ಮಂಗಳೂರು; ವ್ಯಕ್ತಿ ಓರ್ವ ಕಾಲು ಜಾರಿ ಬಾವಿಗೆ ಬಿದ್ದು ಮೃತಪಟ್ಟ ಘಟನೆ ಮಂಗಳೂರು ನಗರದ ಮುಗೋಡಿಯಲ್ಲಿ ನಡೆದಿದೆ.
ಮೃತನನ್ನು ಚಂದ್ರಕಾಂತ್ (41) ಎಂದು ಗುರುತಿಸಲಾಗಿದ್ದು, ಸ್ಥಳೀಯ ಬಾಡಿಗೆ ಮನೆಯಲ್ಲಿ ಪೋಷಕರೊಂದಿಗೆ ವಾಸವಾಗಿದ್ದ ಚಂದ್ರಕಾಂತ್ ಮೇಸೀ ಕೆಲಸದೊಂದಿಗೆ ಇತರ ಸಣ್ಣಪುಟ್ಟ ಕೆಲಸಗಳನ್ನು ಮಾಡುತ್ತಿದ್ದರು. ನರ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಪಡೆದು ನಿನ್ನೆಯಷ್ಟೇ ಮನೆಗೆ ಬಂದಿದ್ದರು ಎನ್ನಲಾಗಿದೆ.
ನಿನ್ನೆ ಸಂಜೆ ಹೊತ್ತಿಗೆ ಚಿಕ್ಕಮ್ಮನ ಮನೆಗೆ ಹೋಗಿ ಬರುತ್ತೇನೆಂದು ಹೋಗಿದ್ದ ಚಂದ್ರಕಾಂತ್ ತಡ ರಾತ್ರಿಯಾದರೂ ಬಾರದ ಕಾರಣ ಸ್ಥಳೀಯರು ಶೋಧಕಾರ್ಯ ನಡೆಸಿದ್ದರು.
ಬಳಿಕ ಆವರಣ ಇಲ್ಲದ ಬಾವಿ ಸಮೀಪ ಇಂದು ಅವರ ಚಪ್ಪಲಿ ಕಾಣ ಸಿಕ್ಕಿದ್ದರಿಂದ ಬಾವಿಯಲ್ಲಿ ನೋಡುವಾಗ ಶವ ಪತ್ತೆಯಾಗಿದೆ. ಮಂಗಳೂರು ನಗರ ಠಾಣಾ ಸಬ್ ಇನ್ಸ್ಪೆಕ್ಟರ್ ಅನಿತಾ ನಿಕಂ ಮತ್ತು ಅಗ್ನಿಶಾಮಕದಳದ ನೆರವಿನೊಂದಿಗೆ ಶವವನ್ನು ಮೇಲಕ್ಕೆತ್ತಿ ಮಹಜರು ಮಾಡಿದ್ದಾರೆ.
ಇನ್ನೂ ಈ ಬಗ್ಗೆ ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಅತ್ಯುತ್ತಮ ಪೋಷಕ ನಟಿ ರಾಷ್ಟ್ರೀಯ ಪ್ರಶಸ್ತಿ ಪಡೆದ ಕಾಸರಗೋಡು ವರ್ಕಾಡಿ ಮೂಲದ ರೂಪಶ್ರೀ ವರ್ಕಾಡಿ…
ಬಿಜೆಪಿಯ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ ಅವರು ತಮ್ಮ ಹುದ್ದೆ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನುವ…
ದೇಶದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಏರಿಳಿತ ಮುಂದುವರಿದಿದೆ. ಶುಕ್ರವಾರ ಚಿನ್ನದ ಬೆಲೆ ಪ್ರತಿ ಗ್ರಾಂಗೆ 25 ರೂಪಾಯಿ ಏರಿಕೆಯಾದರೂ,…
ತುಮಕೂರಿನಲ್ಲಿ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸುತ್ತಿದ್ದ ಪೊಲೀಸ್ ಸಿಬ್ಬಂದಿಯ ಪುತ್ರನೇ ಹೈಡ್ರೋ ಗಾಂಜಾ…
ಪಾಕಿಸ್ತಾನದ ಬಲೂಚಿಸ್ತಾನ್ ಪ್ರಾಂತ್ಯದ ಕ್ವೆಟ್ಟಾ ಸಮೀಪದ ಕಲ್ಲಿದ್ದಲು ಗಣಿಯಲ್ಲಿ ಸಂಭವಿಸಿದ ಭೀಕರ ಮೀಥೇನ್ ಅನಿಲ ಸ್ಫೋಟದಲ್ಲಿ ಕನಿಷ್ಠ 32 ಕಾರ್ಮಿಕರು…
ಬೀರತಮ್ಮನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೀರತಮ್ಮನಹಳ್ಳಿ ಕೆರೆಗೆ ಕಿಡಿಗೇಡಿಗಳು ಕ್ರಿಮಿನಾಶಕ ವಸ್ತು ಹಾಕಿದ ಪರಿಣಾಮ ಲಕ್ಷಾಂತರ ರೂಪಾಯಿ ಮೌಲ್ಯದ ಮೀನುಗಳ…