ಗೃಹಲಕ್ಷ್ಮಿ ಯೋಜನೆಯ ಹೊಸ ನೋಂದಣಿ ಪ್ರಕ್ರಿಯೆ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ.
ಮಹಿಳೆಯರ ಬ್ಯಾಂಕ್ ಖಾತೆ ನಿಷ್ಕ್ರಿಯಗೊಂಡಿರುವ ಕಾರಣದಿಂದ, 7ರಿಂದ 8 ಲಕ್ಷ ಫಲಾನುಭವಿಗಳಿಗೆ ಹಣ ಜಮೆಯಾಗಿಲ್ಲ. ಸರ್ಕಾರ ಈಗಾಗಲೇ ಖಜಾನೆಗೆ ಹಣ ಬಿಡುಗಡೆ ಮಾಡಿದ್ದು, 1 ಕೋಟಿ ಫಲಾನುಭವಿಗಳಿಗೆ 2ರಿಂದ 3 ದಿನಗಳಲ್ಲಿ ಹಣ ಜಮೆಯಾಗಲಿದೆ. ಅಲ್ಲದೇ, ಎಲ್ಲರಿಗೂ ಹಣ ತಲುಪಿದ ಬಳಿಕ ಮತ್ತೆ ಹೊಸ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿದೆ ಎಂದಿದ್ದಾರೆ
ಫಲಾನುಭವಿಗಳ ಬ್ಯಾಂಕ್ ಖಾತೆ ನಿಷ್ಕ್ರಿಯಗೊಂಡಿದ್ದರಿಂದ ಸದ್ಯ ಗೃಹಲಕ್ಷ್ಮಿ ಯೋಜನೆಯಡಿ 7-8 ಲಕ್ಷ ಕುಟುಂಬಗಳ ಯಜಮಾನಿಯರಿಗೆ ಹಣ ಜಮೆ ಮಾಡುವಲ್ಲಿ ತಾಂತ್ರಿಕ ಸಮಸ್ಯೆ ಎದುರಾಗಿದೆ. ಅಂಥವರ ಪಟ್ಟಿ ಮಾಡಲಾಗಿದ್ದು, ಬ್ಯಾಂಕ್ ಖಾತೆ ಸಕ್ರಿಯಗೊಳಿಸುವ ಮೂಲಕ ಯೋಜನೆ ಸೌಲಭ್ಯ ಪಡೆಯುವಂತೆ ಜಾಗೃತಿ ಮೂಡಿಸಲಾಗುತ್ತಿದೆ. ಗೃಹಲಕ್ಮೀ ಯೋಜನೆಯಡಿ ಒಂದು ಕೋಟಿಗೂ ಅಧಿಕ ಫಲಾನುಭವಿಗಳಿದ್ದು, ಈವರೆಗೆ ಒಟ್ಟು 59 ಲಕ್ಷ ಫಲಾನುಭವಿಗಳಿಗೆ ತಲಾ ಎರಡು ಸಾವಿರ ರೂ.ಜಮೆ ಮಾಡಲಾಗಿದೆ ಎಂದರು.
ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ವ್ಯಕ್ತಿಯೋರ್ವರು ನಾಪತ್ತೆಯಾಗಿರುವ ಬಗ್ಗೆ ದೂರು ದಾಖಲಾಗಿದೆ. ಬೊಳ್ಳಾರಿ ನಿವಾಸಿ ಚೆನ್ನಕೇಶವ ಕಾಣೆಯಾದವರಾಗಿದ್ದು, ದೂರುದಾರರ ಪ್ರಕಾರ,…
ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರು ತಮ್ಮ ಕಚೇರಿಯಲ್ಲಿ ಬಂಟ್ವಾಳ ಪುರಸಭೆಯ ಸಮಗ್ರ ಕುಡಿಯುವ ನೀರಿನ ಯೋಜನೆಯ 2ನೇ…
ಬಂಟ್ವಾಳ ತಾಲೂಕಿನ ಕೇಪು ಗ್ರಾಮ ಪಂಚಾಯತಿಗೆ ಎಮ್.ಎಲ್.ಸಿ ಕಿಶೋರ್ ಕುಮಾರ್ ಪುತ್ತೂರು ಭೇಟಿ ನೀಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ…
ಐವರು ಸ್ನೇಹಿತರು ಪ್ರಯಾಣಿಸುತ್ತಿದ್ದ ಕಾರೊಂದು ನಿಯಂತ್ರಣ ಕಳೆದುಕೊಂಡು ಮೇಲ್ಸೇತುವೆಯ ರಸ್ತೆ ವಿಭಾಜಕಕ್ಕೆ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ಚಾಲಕ ಆಸ್ಪತ್ರೆಯಲ್ಲಿ…
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…