ಜಾಗತಿಕ ಬಂಟರ ಸಂಘಗಳ ಒಕ್ಕೂಟಕ್ಕೆ 2022-25 ರ ಅವಧಿಯ ಜೊತೆ ಕಾರ್ಯದರ್ಶಿಯಾಗಿ ಶ್ರೀ ಚಂದ್ರಹಾಸ್ ಡಿ. ಶೆಟ್ಟಿ, ಅಧ್ಯಕ್ಷರು ಬಂಟರ ಸಂಘ ಬಂಟ್ವಾಳ ತಾಲೂಕು ಇವರು ನೇಮಕಗೊಂಡಿದ್ದಾರೆ.
ಪ್ರವೀಣ್ ಭೋಜ ಶೆಟ್ಟಿಯವರು ಈಗಾಗಲೇ ಒಕ್ಕೂಟದ ಮಹಾ ನಿರ್ದೇಶಕರಾಗಿದ್ದು, ಕಳೆದ ವರ್ಷ ಸೆಪ್ಟೆಂಬರ್ ತಿಂಗಳಿನಲ್ಲಿ ಮುಂಬೈನಲ್ಲಿ ನಡೆದ 2022-25ರ ಅವಧಿಯ ಪದಾಧಿಕಾರಿಗಳ ಚುನಾವಣೆ ಪ್ರಕ್ರಿಯೆಯಲ್ಲಿ ಒಕ್ಕೂಟದ ಜೊತೆ-ಕಾರ್ಯದರ್ಶಿಯಾಗಿ ಅವಿರೋಧವಾಗಿ ಆಯ್ಕೆಯಾಗಿದ್ದು, ಪ್ರಸ್ತುತ ಅವರು ಉದ್ಯೋಗ ನಿಮಿತ್ತ ನಿರತರಾಗಿದ್ದು ಜೊತೆ-ಕಾರ್ಯದರ್ಶಿ ಹುದ್ದೆ ನಿಭಾಹಿಸಲು ತುಸು ಕಷ್ಟವಾಗಿರುವುದರಿಂದ, ಅವರ ಜೊತೆ-ಕಾರ್ಯದರ್ಶಿ ಹುದ್ದೆಗೆ ಪತ್ರದ ಮೂಲಕ ರಾಜೀನಾಮೆ ಸಲ್ಲಿಸಿದ್ದಾರೆ.
ಪ್ರವೀಣ್ ಭೋಜ ಶೆಟ್ಟಿಯವರ ರಾಜೀನಾಮೆಯನ್ನು ಪರಿಗಣಿಸಿ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿಯವರು ಹಾಗೂ ಪದಾಧಿಕಾರಿಗಳು ಚರ್ಚಿಸಿ 2022-25 ರ ಅವಧಿಗೆ ನೂತನ ಜೊತೆ-ಕಾರ್ಯದರ್ಶಿಯಾಗಿ ಚಂದ್ರಹಾಸ್ ಡಿ. ಶೆಟ್ಟಿ, ಅಧ್ಯಕ್ಷರು ಬಂಟರ ಸಂಘ ಬಂಟ್ವಾಳ ತಾಲೂಕು ಇವರನ್ನು ಸರ್ವ ಸದಸ್ಯರ ಸರ್ವಾನುಮತದ ಒಪ್ಪಿಗೆಯೊಂದಿಗೆ ದಿನಾಂಕ 04-09-2023 ರಂದು ನಡೆದ ಆಡಳಿತ ಮಂಡಳಿ ಸಭೆಯಲ್ಲಿ ನೇಮಕ ಮಾಡಲಾಯಿತು.
ಹೊಸದಿಲ್ಲಿ: ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..! ಪ್ರಖ್ಯಾತ ಭಾಗವತ, ಸಂಘಟಕ ಪಟ್ಲ ಸತೀಶ್ ಶೆಟ್ಟಿ…
ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…
ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…
ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ…
ಮೂಲತಃ ಪುತ್ತೂರು ಬೆಂದ್ರುತೀರ್ಥ ನಿವಾಸಿ, ಪ್ರಸಕ್ತ ರಾಯಿ ಸಮೀಪದ ಮಾಬೆಟ್ಟು ಎಂಬಲ್ಲಿ ವಾಸವಾಗಿದ್ದ ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್…
ದೆಹಲಿ ಕರ್ನಾಟಕ ಸಂಘದಿಂದ ಖ್ಯಾತ ಯಕ್ಷಗಾನ ಭಾಗವತರಾದ ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ…