ಕುಂದಾಪುರ; ಬೆಂಗಳೂರು ಮೈಸೂರು ಮಂಗಳೂರಿಗೆ ಬರುತಿದ್ದ ಗಾಡಿ ಸಂಖ್ಯೆ 16585 ಎಕ್ಸ್ಪ್ರೆಸ್ ರೈಲನ್ನು ಮುರುಡೇಶ್ವರದವರೆಗೆ ವಿಸ್ತರಿಸುವಂತೆ ಭಾರತೀಯ ರೈಲ್ವೇ ಇಲಾಖೆ ಆದೇಶ ಹೊರಡಿಸಿದೆ.
ಈ ಆದೇಶದಿಂದಾಗಿ ಕುಂದಾಪುರ ಉಡುಪಿ ಸೇರಿದಂತೆ ಕರಾವಳಿ ಕರ್ನಾಟಕಕ್ಕೆ ರಾಜದಾನಿ ಬೆಂಗಳೂರು ಹಾಗೂ ಮೈಸೂರಿಗೆ ನಿತ್ಯ ರೈಲೊಂದು ಸಿಕ್ಕಂತಾಗಿದೆ. ಕೆಲ ವರ್ಷದಿಂದ ಸತತವಾಗಿ ಈ ಹೋರಾಟ ಕೈಗೆತ್ತಿಕೊಂಡಿದ್ದ ಕುಂದಾಪುರ ರೈಲ್ವೇ ಸಮಿತಿ, ದೆಹಲಿ ಮಟ್ಟದಲ್ಲಿ ನಿರಂತರ ಕೆಲಸ ಮಾಡಿದ್ದ ಮೈಸೂರು ಸಂಸದ ಪ್ರತಾಪ್ ಸಿಂಹ ಪ್ರಯತ್ನಕ್ಕೆ ಕೊನೆಗೂ ಯಶಸ್ಸು ಲಭಿಸಿದೆ.
ಈಗಿರುವ ಕರಾವಳಿಯ ಜೀವನಾಡಿ ಪಂಚಗಂಗಾ ಎಕ್ಸ್ಪ್ರೆಸ್ ಬೆಂಗಳೂರಿನಿಂದ ಬೇಗನೆ ಹೊರಡುತ್ತದೆ ಹಾಗೂ ಅದರಲ್ಲಿ ಟಿಕೇಟು ಸಿಗುವುದಿಲ್ಲ ಎಂಬ ದೂರುಗಳಿಗೆ ಈಗ ಪರಿಹಾರ ಸಿಕ್ಕಂತಾಗಿದ್ದು, ಬೈಯಪ್ಪನ ಹಳ್ಳಿಯಿಂದ ಹೊರಟು ರಾತ್ರಿ ಒಂಬತ್ತು ಘಂಟೆಗೆ ಮೆಜೆಸ್ಟಿಕ್ ಬರುವ ರೈಲು ಮೈಸೂರು ಮಾರ್ಗವಾಗಿ ಮಂಗಳೂರು ಉಡುಪಿ ಕುಂದಾಪುರ ಮೂಲಕ ಸಂಚರಿಸಲಿದೆ.
ಮದ್ಯಾಹ್ನ ಮೂರುವರೆ ಸುಮಾರಿಗೆ ಕರಾವಳಿಯಿಂದ ಹೊರಡುವ ರೈಲು ಬೆಳಿಗ್ಗೆ ಆರಕ್ಕೆ ಬೆಂಗಳೂರು ತಲುಪಲಿದೆ. ವಾರಕ್ಕೆ ಮೂರು ದಿನ ಮಂಗಳೂರಿನವರೆಗೆ ಮಾತ್ರ ಓಡುತಿದ್ದ ಈ ರೈಲನ್ನು ಆರೂದಿನ ಓಡುವಂತೆ ಮಾಡಿ ಕುಂದಾಪುರ ಕಾರವಾರಕ್ಕೆ ವಿಸ್ತರಣೆ ಮಾಡಬೇಕು ಎಂದು ಸಂಸದ ಪ್ರತಾಪ್ ಸಿಂಹ ಸತತವಾಗಿ ಪ್ರಯತ್ನಿಸಿದ್ದು , ಅವರ ಬೇಡಿಕೆಯಂತೆ ವಾರಕ್ಕೆ ಮೂರು ದಿನದ ಬದಲು ಆರು ದಿನ ಓಡುವಂತೆ ಭಾರತೀಯ ರೈಲ್ವೇ ಕಳೆದ ವರ್ಷವೇ ಆದೇಶ ಮಾಡಿತ್ತು .ಆದರೆ ರೈಲಿನ ಉಡುಪಿ ಕುಂದಾಪುರ ಕಾರವಾರ ವಿಸ್ತರಣೆ ಮಾತ್ರ ವಿಳಂಭವಾಗುತ್ತಲೇ ಇದ್ದ ಕಾರಣ ,ಕುಂದಾಪುರ ರೈಲ್ವೇ ಸಮಿತಿ ನಿರಂತರವಾಗಿ ಕೊಂಕಣ ರೈಲ್ವೆ, ದಕ್ಷಿಣ ರೈಲ್ವೇ ಹಾಗು ನೈರುತ್ಯ ರೈಲ್ವೇ ಜತೆ ಬೆಂಗಳೂರಿಗೆ ಹೆಚ್ಚುವರಿ ರೈಲು ಸೇವೆಯ ಹೋರಾಟ ನಡೆಸಿತ್ತು .
ಸಂಸದರ ಯತ್ನದಿಂದ ಎಲ್ಲಾ ಸಮಸ್ಯೆಗಳನ್ನೂ ಮೀರಿ ರೈಲ್ವೇ ಸಚಿವರ ಒಪ್ಪಿಗೆ ಪಡೆದುದಲ್ಲದೇ ರೈಲ್ವೇ ಅದಿಕಾರಿಗಳ ಸಭೆ ಕರೆದು ದಸರಾ ಒಳಗೆ ರೈಲು ಓಡಲೇ ಬೇಕೆಂದು ಕಟ್ಟು ನಿಟ್ಟಿನ ಸೂಚನೆ ರವಾನಿಸಿದ ಪರಿಣಾಮ ಇಲಾಖೆ ಈ ರೈಲಿನ ವಿಸ್ತರಣೆಗೆ ಆದೇಶ ನೀಡಿದೆ.
ಬೇಕಲ ಕೋಟೆ ಸಮೀಪದ ಪಳ್ಳಿಕರೆ ಕಡಲತೀರದಲ್ಲಿ ಭಾನುವಾರ ಸಂಜೆ ಸಂಭವಿಸಿದ ದುರ್ಘಟನೆಯಲ್ಲಿ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಮುದ್ರದಲ್ಲಿ ಕೊಚ್ಚಿಹೋಗಿದ್ದು, ಅವರಿಗಾಗಿ…
ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ ಹೊಡೆದ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ನಡೆದಿದೆ. ರಾತ್ರಿ ವೇಳೆ…
ಕಡಬ ತಾಲೂಕು ಕೊಯಿಲ ಮತ್ತು ರಾಮಕುಂಜ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕ ರಸ್ತೆಯುದ್ದಕ್ಕೂ ಉಂಟಾಗಿರುವ ಹೊಂಡಗಳಿಗೆ ಸ್ಥಳಿಯರು ಶ್ರಮ…
ರಾಷ್ಟ್ರೀಯ ಹೆದ್ದಾರಿಯ ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದಲ್ಲಿ ಸರ್ವೀಸ್ ರಸ್ತೆ ಹೊಂಡಗುಂಡಿಗಳಿಂದ ತುಂಬಿ ವಾಹನ ಸಂಚಾರಕ್ಕೆ ತೊಂದರೆಯಾಗುತ್ತಿದೆ ಎಂದು ಸ್ಥಳೀಯರು…
ಮಾದಕ ದ್ರವ್ಯ ಸಾಗಾಟ ಹಾಗೂ ಮಾರಾಟ ಪ್ರಕರಣಗಳಲ್ಲಿ ಭಾಗಿಯಾಗಿರುವ ಆರೋಪದಡಿ ಮಣಿಪಾಲ ಪೊಲೀಸ್ ಠಾಣೆ ವ್ಯಾಪ್ತಿಯ 80 ಬಡಗಬೆಟ್ಟು ಗ್ರಾಮದ…
ಮಂಗಳೂರು ನಗರದ ಪದವು ಗ್ರಾಮದ ಜೋಡುಕಟ್ಟೆ ಮರೋಳಿ ಹತ್ತಿರ ಜೂನ್ 11 ರಂದು ಅಕ್ರಮವಾಗಿ ಆನೆದಂತಗಳನ್ನು ಮಾರಾಟಕ್ಕೆ ಯತ್ನಿಸುತಿದ್ದವರನ್ನು ಬಂಧಿಸಲಾಗಿದೆ.…