ಕರ್ನಾಟಕ ರಾಜ್ಯಪ್ರಶಸ್ತಿ ಪುರಸ್ಕೃತ ಹಳೆಯಂಗಡಿ ಶ್ರೀ ವಿದ್ಯಾವಿನಾಯಕ ಯುವಕ ಮಂಡಲದ ಅಜೀವ ಸದಸ್ಯರಾಗಿ , ಅಧ್ಯಕ್ಷರಾಗಿ, ವಿವಿಧ ಹುದ್ದೆಗಳನ್ನು ಅಲಂಕರಿಸಿ , ಸಲಹಾ ಸಮಿತಿಯ ಸದಸ್ಯರಾಗಿ, ದೇವಾಡಿಗ ಸಮಾಜ ಸೇವಾ ಸಂಘ (ರಿ), ಪಾವಂಜೆ ಇದರ ಸ್ಥಾಪಕ ಸದಸ್ಯರಾಗಿ, ಅಧ್ಯಕ್ಷರಾಗಿ, ಕೋಶಾಧಿಕಾರಿಯಾಗಿ, ಸಂಘಟನಾ ಕಾರ್ಯದರ್ಶಿಯಾಗಿ, ಪ್ರಸ್ತುತ ಸಲಹೆಗಾರರಾಗಿ, ಕಟ್ಟಡ ಸಮಿತಿಯ ಉಪಾಧ್ಯಕ್ಷರಾಗಿ, ಪಾವಂಜೆ ಸರ್ವಶಕ್ತಿ ವ್ಯಾಯಾಮ ಶಾಲೆಯ ಅಧ್ಯಕ್ಷರಾಗಿ, ಪಾವಂಜೆ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಸದಸ್ಯರಾಗಿ ಸೇವೆ ಸಲ್ಲಿಸಿದ, ಹಲವಾರು ಸಂಘ-ಸಂಸ್ಥೆಗಳಲ್ಲಿ ತೊಡಗಿಸಿಕೊಂಡ, ನಾಟಕ, ರೂಪಕ, ನೃತ್ಯ, ಯಕ್ಷಗಾನ ಕಲಾರಾಧನೆಯಲ್ಲಿ ತನ್ನದೇ ಆದ ಕಲಾಚಾತುರ್ಯ ಪಡೆದು ಇತ್ತೀಚೆಗೆ ದೈವಾಧೀನರಾದ ಶ್ರೀ ಸೋಮನಾಥ ದೇವಾಡಿಗ, “ಶಿವಸ್ವಾಮಿ ನಿಲಯ”, ಪಾವಂಜೆ ಇವರ ಆತ್ಮಕ್ಕೆ ಚಿರಶಾಂತಿ ಕೋರಿ ಸಾರ್ವಜನಿಕ ಶ್ರದ್ಧಾಂಜಲಿ ಸಭೆಯು ಆದಿತ್ಯವಾರ ಸಂಜೆ 5.30 ಗಂಟೆಗೆ ಶ್ರೀ ವಿದ್ಯಾವಿನಾಯಕ ಯುವಕ ಮಂಡಲದ ಸಭಾಂಗಣದಲ್ಲಿ ಜರುಗಿತು.
ಈ ಸಂತಾಪ ಸೂಚಿ ಸಭೆಯಲ್ಲಿ ವಿವಿಧ ಸಂಘ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸಿರುವ ಭಾಸ್ಕರ್ ಸಾಲ್ಯಾನ್, ಮೀರಾ ಬಾಯಿ ಕೆ., ಸತೀಶ್ ಎನ್ ಇಂದಿರಾನಗರ, ಮೋಹನ್ ಸುವರ್ಣ, ರಾಮದಾಸ್ ಪಾವಂಜೆ ಇವರು ಅಗಲಿದ ಸೋಮನಾಥ ದೇವಾಡಿಗ ಇವರ ಬಗ್ಗೆ ಗುಣಗಾನ ಮಾಡಿದರು.
ಶ್ರೀ ಸೋಮನಾಥ ದೇವಾಡಿಗ ಕುಟುಂಬಸ್ಥರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಯುವಕ ಮಂಡಲದ ಅಧ್ಯಕ್ಷರಾದ ನಾಗೇಶ್ ಟಿ ಜಿ, ಜಂಟಿ ಸಂಸ್ಥೆಯ ಪದಾಧಿಕಾರಿಗಳು, ಟ್ರಸ್ಟಿಗಳು, ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.
ಸುವರ್ಣ ಮಹೋತ್ಸವ ಸಮಿತಿಯ ಪ್ರಧಾನ ಕಾರ್ಯದರ್ಶಿ ಶ್ರೀರಾಮದಾಸ್ ಪಾವಂಜೆ ಕಾರ್ಯಕ್ರಮವನ್ನು ನಿರೂಪಿಸಿದರು.
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪೋಷಕ ಸದಸ್ಯರೂ, ಬಂಟ್ಸ್ ಅಸೋಸಿಯೇಷನ್ ನಾರ್ತ್ ಅಮೆರಿಕಾ (BANA) ಅಧ್ಯಕ್ಷರೂ ಆದ ಶ್ರೀ ಮಂಜುನಾಥ್…
ಉಡುಪಿ ತಾಲೂಕಿನಲ್ಲಿ ಕಡಲ್ಕೊರೆತದಿಂದ ಹಾನಿಗೊಳಗಾಗಿರುವ ಹೆಜಮಾಡಿ, ಪಡುಬಿದ್ರಿ, ಎರ್ಮಾಳು, ಕಾಪು, ಪೊಲಿಪು ಹಾಗೂ ಕಟಪಾಡಿ-ಮಟ್ಟು ಪ್ರದೇಶಗಳಿಗೆ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ.…
ಮಳೆ ಸುರಿದರೆ ಸಾಕು, ಬಂಟ್ವಾಳ ತಾಲೂಕಿನ ಮಾಣಿ ಸಮೀಪದ ಪೆರಾಜೆ ಗ್ರಾಮದ ಜೋಗಿಬೆಟ್ಟು ರಸ್ತೆಯಲ್ಲಿ ಸಂಚಾರ ದುಸ್ತರವಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿಗೆ…
ಭಾರತ ಮತ್ತು ಅಮೆರಿಕಾಗಳು ಅನೇಕ ಸಾಮಾನ್ಯ ಅಂಶಗಳನ್ನು ಹೊಂದಿವೆ. ಅಮೆರಿಕಾ ಅವಕಾಶಗಳ ನಗರ. ಇಲ್ಲಿಗೆ ವಲಸೆ ಬಂದು ವಾಸಿಸುತ್ತಿರುವ ಭಾರತೀಯರು…
ವಾಹನ ದಟ್ಟಣೆ ಹೆಚ್ಚುತ್ತಿರುವ ನಗರದಲ್ಲಿ ಸುಗಮ ಸಂಚಾರಕ್ಕೆ ಸ್ಮಾರ್ಟ್ ಸಿಟಿ ಯೋಜನೆಯಡಿ 181ಕ್ಕೂ ಅಧಿಕ ಎಐ ಸಿ.ಸಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ.…
ರಾಯಿ ಗ್ರಾಮದ ಪಾಂಚಕೋಡಿ ನಿವಾಸಿ ಜೋಸೆಫ್ ಪಿಂಟೋ ಎಂಬವರ ಪುತ್ರ ಜೀವನ್ ಪಿಂಟೊ ಅವರ ಚಪ್ಪಲಿ ಮತ್ತು ಟಾರ್ಚ್ ಶನಿವಾರ…