ಪುತ್ತೂರು: ಅಕ್ರಮ ಸಕ್ರಮ ಕಡತ ವಿಲೇವಾರಿ ಮಾಡುವುದಾಗಿ ಹೇಳಿ ಮಹಿಳೆಯಿಂದ ಪಡೆದ ಲಂಚದ ಹಣವನ್ನು ಹಿಂತಿರುಗಿಸುವಂತೆ ಪುತ್ತೂರು ಶಾಸಕರಾದ ಅಶೋಕ್ ರೈಯವರು ಗ್ರಾಮವೊಂದರ ಉಗ್ರಾಣಿಗೆ ಸೂಚನೆಯನ್ನು ನೀಡಿದ್ದಾರೆ.
ಕುಂಡಡ್ಕದಲ್ಲಿ ಶ್ರೀ ಕೃಷ್ಣ ಅಷ್ಟಮಿ ಕಾರ್ಯಕ್ರಮಕ್ಕೆ ತೆರಳಿದ ಶಾಸಕರ ಬಳಿ ಬಂದ ಚಂದ್ರಾವತಿ ಎಂಬ ಮಹಿಳೆ ನಾನು ಶಕುಂತಳಾ ಶೆಟ್ಟಿ ಶಾಸಕರಾಗಿದ್ದ ಸಂದರ್ಭದಲ್ಲಿ ಅಕ್ರಮ ಸಕ್ರಮಕ್ಕೆ ಅರ್ಜಿ ಹಾಕಿದ್ದೆ ನನ್ನ ಮನೆ ಸರಕಾರಿ ಜಾಗದಲ್ಲಿದೆ.
ನನ್ನ ಮನೆ ಇರುವ ಜಾಗವನ್ನು ಸಕ್ರಮ ಮಾಡಿಕೊಡಬೇಕೆಂದು ಅರ್ಜಿ ಸಲ್ಲಿಸಿದ್ದೇನೆ. ಸಲ್ಲಿಸಿದ ಅರ್ಜಿಯ ಎಲ್ಲಾ ದಾಖಲೆಗಳು ನನ್ನ ಬಳಿ ಇದೆ . ನಾನು ಅರ್ಜಿ ಕೊಟ್ಟಾಗ ನನ್ನಿಂದ ನನ್ನ ಗ್ರಾಮದ ಉಗ್ರಾಣಿ ಒಟ್ಟು 30 ಸಾವಿರ ಹಣವನ್ನು ಲಂಚವಾಗಿ ಪಡೆದುಕೊಂಡಿದ್ದಾರೆ. ಏಳು ವರ್ಷ ಕಳೆದರೂ ನನಗೆ ಅಕ್ರಮ ಸಕ್ರಮದಲ್ಲಿ ಜಾಗ ರೆಕಾರ್ಡ್ ಆಗಲಿಲ್ಲ, ನಾನು ಬಡವೆ, ನನ್ನಲ್ಲಿ ಏನೂ ಇಲ್ಲ. ನಾನು ಬೀಡಿಕಟ್ಟಿ ಜೀವನ ಮಾಡುವುದು, ಆದರೂ ನನ್ನಿಂದ ಹಣಪಡೆದುಕೊಂಡಿದ್ದಾರೆ.
ಹಣ ಕೊಟ್ಟರೂ ಕೆಲಸ ಮಾಡಿಲ್ಲ ನನಗೆ ನ್ಯಾಯ ಕೊಡಿ ಎಂದು ಶಾಸಕರಲ್ಲಿ ಮನವಿ ಮಾಡಿದ್ದಾರೆ. ಕೂಡಲೇ ಹಣ ಪಡೆದುಕೊಂಡ ಉಗ್ರಾಣಿಗೆ ಕರೆ ಮಾಡಿದ ಶಾಸಕರು ಬಡ ಮಹಿಳೆಯಿಂದ ಲಂಚವಾಗಿ ಪಡೆದುಕೊಂಡ 30 ಸಾವಿರ ಹಣವನ್ನು ವಾರದೊಳಗೆ ಮಹಿಳೆಗೆ ಪಾವತಿಸಿಬೇಕು ಇಲ್ಲವಾದರೆ ಕೆಲಸದಿಂದ ಸಸ್ಪೆಂಡ್ ಮಾಡುವುದಾಗಿ ಎಚ್ಚರಿಕೆ ನೀಡಿದ್ದಾರೆ.
ಮಹಿಳೆಗೆ ಸಾಂತ್ವನ ಹೇಳಿದ ಶಾಸಕರು ನಿಮ್ಮ ಅರ್ಜಿಯನ್ನು ವಿಲೇವಾರಿ ಮಾಡುವಂತೆ ಸೂಚನೆ ಕೊಡುತ್ತೇನೆ. ಅಕ್ರಮ ಸಕ್ರಮ ಸಮಿತಿಯಾದ ತಕ್ಷಣವೇ ನಿಮ್ಮ ಜಾಗ ನಿಮಗೆ ರೆಕಾರ್ಡ್ ಆಗಲಿದೆ ಎಂದು ಹೇಳಿದಾಗ ಮಹಿಳೆ ಶಾಸಕರಿಗೆ ಧನ್ಯವಾದ ತಿಳಿಸಿದ್ದಾರೆ.
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ್ಯರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್ನಲ್ಲಿ ಖಾಸಗಿ ಬಸ್ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…
ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕ ಕಳ್ಳತನ ಪ್ರಕರಣದಲ್ಲೂ ಭಾಗಿಯಾಗಿದ್ದು, ಈತನನ್ನು ಪೊಲೀಸರು ಬಂಧಿಸಿದ್ದಾರೆ. ಪೌಜಾನ್…