ಮುಲ್ಕಿ: ಪುನರೂರು ಪ್ರತಿಷ್ಠಾನ ಹಾಗೂ ಜನ ವಿಕಾಸ ಸಮಿತಿ ಆಶ್ರಯದಲ್ಲಿ ಶಿಕ್ಷಕ ಸಪರ್ಯಾ -2023 ಕಾರ್ಯಕ್ರಮ ಮುಲ್ಕಿಯ ಪುನರೂರು ಟೂರಿಸ್ಟ್ ಹೋಮ್ ಸಭಾಂಗಣದಲ್ಲಿ ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪುನರೂರು ಪ್ರತಿಷ್ಠಾನದ ಗೌರವಾಧ್ಯಕ್ಷ ಧರ್ಮದರ್ಶಿ ಡಾ. ಹರಿಕೃಷ್ಣ ಪುನರೂರು ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ಪಡುಬೆಳ್ಳೆ ಶ್ರೀ ನಾರಾಯಣ ಗುರು ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತಾಧಿಕಾರಿ ಜಿನ್ ರಾಜ್ ಸಾಲ್ಯಾನ್ ಮಾತನಾಡಿ ವಿದ್ಯಾರ್ಥಿಗಳ ಜೀವನದ ಏಳಿಗೆಯಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದಾಗಿದೆ, ಮಕ್ಕಳಿಗೆ ಸಮಾಜದಲ್ಲಿ ಉನ್ನತ ಮಟ್ಟದ ಸ್ಥಾನಮಾನ ಗಳಿಸಲು ಶಿಕ್ಷಕರ ಶ್ರಮ ಅನನ್ಯವಾಗಿದ್ದು ದೇಶ ಸೇವೆ ಮಾಡಲು ಶಿಕ್ಷಣ ನೀಡುವ ಎನ್ಸಿಸಿ ಶಿಕ್ಷಕರಿಗೆ ಶಿಕ್ಷಕರ ದಿನಾಚರಣೆಯಂದು ಗೌರವ ಶ್ಲಾಘನೀಯ ಎಂದರು.
ವೇದಿಕೆಯಲ್ಲಿ ಮುಲ್ಕಿ ಲಯನ್ಸ್ ಕ್ಲಬ್ ಅಧ್ಯಕ್ಷೆ ಶೀತಲ್ ಸುಶೀಲ್, ಪುನರೂರು ಪ್ರತಿಷ್ಠಾನದ ಗೌರವಾಧ್ಯಕ್ಷೆ, ಎಚ್.ಕೆ.ಉಷಾ ರಾಣಿ, ಅಧ್ಯಕ್ಷ ದೇವ ಪ್ರಸಾದ್ ಪುನರೂರು, ಪ್ರಧಾನ ಕಾರ್ಯದರ್ಶಿ ಶ್ರೇಯಾ ಪುನರೂರು,ಜಿತೇಂದ್ರ ವಿ ರಾವ್,ಪ್ರಾಣೇಶ್ ಭಟ್ ದೇಂದಡ್ಕ, ಜನವಿಕಾಸ ಸಮಿತಿ ಅಧ್ಯಕ್ಷೆ ಶೋಭಾ ರಾವ್ ಮತ್ತಿತರರು ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಮುಲ್ಕಿ ತಾಲ್ಲೂಕಿನ ಎನ್ಸಿಸಿ ಅಧಿಕಾರಿಗಳಾದ ಕ್ಯಾ. ರಾಜೇಶ್ ಶೆಟ್ಟಿಗಾರ್ ವಿಜಯಾ ಕಾಲೇಜು ಮುಲ್ಕಿ, ಲೆ.ಕ. ಪುರುಷೋತ್ತಮ ಕೆವಿ ಪೊಂಪೈ ಕಾಲೇಜ್ ಐಕಳ, ಚೀಫ್ ಆಫೀಸರ್ ಗಂಗಾಧರ ಪೂಜಾರಿ, ಶ್ರೀ ನಾರಾಯಣಗುರು ಸಂಯುಕ್ತ ಪದವಿ ಪೂರ್ವ ಕಾಲೇಜು ಮುಲ್ಕಿ, ಸೆಕೆಂಡ್ ಆಫೀಸರ್ ಪ್ರವೀಣ್ ಪೂಜಾರಿ ಮೊರಾರ್ಜಿ ದೇಸಾಯಿ ವಸತಿ ಶಾಲೆ ಕಮ್ಮಜೆ, ಕೇರ್ ಟೇಕರ್ ಹರೀಶ್ ಬಿ ಶ್ರೀ ದುರ್ಗಾಪರಮೇಶ್ವರೀ ಕಾಲೇಜು ಪ್ರೌಡ ಶಾಲೆ ವಿಭಾಗ ಕಟೀಲು ರವರನ್ನು ಗೌರವಿಸಲಾಯಿತು. ಪುನರೂರು ಪ್ರತಿಷ್ಠಾನದ ಅಧ್ಯಕ್ಷ ದೇವಪ್ರಸಾದ್ ಪುನರೂರು ಸ್ವಾಗತಿಸಿದರು, ಪ್ರಾಣೇಶ್ ಭಟ್ ದೇಂದಡ್ಕ, ಧನ್ಯವಾದ ಅರ್ಪಿಸಿದರು, ಜಿತೇಂದ್ರ ವಿ ರಾವ್ ನಿರೂಪಿಸಿದರು.
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪೋಷಕ ಸದಸ್ಯರೂ, ಬಂಟ್ಸ್ ಅಸೋಸಿಯೇಷನ್ ನಾರ್ತ್ ಅಮೆರಿಕಾ (BANA) ಅಧ್ಯಕ್ಷರೂ ಆದ ಶ್ರೀ ಮಂಜುನಾಥ್…
ಉಡುಪಿ ತಾಲೂಕಿನಲ್ಲಿ ಕಡಲ್ಕೊರೆತದಿಂದ ಹಾನಿಗೊಳಗಾಗಿರುವ ಹೆಜಮಾಡಿ, ಪಡುಬಿದ್ರಿ, ಎರ್ಮಾಳು, ಕಾಪು, ಪೊಲಿಪು ಹಾಗೂ ಕಟಪಾಡಿ-ಮಟ್ಟು ಪ್ರದೇಶಗಳಿಗೆ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ.…
ಮಳೆ ಸುರಿದರೆ ಸಾಕು, ಬಂಟ್ವಾಳ ತಾಲೂಕಿನ ಮಾಣಿ ಸಮೀಪದ ಪೆರಾಜೆ ಗ್ರಾಮದ ಜೋಗಿಬೆಟ್ಟು ರಸ್ತೆಯಲ್ಲಿ ಸಂಚಾರ ದುಸ್ತರವಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿಗೆ…
ಭಾರತ ಮತ್ತು ಅಮೆರಿಕಾಗಳು ಅನೇಕ ಸಾಮಾನ್ಯ ಅಂಶಗಳನ್ನು ಹೊಂದಿವೆ. ಅಮೆರಿಕಾ ಅವಕಾಶಗಳ ನಗರ. ಇಲ್ಲಿಗೆ ವಲಸೆ ಬಂದು ವಾಸಿಸುತ್ತಿರುವ ಭಾರತೀಯರು…
ವಾಹನ ದಟ್ಟಣೆ ಹೆಚ್ಚುತ್ತಿರುವ ನಗರದಲ್ಲಿ ಸುಗಮ ಸಂಚಾರಕ್ಕೆ ಸ್ಮಾರ್ಟ್ ಸಿಟಿ ಯೋಜನೆಯಡಿ 181ಕ್ಕೂ ಅಧಿಕ ಎಐ ಸಿ.ಸಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ.…
ರಾಯಿ ಗ್ರಾಮದ ಪಾಂಚಕೋಡಿ ನಿವಾಸಿ ಜೋಸೆಫ್ ಪಿಂಟೋ ಎಂಬವರ ಪುತ್ರ ಜೀವನ್ ಪಿಂಟೊ ಅವರ ಚಪ್ಪಲಿ ಮತ್ತು ಟಾರ್ಚ್ ಶನಿವಾರ…