ಜಾಗತಿಕ ಬಂಟರ ಸಂಘಗಳ ಒಕ್ಕೂಟಕ್ಕೆ 2022-25 ರ ಅವಧಿಯ ಜೊತೆ ಕಾರ್ಯದರ್ಶಿಯಾಗಿ ಶ್ರೀ ಚಂದ್ರಹಾಸ್ ಡಿ. ಶೆಟ್ಟಿ, ಅಧ್ಯಕ್ಷರು ಬಂಟರ ಸಂಘ ಬಂಟ್ವಾಳ ತಾಲೂಕು ಇವರು ನೇಮಕಗೊಂಡಿದ್ದಾರೆ.
ಪ್ರವೀಣ್ ಭೋಜ ಶೆಟ್ಟಿಯವರು ಈಗಾಗಲೇ ಒಕ್ಕೂಟದ ಮಹಾ ನಿರ್ದೇಶಕರಾಗಿದ್ದು, ಕಳೆದ ವರ್ಷ ಸೆಪ್ಟೆಂಬರ್ ತಿಂಗಳಿನಲ್ಲಿ ಮುಂಬೈನಲ್ಲಿ ನಡೆದ 2022-25ರ ಅವಧಿಯ ಪದಾಧಿಕಾರಿಗಳ ಚುನಾವಣೆ ಪ್ರಕ್ರಿಯೆಯಲ್ಲಿ ಒಕ್ಕೂಟದ ಜೊತೆ-ಕಾರ್ಯದರ್ಶಿಯಾಗಿ ಅವಿರೋಧವಾಗಿ ಆಯ್ಕೆಯಾಗಿದ್ದು, ಪ್ರಸ್ತುತ ಅವರು ಉದ್ಯೋಗ ನಿಮಿತ್ತ ನಿರತರಾಗಿದ್ದು ಜೊತೆ-ಕಾರ್ಯದರ್ಶಿ ಹುದ್ದೆ ನಿಭಾಹಿಸಲು ತುಸು ಕಷ್ಟವಾಗಿರುವುದರಿಂದ, ಅವರ ಜೊತೆ-ಕಾರ್ಯದರ್ಶಿ ಹುದ್ದೆಗೆ ಪತ್ರದ ಮೂಲಕ ರಾಜೀನಾಮೆ ಸಲ್ಲಿಸಿದ್ದಾರೆ.
ಪ್ರವೀಣ್ ಭೋಜ ಶೆಟ್ಟಿಯವರ ರಾಜೀನಾಮೆಯನ್ನು ಪರಿಗಣಿಸಿ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿಯವರು ಹಾಗೂ ಪದಾಧಿಕಾರಿಗಳು ಚರ್ಚಿಸಿ 2022-25 ರ ಅವಧಿಗೆ ನೂತನ ಜೊತೆ-ಕಾರ್ಯದರ್ಶಿಯಾಗಿ ಚಂದ್ರಹಾಸ್ ಡಿ. ಶೆಟ್ಟಿ, ಅಧ್ಯಕ್ಷರು ಬಂಟರ ಸಂಘ ಬಂಟ್ವಾಳ ತಾಲೂಕು ಇವರನ್ನು ಸರ್ವ ಸದಸ್ಯರ ಸರ್ವಾನುಮತದ ಒಪ್ಪಿಗೆಯೊಂದಿಗೆ ದಿನಾಂಕ 04-09-2023 ರಂದು ನಡೆದ ಆಡಳಿತ ಮಂಡಳಿ ಸಭೆಯಲ್ಲಿ ನೇಮಕ ಮಾಡಲಾಯಿತು.
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…