಟು ಎಂಬಲ್ಲಿ ವಾಸವಾಗಿದ್ದ ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್…
ದೆಹಲಿ ಕರ್ನಾಟಕ ಸಂಘದಿಂದ ಖ್ಯಾತ ಯಕ್ಷಗಾನ ಭಾಗವತರಾದ ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ…