ಕುಂದಾಪುರ; ಬೆಂಗಳೂರು ಮೈಸೂರು ಮಂಗಳೂರಿಗೆ ಬರುತಿದ್ದ ಗಾಡಿ ಸಂಖ್ಯೆ 16585 ಎಕ್ಸ್ಪ್ರೆಸ್ ರೈಲನ್ನು ಮುರುಡೇಶ್ವರದವರೆಗೆ ವಿಸ್ತರಿಸುವಂತೆ ಭಾರತೀಯ ರೈಲ್ವೇ ಇಲಾಖೆ ಆದೇಶ ಹೊರಡಿಸಿದೆ.
ಈ ಆದೇಶದಿಂದಾಗಿ ಕುಂದಾಪುರ ಉಡುಪಿ ಸೇರಿದಂತೆ ಕರಾವಳಿ ಕರ್ನಾಟಕಕ್ಕೆ ರಾಜದಾನಿ ಬೆಂಗಳೂರು ಹಾಗೂ ಮೈಸೂರಿಗೆ ನಿತ್ಯ ರೈಲೊಂದು ಸಿಕ್ಕಂತಾಗಿದೆ. ಕೆಲ ವರ್ಷದಿಂದ ಸತತವಾಗಿ ಈ ಹೋರಾಟ ಕೈಗೆತ್ತಿಕೊಂಡಿದ್ದ ಕುಂದಾಪುರ ರೈಲ್ವೇ ಸಮಿತಿ, ದೆಹಲಿ ಮಟ್ಟದಲ್ಲಿ ನಿರಂತರ ಕೆಲಸ ಮಾಡಿದ್ದ ಮೈಸೂರು ಸಂಸದ ಪ್ರತಾಪ್ ಸಿಂಹ ಪ್ರಯತ್ನಕ್ಕೆ ಕೊನೆಗೂ ಯಶಸ್ಸು ಲಭಿಸಿದೆ.
ಈಗಿರುವ ಕರಾವಳಿಯ ಜೀವನಾಡಿ ಪಂಚಗಂಗಾ ಎಕ್ಸ್ಪ್ರೆಸ್ ಬೆಂಗಳೂರಿನಿಂದ ಬೇಗನೆ ಹೊರಡುತ್ತದೆ ಹಾಗೂ ಅದರಲ್ಲಿ ಟಿಕೇಟು ಸಿಗುವುದಿಲ್ಲ ಎಂಬ ದೂರುಗಳಿಗೆ ಈಗ ಪರಿಹಾರ ಸಿಕ್ಕಂತಾಗಿದ್ದು, ಬೈಯಪ್ಪನ ಹಳ್ಳಿಯಿಂದ ಹೊರಟು ರಾತ್ರಿ ಒಂಬತ್ತು ಘಂಟೆಗೆ ಮೆಜೆಸ್ಟಿಕ್ ಬರುವ ರೈಲು ಮೈಸೂರು ಮಾರ್ಗವಾಗಿ ಮಂಗಳೂರು ಉಡುಪಿ ಕುಂದಾಪುರ ಮೂಲಕ ಸಂಚರಿಸಲಿದೆ.
ಮದ್ಯಾಹ್ನ ಮೂರುವರೆ ಸುಮಾರಿಗೆ ಕರಾವಳಿಯಿಂದ ಹೊರಡುವ ರೈಲು ಬೆಳಿಗ್ಗೆ ಆರಕ್ಕೆ ಬೆಂಗಳೂರು ತಲುಪಲಿದೆ. ವಾರಕ್ಕೆ ಮೂರು ದಿನ ಮಂಗಳೂರಿನವರೆಗೆ ಮಾತ್ರ ಓಡುತಿದ್ದ ಈ ರೈಲನ್ನು ಆರೂದಿನ ಓಡುವಂತೆ ಮಾಡಿ ಕುಂದಾಪುರ ಕಾರವಾರಕ್ಕೆ ವಿಸ್ತರಣೆ ಮಾಡಬೇಕು ಎಂದು ಸಂಸದ ಪ್ರತಾಪ್ ಸಿಂಹ ಸತತವಾಗಿ ಪ್ರಯತ್ನಿಸಿದ್ದು , ಅವರ ಬೇಡಿಕೆಯಂತೆ ವಾರಕ್ಕೆ ಮೂರು ದಿನದ ಬದಲು ಆರು ದಿನ ಓಡುವಂತೆ ಭಾರತೀಯ ರೈಲ್ವೇ ಕಳೆದ ವರ್ಷವೇ ಆದೇಶ ಮಾಡಿತ್ತು .ಆದರೆ ರೈಲಿನ ಉಡುಪಿ ಕುಂದಾಪುರ ಕಾರವಾರ ವಿಸ್ತರಣೆ ಮಾತ್ರ ವಿಳಂಭವಾಗುತ್ತಲೇ ಇದ್ದ ಕಾರಣ ,ಕುಂದಾಪುರ ರೈಲ್ವೇ ಸಮಿತಿ ನಿರಂತರವಾಗಿ ಕೊಂಕಣ ರೈಲ್ವೆ, ದಕ್ಷಿಣ ರೈಲ್ವೇ ಹಾಗು ನೈರುತ್ಯ ರೈಲ್ವೇ ಜತೆ ಬೆಂಗಳೂರಿಗೆ ಹೆಚ್ಚುವರಿ ರೈಲು ಸೇವೆಯ ಹೋರಾಟ ನಡೆಸಿತ್ತು .
ಸಂಸದರ ಯತ್ನದಿಂದ ಎಲ್ಲಾ ಸಮಸ್ಯೆಗಳನ್ನೂ ಮೀರಿ ರೈಲ್ವೇ ಸಚಿವರ ಒಪ್ಪಿಗೆ ಪಡೆದುದಲ್ಲದೇ ರೈಲ್ವೇ ಅದಿಕಾರಿಗಳ ಸಭೆ ಕರೆದು ದಸರಾ ಒಳಗೆ ರೈಲು ಓಡಲೇ ಬೇಕೆಂದು ಕಟ್ಟು ನಿಟ್ಟಿನ ಸೂಚನೆ ರವಾನಿಸಿದ ಪರಿಣಾಮ ಇಲಾಖೆ ಈ ರೈಲಿನ ವಿಸ್ತರಣೆಗೆ ಆದೇಶ ನೀಡಿದೆ.
ಹೊಸದಿಲ್ಲಿ: ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..! ಪ್ರಖ್ಯಾತ ಭಾಗವತ, ಸಂಘಟಕ ಪಟ್ಲ ಸತೀಶ್ ಶೆಟ್ಟಿ…
ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…
ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…
ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ…
ಮೂಲತಃ ಪುತ್ತೂರು ಬೆಂದ್ರುತೀರ್ಥ ನಿವಾಸಿ, ಪ್ರಸಕ್ತ ರಾಯಿ ಸಮೀಪದ ಮಾಬೆಟ್ಟು ಎಂಬಲ್ಲಿ ವಾಸವಾಗಿದ್ದ ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್…
ದೆಹಲಿ ಕರ್ನಾಟಕ ಸಂಘದಿಂದ ಖ್ಯಾತ ಯಕ್ಷಗಾನ ಭಾಗವತರಾದ ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ…