ಜನ ಮನದ ನಾಡಿ ಮಿಡಿತ

Advertisement

ಭಗವಾನ್ ಶ್ರೀ ಕೃಷ್ಣ ಯುವಕರ ಆದರ್ಶ ಪುರುಷ : ಹೆಬ್ಬಾರ್

ಮುಲ್ಕಿ: ಶ್ರೀ ಕೃಷ್ಣ ಯುವಕರ ಆದರ್ಶ ಪುರುಷನಾಗಿ, ದೀನರ ದೈವವಾಗಿ, ಪಂಡಿತರ ಪಾಲಿಗೆ ಜ್ಞಾನಿಯಾಗಿ ಕಂಡು ಬರುತ್ತಾನೆ.

ಮಹಾಭಾರತದುದ್ದಕ್ಕೂ ತಾನು ಜನಿಸಿದ್ದು ಧರ್ಮ ರಕ್ಷಣೆಗೆ ಅಂತಲೇ ಹೇಳುತ್ತಾ ಹೋಗುವ ಕೃಷ್ಣ, ಧರ್ಮ ರಕ್ಷಣೆಯ ಜೊತೆಗೆ ಅನೇಕ ಕಾರ್ಯಗಳನ್ನು ಕೂಡ ಮಾಡುತ್ತಾನೆ. ತುಂಟತನ, ಪ್ರೀತಿ, ಕರುಣೆ, ಗಡಸುತನ, ಹಠ, ಧರ್ಮ, ಜ್ಞಾನ – ಎಲ್ಲ ಮೇಳೈಸಿರುವ ಏಕೈಕ ವ್ಯಕ್ತಿತ್ವವೆಂದರೆ ಅದು ಭಗವಾನ್ ಶ್ರೀ ಕೃಷ್ಣ , ಇವರ ಜನ್ಮ ದಿನವನ್ನು ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ ಅಭಿನಂದನೀಯ ಎಂದು ಕಾರ್ಯಕ್ರಮವನ್ನು ಉದ್ಘಾಟಿಸಿದ ಲಯನ್ಸ್ ಕ್ಲಬ್ ಬಪ್ಪನಾಡು ಇನ್ಸ್ಪಿರ್ ಇದರ ಸ್ಥಾಪಕ ಅಧ್ಯಕ್ಷ ಲ. ವೆಂಕಟೇಶ್ ಹೆಬ್ಬಾರ್ ಹೇಳಿದರು.

ಇವರು ಶಿಮಂತೂರಿನ ಶ್ರೀ ಶಾರದಾ ಸೆಂಟ್ರಲ್ ಸ್ಕೂಲ್ ನಲ್ಲಿ ನಡೆದ ಶ್ರೀ ಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿ ಶುಭ ಹಾರೈಸಿದರು.

ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ಶಾರದ ಸೊಸೈಟಿಯ ಅಧ್ಯಕ್ಷರಾದ ಧರ್ಮದರ್ಶಿ ಡಾ. ಹರಿಕೃಷ್ಣ ಪುನರೂರು ವಹಿಸಿ, ಸಂಸ್ಕತಿಯನ್ನು ಮುಂದುವರೆಸಿಕೊಂಡು ಹೋಗುವಲ್ಲಿ ವಿಫಲವಾದರೇ, ಭಾರತದ ಸನಾತನ ನಾಗರಿಕತೆಗಳು ಕಣ್ಮರೆಯಾಗುವುದರಲ್ಲಿ ಯಾವುದೇ ಅನುಮಾನವಿಲ್ಲ ಹೀಗಾಗಿ ಚಿಕ್ಕಂದಿನಿಂದಲೇ ಮಕ್ಕಳಿಗೆ ಸಂಪ್ರದಾಯಗಳನ್ನು ಕಲಿಸಿಕೊಡುವಂತಹ ಕೆಲಸವಾಗಬೇಕು ಎಂದು ಹೇಳಿದರು.

ಈ ಸಂಧರ್ಭದಲ್ಲಿ ವಿದ್ಯಾರ್ಥಿಗಳಿಗೆ ಮುದ್ದು ಕೃಷ್ಣ ಮತ್ತು ಬಾಲ ಕೃಷ್ಣ ಸ್ಪರ್ಧೆ ಹಾಗೂ ವಿದ್ಯಾರ್ಥಿಗಳ ತಾಯಿಯಂದಿರಿಗೆ ಯಶೋದಾ ಕೃಷ್ಣ ಸ್ಪರ್ಧೆ ಆಯೋಜಿಸಲಾಗಿತ್ತು.

ಮುದ್ದು ಕೃಷ್ಣ ಸ್ಪರ್ಧೆಯಲ್ಲಿ ಯುಕೆಜಿಯ ಗೌತಮಿ ಪಿ ಕೋಟ್ಯನ್ ಪ್ರಥಮ ಹಾಗೂ ಯುಕೆಜಿಯ ಮೃದ್ವಿ ವಿ ಗುಜರನ್ ದ್ವಿತೀಯ.
ಬಾಲ ಕೃಷ್ಣ ಸ್ಫರ್ಧೆಯಲ್ಲಿ ಎರಡನೇ ತರಗತಿಯ ಮಂಗಳಶ್ರೀ ಪ್ರಥಮ ಹಾಗೂ ಎರಡನೇ ತರಗತಿಯ ಧ್ಯಾನ್ ಟಿ ಶೆಟ್ಟಿ ದ್ವಿತೀಯ.
ಯಶೋದಾ ಕೃಷ್ಣ ಸ್ಪರ್ಧೆಯಲ್ಲಿ ಒಂದನೇ ತರಗತಿಯ ಅನ್ವಿ ಡಿ ಶೆಟ್ಟಿ ಮತ್ತು ಅವರ ತಾಯಿ ದೀಪಿಕಾ ಶೆಟ್ಟಿ ಪ್ರಥಮ ಹಾಗೂ ಎರಡನೇ ತರಗತಿಯ ಮಂಗಳಶ್ರಿ ಮತ್ತು ಅವರ ತಾಯಿ ಐಶ್ವರ್ಯ ದ್ವಿತೀಯ ಬಹುಮಾನ ಗಳಿಸಿದರು.

ಈ ಕಾರ್ಯಕ್ರದಲ್ಲಿ ಶ್ರೀ ಶಾರದ ಸೊಸೈಟಿಯ ಕಾರ್ಯದರ್ಶಿ ಪುರಂದರ ಶೆಟ್ಟಿಗಾರ್, ಕೋಶಾಧಿಕಾರಿ ಭುವನಾಭಿರಾಮ ಉಡುಪ, ನಿರ್ದೇಶಕರುಗಳಾದ ಪಟೇಲ್ ವಾಸುದೇವ ರಾವ್, ಸುರೇಶ್ ರಾವ್ ಪಿ ಎಸ್, ಶಾಲಾ ಸಂಚಾಲಕ ದೇವಪ್ರಸಾದ್ ಪುನರೂರು ಉಪಸ್ಥಿತರಿದ್ದರು.

ಪ್ರಾಂಶುಪಾಲರಾದ ಜಿತೇಂದ್ರ ವಿ ರಾವ್ ಸ್ವಾಗತಿಸಿ, ಸಹ ಶಿಕ್ಷಕಿ ದೀಕ್ಷಿತ ವಂದಿಸಿದರು, ಸಂದ್ಯಾ ನಿರೂಪಿಸಿದರು.

Leave a Reply

Your email address will not be published. Required fields are marked *

ಉಡುಪಿ: ಜಾನಪದ ಕಲಾವಿದ ಡಾ. ಗಣೇಶ್ ಗಂಗೊಳ್ಳಿ ಇನ್ನಿಲ್ಲ….!

ಉಡುಪಿ: ಕೆಎಸ್‌ಆರ್‌ಟಿಸಿ ಬಸ್ ಡಿ*ಕ್ಕಿ ಹೊಡೆದು ಮಹಿಳೆ ಮೃ*ತ್ಯು….!

ಸುಬ್ರಹ್ಮಣ್ಯ: ಕನ್ನಡಚಿತ್ರ ನಟ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ..!

ಮಂಗಳೂರು: ಕೌಡಿಚ್ಚಾರಿನಲ್ಲಿ ಪಿಕಪ್ ವಾಹನ ಮೋರಿಗೆ ಢಿ*ಕ್ಕಿ…!

ಮಂಗಳೂರು: ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿ*ಕ್ಕಿ; ಮಹಿಳೆಗೆ ಗಾಯ….!

ಬಂಟ್ವಾಳ: ವಸತಿಗೃಹದ ಮುಂಭಾಗದಲ್ಲಿದ್ದ ಸ್ಕೂಟರ್ ಕಳವು; ಇಬ್ಬರ ಬಂಧನ!

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

error: Content is protected !!