ಮಂಗಳೂರು; ವ್ಯಕ್ತಿ ಓರ್ವ ಕಾಲು ಜಾರಿ ಬಾವಿಗೆ ಬಿದ್ದು ಮೃತಪಟ್ಟ ಘಟನೆ ಮಂಗಳೂರು ನಗರದ ಮುಗೋಡಿಯಲ್ಲಿ ನಡೆದಿದೆ.
ಮೃತನನ್ನು ಚಂದ್ರಕಾಂತ್ (41) ಎಂದು ಗುರುತಿಸಲಾಗಿದ್ದು, ಸ್ಥಳೀಯ ಬಾಡಿಗೆ ಮನೆಯಲ್ಲಿ ಪೋಷಕರೊಂದಿಗೆ ವಾಸವಾಗಿದ್ದ ಚಂದ್ರಕಾಂತ್ ಮೇಸೀ ಕೆಲಸದೊಂದಿಗೆ ಇತರ ಸಣ್ಣಪುಟ್ಟ ಕೆಲಸಗಳನ್ನು ಮಾಡುತ್ತಿದ್ದರು. ನರ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಪಡೆದು ನಿನ್ನೆಯಷ್ಟೇ ಮನೆಗೆ ಬಂದಿದ್ದರು ಎನ್ನಲಾಗಿದೆ.
ನಿನ್ನೆ ಸಂಜೆ ಹೊತ್ತಿಗೆ ಚಿಕ್ಕಮ್ಮನ ಮನೆಗೆ ಹೋಗಿ ಬರುತ್ತೇನೆಂದು ಹೋಗಿದ್ದ ಚಂದ್ರಕಾಂತ್ ತಡ ರಾತ್ರಿಯಾದರೂ ಬಾರದ ಕಾರಣ ಸ್ಥಳೀಯರು ಶೋಧಕಾರ್ಯ ನಡೆಸಿದ್ದರು.
ಬಳಿಕ ಆವರಣ ಇಲ್ಲದ ಬಾವಿ ಸಮೀಪ ಇಂದು ಅವರ ಚಪ್ಪಲಿ ಕಾಣ ಸಿಕ್ಕಿದ್ದರಿಂದ ಬಾವಿಯಲ್ಲಿ ನೋಡುವಾಗ ಶವ ಪತ್ತೆಯಾಗಿದೆ. ಮಂಗಳೂರು ನಗರ ಠಾಣಾ ಸಬ್ ಇನ್ಸ್ಪೆಕ್ಟರ್ ಅನಿತಾ ನಿಕಂ ಮತ್ತು ಅಗ್ನಿಶಾಮಕದಳದ ನೆರವಿನೊಂದಿಗೆ ಶವವನ್ನು ಮೇಲಕ್ಕೆತ್ತಿ ಮಹಜರು ಮಾಡಿದ್ದಾರೆ.
ಇನ್ನೂ ಈ ಬಗ್ಗೆ ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
ಟೈಲ್ಸ್ ಸಾಗಿಸುತ್ತಿದ್ದ ಪಾಜೆರೋ ಕಾರೊಂದು ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಬ್ರಹ್ಮಾವರ ಸಮೀಪದ ಧರ್ಮಾವರಂ ಪೆಟ್ರೋಲ್ ಬಂಕ್ ಬಳಿ ಸಂಭವಿಸಿದೆ.…
ತೆಂಗಿನ ಮರದಿಂದ ಬಿದ್ದ ತೆಂಗಿನಕಾಯಿ ತಲೆಗೆ ಬಡಿದ ಪರಿಣಾಮ ಒಂದೂವರೆ ವರ್ಷದ ಗಂಡು ಮಗು ಮೃತಪಟ್ಟ ದಾರುಣ ಘಟನೆ ಬ್ರಹ್ಮಾವರ…
ನೆರೆಮನೆಯ ದನಗಳು ತನ್ನ ತೋಟಕ್ಕೆ ಬಂದು ಹಾನಿಗೊಳಿಸಿವೆ ಎಂಬ ಆಕ್ರೋಶದಿಂದ ಹಟ್ಟಿಯಲ್ಲಿ ಕಟ್ಟಿಹಾಕಿದ್ದ ದನಗಳಿಗೆ ಕತ್ತಿಯಿಂದ ಕಡಿದು ಹಲ್ಲೆ ನಡೆಸಿ…
ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನಿಸಿದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಮಂಗಳೂರು ದಕ್ಷಿಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಿಷೇಧಿತ ಮಾದಕ…
ಪುರಸಭಾ ವ್ಯಾಪ್ತಿಯ ಪಾಣೆಮಂಗಳೂರು ಎಂಬಲ್ಲಿ ನೇತ್ರಾವತಿ ನದಿಯಿಂದ ಅಕ್ರಮವಾಗಿ ಮರಳು ತೆಗೆದು ಮಾರಾಟ ಮಾಡುತ್ತಿದ್ದಾರೆ ಎಂದು ಆರೋಪ ವ್ಯಕ್ತಪಡಿಸಿ, ಇವರ…
ಖಾಸಗಿ ಸಂಸ್ಥೆಗಳಿಗೆ ಸಂಬಂಧಿಸಿದಂತೆ ಶಾಲಾ ಮಕ್ಕಳನ್ನು ಕರೆದುಕೊಂಡು ಹೋಗುವ ಸ್ಕೂಲ್ ಬಸ್ಗಳು ಕಾನೂನು ಮತ್ತು ನಿಯಮಗಳನ್ನು ಪಾಲಿಸುತ್ತಿದೆಯಾ ಎಂಬ ಬಗ್ಗೆ…