ಜಾಗತಿಕ ಬಂಟರ ಸಂಘಗಳ ಒಕ್ಕೂಟಕ್ಕೆ 2022-25 ರ ಅವಧಿಯ ಜೊತೆ ಕಾರ್ಯದರ್ಶಿಯಾಗಿ ಶ್ರೀ ಚಂದ್ರಹಾಸ್ ಡಿ. ಶೆಟ್ಟಿ, ಅಧ್ಯಕ್ಷರು ಬಂಟರ ಸಂಘ ಬಂಟ್ವಾಳ ತಾಲೂಕು ಇವರು ನೇಮಕಗೊಂಡಿದ್ದಾರೆ.
ಪ್ರವೀಣ್ ಭೋಜ ಶೆಟ್ಟಿಯವರು ಈಗಾಗಲೇ ಒಕ್ಕೂಟದ ಮಹಾ ನಿರ್ದೇಶಕರಾಗಿದ್ದು, ಕಳೆದ ವರ್ಷ ಸೆಪ್ಟೆಂಬರ್ ತಿಂಗಳಿನಲ್ಲಿ ಮುಂಬೈನಲ್ಲಿ ನಡೆದ 2022-25ರ ಅವಧಿಯ ಪದಾಧಿಕಾರಿಗಳ ಚುನಾವಣೆ ಪ್ರಕ್ರಿಯೆಯಲ್ಲಿ ಒಕ್ಕೂಟದ ಜೊತೆ-ಕಾರ್ಯದರ್ಶಿಯಾಗಿ ಅವಿರೋಧವಾಗಿ ಆಯ್ಕೆಯಾಗಿದ್ದು, ಪ್ರಸ್ತುತ ಅವರು ಉದ್ಯೋಗ ನಿಮಿತ್ತ ನಿರತರಾಗಿದ್ದು ಜೊತೆ-ಕಾರ್ಯದರ್ಶಿ ಹುದ್ದೆ ನಿಭಾಹಿಸಲು ತುಸು ಕಷ್ಟವಾಗಿರುವುದರಿಂದ, ಅವರ ಜೊತೆ-ಕಾರ್ಯದರ್ಶಿ ಹುದ್ದೆಗೆ ಪತ್ರದ ಮೂಲಕ ರಾಜೀನಾಮೆ ಸಲ್ಲಿಸಿದ್ದಾರೆ.
ಪ್ರವೀಣ್ ಭೋಜ ಶೆಟ್ಟಿಯವರ ರಾಜೀನಾಮೆಯನ್ನು ಪರಿಗಣಿಸಿ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿಯವರು ಹಾಗೂ ಪದಾಧಿಕಾರಿಗಳು ಚರ್ಚಿಸಿ 2022-25 ರ ಅವಧಿಗೆ ನೂತನ ಜೊತೆ-ಕಾರ್ಯದರ್ಶಿಯಾಗಿ ಚಂದ್ರಹಾಸ್ ಡಿ. ಶೆಟ್ಟಿ, ಅಧ್ಯಕ್ಷರು ಬಂಟರ ಸಂಘ ಬಂಟ್ವಾಳ ತಾಲೂಕು ಇವರನ್ನು ಸರ್ವ ಸದಸ್ಯರ ಸರ್ವಾನುಮತದ ಒಪ್ಪಿಗೆಯೊಂದಿಗೆ ದಿನಾಂಕ 04-09-2023 ರಂದು ನಡೆದ ಆಡಳಿತ ಮಂಡಳಿ ಸಭೆಯಲ್ಲಿ ನೇಮಕ ಮಾಡಲಾಯಿತು.
ಬಂಟ್ವಾಳ ತಾಲೂಕಿನ ತೆಂಕಬೆಳ್ಳೂರು ಗ್ರಾಮದ ಕಾಗುಡ್ಡೆ ಎಂಬಲ್ಲಿ ರಾತ್ರಿ ಸುರಿದ ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಮನೆಯ ಚಾವಣಿ…
ಬಂಟ್ವಾಳ ತಾಲೂಕಿನ ಸಜೀಪಮೂಡ ಗ್ರಾಮದ ಕೊಳಕೆ ಎಂಬಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಸಂಭವಿಸಿದಂತಹ ಅವಘಡದಲ್ಲಿ ಮನೆಯ ಪೀಠೋಪಕರಣಗಳು ಹಾಗೂ ದಿನನಿತ್ಯ…
ವಾಷಿಂಗ್ಟನ್ ಕರ್ನಾಟಕದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಯು. ಟಿ. ಖಾದರ್ ಫರೀದ್ ಅವರ ಸಾರ್ವಜನಿಕ ಸೇವೆ…
ಫಿಫಾ ವಿಶ್ವಕಪ್ 2026ರ ಫೈನಲ್ ಹಾಗೂ ಸೆಮಿಫೈನಲ್ ಪಂದ್ಯಗಳ ವೇಳೆ ನಡೆದ ಗಲಾಟೆ ಮತ್ತು ನಿಯಮ ಉಲ್ಲಂಘನೆಗಳ ಹಿನ್ನೆಲೆಯಲ್ಲಿ, ಅರ್ಜೆಂಟೀನಾ…
'ನ್ಯೂಯಾರ್ಕ್ ಟೈಮ್ಸ್' ತನ್ನ ವರದಿಯಲ್ಲಿ 'ಪಾಕಿಸ್ತಾನಿ ಕಾಶ್ಮೀರ' ಎಂದು ಉಲ್ಲೇಖಿಸಿರುವುದಕ್ಕೆ ಭಾರತ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಅಮೆರಿಕದಲ್ಲಿರುವ ಭಾರತೀಯ ರಾಯಭಾರ…
ಚೀನಾ ಪಾಕಿಸ್ತಾನದ ಮೂಲಕ ಇರಾನ್ಗೆ 400 ರಾಕೆಟ್ ಲಾಂಚರ್ಗಳನ್ನು ಪೂರೈಸಿದೆ ಎಂಬ ವರದಿಗಳು ಜಾಗತಿಕ ಆತಂಕಕ್ಕೆ ಕಾರಣವಾಗಿವೆ. ಈ ಕುರಿತು…