ಜನ ಮನದ ನಾಡಿ ಮಿಡಿತ

Advertisement

ಇಂಡಿಯಾ ಇನ್ಮುಂದೆ ಭಾರತ.. ಭಾರತ ಬದಲಾದ್ರೆ ಪಾಕಿಸ್ತಾನಕ್ಕೆ ಲಾಭ; ‘ಇಂಡಿಯಾ’ ಮೇಲೆ ಹಕ್ಕು ಚಲಾಯಿಸಲು ಪ್ಲಾನ್‌

ಇಂಡಿಯಾ ಇನ್ಮುಂದೆ ಭಾರತ.. ದೇಶದ ಮರುನಾಮಕರಣದ ವಿಚಾರ ಕೇವಲ ಭಾರತದಲ್ಲಷ್ಟೇ ಅಲ್ಲ ಪಾಕಿಸ್ತಾನದಲ್ಲೂ ಬಹಳಷ್ಟು ಚರ್ಚೆಯಾಗಿದೆ. ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಇಂಡಿಯಾ ಅನ್ನೋ ದೇಶದ ಹೆಸರನ್ನು ಭಾರತ್ ಎಂದು ಬದಲಾಯಿಸಲಿದೆ ಎನ್ನಲಾಗಿದೆ.

ಈ ಮರುನಾಮಕರಣದ ವಿವಾದಕ್ಕೆ ದೇಶಾದ್ಯಂತ ಪರ, ವಿರೋಧದ ಚರ್ಚೆಯಾಗುತ್ತಿದೆ. ಇನ್ನೂ ಭಾರತದ ಸಂಸತ್‌ನಲ್ಲಿ ಮರುನಾಮಕರಣದ ವಿಚಾರವೇ ಪ್ರಸ್ತಾಪವಾಗಿಲ್ಲ. ಸಂವಿಧಾನದಲ್ಲಿ ತಿದ್ದುಪಡಿಯೂ ಆಗಿಲ್ಲ. ಅಷ್ಟರಲ್ಲಾಗಲೇ ಇಂಡಿಯಾ ಮೇಲೆ ನೆರೆರಾಷ್ಟ್ರ ಪಾಕಿಸ್ತಾನದ ಕಣ್ಣು ಬಿದ್ದಿದೆ.

ಒಂದು ವೇಳೆ ದೇಶದ ಹೆಸರನ್ನು ಭಾರತ ಬದಲಾವಣೆ ಮಾಡಿದರೆ ಇಂಡಿಯಾ ಹೆಸರಿನ ಮೇಲೆ ಹಕ್ಕು ಸಾಧಿಸಲು ಪಾಕಿಸ್ತಾನ ಚಿಂತನೆ ನಡೆಸಿದೆ. ವಿಶ್ವಸಂಸ್ಥೆಯಲ್ಲಿ ಭಾರತಕ್ಕೆ ಇಂಡಿಯಾ ಬದಲು ಭಾರತ ಎಂದು ಮಾನ್ಯತೆ ಸಿಕ್ಕರೆ ಆಗ ಪಾಕಿಸ್ತಾನ ತನ್ನ ಹಕ್ಕು ಮಂಡಿಸಲು ಮುಂದಾಗಿದೆ. ಪಾಕಿಸ್ತಾನ ಕೂಡ ಇಂಡಸ್ ನದಿಯ ಪಾತ್ರದಲ್ಲಿದೆ. ಹೀಗಾಗಿ ಇಂಡಿಯಾ ಹೆಸರಿನ ಮೇಲೆ ಹಕ್ಕು ಸಾಧಿಸಲು ಪಾಕಿಸ್ತಾನ ಮಂಡಿಸುವ ಸಾಧ್ಯತೆ ಇದೆ.

ಭಾರತಕ್ಕೆ ಸ್ವಾತಂತ್ರ್ಯ ಸಿಗೋ ಮುನ್ನವೇ ಪಾಕಿಸ್ತಾನದ ಪಿತಾಮಹ ಮಹಮ್ಮದ್ ಅಲಿ ಜಿನ್ನಾ ಅವರು ಇಂಡಿಯಾ ಹೆಸರಿಗೆ ವಿರೋಧ ವ್ಯಕ್ತಪಡಿಸಿದ್ದರು. ನಮ್ಮದು ಪಾಕಿಸ್ತಾನ, ಇಂಡಿಯಾ ಹಿಂದೂಸ್ತಾನ. ಭಾರತವನ್ನು ಹಿಂದೂಸ್ತಾನ ಎಂದು ಕರೆಯಬೇಕೇ ವಿನಃ ಇಂಡಿಯಾ ಅಲ್ಲ ಎಂದು ಮಹಮ್ಮದ್ ಅಲಿ ಜಿನ್ನಾ ಹೇಳಿದ್ದರು. ಆದರೆ ಸಂವಿಧಾನದ ರಚನಾ ಸಭೆಯಲ್ಲಿ ಇಂಡಿಯಾ ಹಾಗೂ ಭಾರತ ಎಂದು ಹೆಸರಿಡಲು ಹೆಚ್ಚು ವೋಟ್ ಹಾಕಲಾಯಿತು. ಹೀಗಾಗಿ ಸಂವಿಧಾನದ ಆರ್ಟಿಕಲ್ 1 ರಲ್ಲಿ ಇಂಡಿಯಾ ಅಂದರೆ ಭಾರತವು ರಾಜ್ಯಗಳ ಒಕ್ಕೂಟ ಎಂದು ಉಲ್ಲೇಖಿಸಲಾಗಿದೆ.

Leave a Reply

Your email address will not be published. Required fields are marked *

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

ಮಂಗಳೂರು: ಅಕ್ರಮ ಆನೆದಂತಗಳ ಮಾರಾಟ; ಆರೋಪಿಗಳ ಬಂಧನ..!

ಬೆಂಗಳೂರು: ಕಾರ್ಕಳದಲ್ಲಿ ತುಳು ಭವನ ನಿರ್ಮಾಣಕ್ಕೆ ಅನುದಾನ ಬಿಡುಗಡೆಗೊಳಿಸುವಂತೆ ಮನವಿ..!

ಬೆಂಗಳೂರು: ಭೀಕರ ರಸ್ತೆ ಅಪಘಾತದಲ್ಲಿ ಕೇರಳ ಮೂಲದ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಮೃತ್ಯು…!

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ತಮಿಳುನಾಡು ಮುಖ್ಯಮಂತ್ರಿ ವಿಜಯ್ ಭೇಟಿ…!

error: Content is protected !!