ಮುಲ್ಕಿ: ಶ್ರೀ ಕೃಷ್ಣ ಯುವಕರ ಆದರ್ಶ ಪುರುಷನಾಗಿ, ದೀನರ ದೈವವಾಗಿ, ಪಂಡಿತರ ಪಾಲಿಗೆ ಜ್ಞಾನಿಯಾಗಿ ಕಂಡು ಬರುತ್ತಾನೆ.
ಮಹಾಭಾರತದುದ್ದಕ್ಕೂ ತಾನು ಜನಿಸಿದ್ದು ಧರ್ಮ ರಕ್ಷಣೆಗೆ ಅಂತಲೇ ಹೇಳುತ್ತಾ ಹೋಗುವ ಕೃಷ್ಣ, ಧರ್ಮ ರಕ್ಷಣೆಯ ಜೊತೆಗೆ ಅನೇಕ ಕಾರ್ಯಗಳನ್ನು ಕೂಡ ಮಾಡುತ್ತಾನೆ. ತುಂಟತನ, ಪ್ರೀತಿ, ಕರುಣೆ, ಗಡಸುತನ, ಹಠ, ಧರ್ಮ, ಜ್ಞಾನ – ಎಲ್ಲ ಮೇಳೈಸಿರುವ ಏಕೈಕ ವ್ಯಕ್ತಿತ್ವವೆಂದರೆ ಅದು ಭಗವಾನ್ ಶ್ರೀ ಕೃಷ್ಣ , ಇವರ ಜನ್ಮ ದಿನವನ್ನು ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ ಅಭಿನಂದನೀಯ ಎಂದು ಕಾರ್ಯಕ್ರಮವನ್ನು ಉದ್ಘಾಟಿಸಿದ ಲಯನ್ಸ್ ಕ್ಲಬ್ ಬಪ್ಪನಾಡು ಇನ್ಸ್ಪಿರ್ ಇದರ ಸ್ಥಾಪಕ ಅಧ್ಯಕ್ಷ ಲ. ವೆಂಕಟೇಶ್ ಹೆಬ್ಬಾರ್ ಹೇಳಿದರು.
ಇವರು ಶಿಮಂತೂರಿನ ಶ್ರೀ ಶಾರದಾ ಸೆಂಟ್ರಲ್ ಸ್ಕೂಲ್ ನಲ್ಲಿ ನಡೆದ ಶ್ರೀ ಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿ ಶುಭ ಹಾರೈಸಿದರು.
ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ಶಾರದ ಸೊಸೈಟಿಯ ಅಧ್ಯಕ್ಷರಾದ ಧರ್ಮದರ್ಶಿ ಡಾ. ಹರಿಕೃಷ್ಣ ಪುನರೂರು ವಹಿಸಿ, ಸಂಸ್ಕತಿಯನ್ನು ಮುಂದುವರೆಸಿಕೊಂಡು ಹೋಗುವಲ್ಲಿ ವಿಫಲವಾದರೇ, ಭಾರತದ ಸನಾತನ ನಾಗರಿಕತೆಗಳು ಕಣ್ಮರೆಯಾಗುವುದರಲ್ಲಿ ಯಾವುದೇ ಅನುಮಾನವಿಲ್ಲ ಹೀಗಾಗಿ ಚಿಕ್ಕಂದಿನಿಂದಲೇ ಮಕ್ಕಳಿಗೆ ಸಂಪ್ರದಾಯಗಳನ್ನು ಕಲಿಸಿಕೊಡುವಂತಹ ಕೆಲಸವಾಗಬೇಕು ಎಂದು ಹೇಳಿದರು.
ಈ ಸಂಧರ್ಭದಲ್ಲಿ ವಿದ್ಯಾರ್ಥಿಗಳಿಗೆ ಮುದ್ದು ಕೃಷ್ಣ ಮತ್ತು ಬಾಲ ಕೃಷ್ಣ ಸ್ಪರ್ಧೆ ಹಾಗೂ ವಿದ್ಯಾರ್ಥಿಗಳ ತಾಯಿಯಂದಿರಿಗೆ ಯಶೋದಾ ಕೃಷ್ಣ ಸ್ಪರ್ಧೆ ಆಯೋಜಿಸಲಾಗಿತ್ತು.
ಮುದ್ದು ಕೃಷ್ಣ ಸ್ಪರ್ಧೆಯಲ್ಲಿ ಯುಕೆಜಿಯ ಗೌತಮಿ ಪಿ ಕೋಟ್ಯನ್ ಪ್ರಥಮ ಹಾಗೂ ಯುಕೆಜಿಯ ಮೃದ್ವಿ ವಿ ಗುಜರನ್ ದ್ವಿತೀಯ.
ಬಾಲ ಕೃಷ್ಣ ಸ್ಫರ್ಧೆಯಲ್ಲಿ ಎರಡನೇ ತರಗತಿಯ ಮಂಗಳಶ್ರೀ ಪ್ರಥಮ ಹಾಗೂ ಎರಡನೇ ತರಗತಿಯ ಧ್ಯಾನ್ ಟಿ ಶೆಟ್ಟಿ ದ್ವಿತೀಯ.
ಯಶೋದಾ ಕೃಷ್ಣ ಸ್ಪರ್ಧೆಯಲ್ಲಿ ಒಂದನೇ ತರಗತಿಯ ಅನ್ವಿ ಡಿ ಶೆಟ್ಟಿ ಮತ್ತು ಅವರ ತಾಯಿ ದೀಪಿಕಾ ಶೆಟ್ಟಿ ಪ್ರಥಮ ಹಾಗೂ ಎರಡನೇ ತರಗತಿಯ ಮಂಗಳಶ್ರಿ ಮತ್ತು ಅವರ ತಾಯಿ ಐಶ್ವರ್ಯ ದ್ವಿತೀಯ ಬಹುಮಾನ ಗಳಿಸಿದರು.
ಈ ಕಾರ್ಯಕ್ರದಲ್ಲಿ ಶ್ರೀ ಶಾರದ ಸೊಸೈಟಿಯ ಕಾರ್ಯದರ್ಶಿ ಪುರಂದರ ಶೆಟ್ಟಿಗಾರ್, ಕೋಶಾಧಿಕಾರಿ ಭುವನಾಭಿರಾಮ ಉಡುಪ, ನಿರ್ದೇಶಕರುಗಳಾದ ಪಟೇಲ್ ವಾಸುದೇವ ರಾವ್, ಸುರೇಶ್ ರಾವ್ ಪಿ ಎಸ್, ಶಾಲಾ ಸಂಚಾಲಕ ದೇವಪ್ರಸಾದ್ ಪುನರೂರು ಉಪಸ್ಥಿತರಿದ್ದರು.
ಪ್ರಾಂಶುಪಾಲರಾದ ಜಿತೇಂದ್ರ ವಿ ರಾವ್ ಸ್ವಾಗತಿಸಿ, ಸಹ ಶಿಕ್ಷಕಿ ದೀಕ್ಷಿತ ವಂದಿಸಿದರು, ಸಂದ್ಯಾ ನಿರೂಪಿಸಿದರು.
ಹೊಸದಿಲ್ಲಿ: ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..! ಪ್ರಖ್ಯಾತ ಭಾಗವತ, ಸಂಘಟಕ ಪಟ್ಲ ಸತೀಶ್ ಶೆಟ್ಟಿ…
ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…
ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…
ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ…
ಮೂಲತಃ ಪುತ್ತೂರು ಬೆಂದ್ರುತೀರ್ಥ ನಿವಾಸಿ, ಪ್ರಸಕ್ತ ರಾಯಿ ಸಮೀಪದ ಮಾಬೆಟ್ಟು ಎಂಬಲ್ಲಿ ವಾಸವಾಗಿದ್ದ ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್…
ದೆಹಲಿ ಕರ್ನಾಟಕ ಸಂಘದಿಂದ ಖ್ಯಾತ ಯಕ್ಷಗಾನ ಭಾಗವತರಾದ ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ…