ಪುತ್ತೂರು: ಅಕ್ರಮ ಸಕ್ರಮ ಕಡತ ವಿಲೇವಾರಿ ಮಾಡುವುದಾಗಿ ಹೇಳಿ ಮಹಿಳೆಯಿಂದ ಪಡೆದ ಲಂಚದ ಹಣವನ್ನು ಹಿಂತಿರುಗಿಸುವಂತೆ ಪುತ್ತೂರು ಶಾಸಕರಾದ ಅಶೋಕ್ ರೈಯವರು ಗ್ರಾಮವೊಂದರ ಉಗ್ರಾಣಿಗೆ ಸೂಚನೆಯನ್ನು ನೀಡಿದ್ದಾರೆ.
ಕುಂಡಡ್ಕದಲ್ಲಿ ಶ್ರೀ ಕೃಷ್ಣ ಅಷ್ಟಮಿ ಕಾರ್ಯಕ್ರಮಕ್ಕೆ ತೆರಳಿದ ಶಾಸಕರ ಬಳಿ ಬಂದ ಚಂದ್ರಾವತಿ ಎಂಬ ಮಹಿಳೆ ನಾನು ಶಕುಂತಳಾ ಶೆಟ್ಟಿ ಶಾಸಕರಾಗಿದ್ದ ಸಂದರ್ಭದಲ್ಲಿ ಅಕ್ರಮ ಸಕ್ರಮಕ್ಕೆ ಅರ್ಜಿ ಹಾಕಿದ್ದೆ ನನ್ನ ಮನೆ ಸರಕಾರಿ ಜಾಗದಲ್ಲಿದೆ.
ನನ್ನ ಮನೆ ಇರುವ ಜಾಗವನ್ನು ಸಕ್ರಮ ಮಾಡಿಕೊಡಬೇಕೆಂದು ಅರ್ಜಿ ಸಲ್ಲಿಸಿದ್ದೇನೆ. ಸಲ್ಲಿಸಿದ ಅರ್ಜಿಯ ಎಲ್ಲಾ ದಾಖಲೆಗಳು ನನ್ನ ಬಳಿ ಇದೆ . ನಾನು ಅರ್ಜಿ ಕೊಟ್ಟಾಗ ನನ್ನಿಂದ ನನ್ನ ಗ್ರಾಮದ ಉಗ್ರಾಣಿ ಒಟ್ಟು 30 ಸಾವಿರ ಹಣವನ್ನು ಲಂಚವಾಗಿ ಪಡೆದುಕೊಂಡಿದ್ದಾರೆ. ಏಳು ವರ್ಷ ಕಳೆದರೂ ನನಗೆ ಅಕ್ರಮ ಸಕ್ರಮದಲ್ಲಿ ಜಾಗ ರೆಕಾರ್ಡ್ ಆಗಲಿಲ್ಲ, ನಾನು ಬಡವೆ, ನನ್ನಲ್ಲಿ ಏನೂ ಇಲ್ಲ. ನಾನು ಬೀಡಿಕಟ್ಟಿ ಜೀವನ ಮಾಡುವುದು, ಆದರೂ ನನ್ನಿಂದ ಹಣಪಡೆದುಕೊಂಡಿದ್ದಾರೆ.
ಹಣ ಕೊಟ್ಟರೂ ಕೆಲಸ ಮಾಡಿಲ್ಲ ನನಗೆ ನ್ಯಾಯ ಕೊಡಿ ಎಂದು ಶಾಸಕರಲ್ಲಿ ಮನವಿ ಮಾಡಿದ್ದಾರೆ. ಕೂಡಲೇ ಹಣ ಪಡೆದುಕೊಂಡ ಉಗ್ರಾಣಿಗೆ ಕರೆ ಮಾಡಿದ ಶಾಸಕರು ಬಡ ಮಹಿಳೆಯಿಂದ ಲಂಚವಾಗಿ ಪಡೆದುಕೊಂಡ 30 ಸಾವಿರ ಹಣವನ್ನು ವಾರದೊಳಗೆ ಮಹಿಳೆಗೆ ಪಾವತಿಸಿಬೇಕು ಇಲ್ಲವಾದರೆ ಕೆಲಸದಿಂದ ಸಸ್ಪೆಂಡ್ ಮಾಡುವುದಾಗಿ ಎಚ್ಚರಿಕೆ ನೀಡಿದ್ದಾರೆ.
ಮಹಿಳೆಗೆ ಸಾಂತ್ವನ ಹೇಳಿದ ಶಾಸಕರು ನಿಮ್ಮ ಅರ್ಜಿಯನ್ನು ವಿಲೇವಾರಿ ಮಾಡುವಂತೆ ಸೂಚನೆ ಕೊಡುತ್ತೇನೆ. ಅಕ್ರಮ ಸಕ್ರಮ ಸಮಿತಿಯಾದ ತಕ್ಷಣವೇ ನಿಮ್ಮ ಜಾಗ ನಿಮಗೆ ರೆಕಾರ್ಡ್ ಆಗಲಿದೆ ಎಂದು ಹೇಳಿದಾಗ ಮಹಿಳೆ ಶಾಸಕರಿಗೆ ಧನ್ಯವಾದ ತಿಳಿಸಿದ್ದಾರೆ.
72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಅತ್ಯುತ್ತಮ ಪೋಷಕ ನಟಿ ರಾಷ್ಟ್ರೀಯ ಪ್ರಶಸ್ತಿ ಪಡೆದ ಕಾಸರಗೋಡು ವರ್ಕಾಡಿ ಮೂಲದ ರೂಪಶ್ರೀ ವರ್ಕಾಡಿ…
ಬಿಜೆಪಿಯ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ ಅವರು ತಮ್ಮ ಹುದ್ದೆ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನುವ…
ದೇಶದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಏರಿಳಿತ ಮುಂದುವರಿದಿದೆ. ಶುಕ್ರವಾರ ಚಿನ್ನದ ಬೆಲೆ ಪ್ರತಿ ಗ್ರಾಂಗೆ 25 ರೂಪಾಯಿ ಏರಿಕೆಯಾದರೂ,…
ತುಮಕೂರಿನಲ್ಲಿ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸುತ್ತಿದ್ದ ಪೊಲೀಸ್ ಸಿಬ್ಬಂದಿಯ ಪುತ್ರನೇ ಹೈಡ್ರೋ ಗಾಂಜಾ…
ಪಾಕಿಸ್ತಾನದ ಬಲೂಚಿಸ್ತಾನ್ ಪ್ರಾಂತ್ಯದ ಕ್ವೆಟ್ಟಾ ಸಮೀಪದ ಕಲ್ಲಿದ್ದಲು ಗಣಿಯಲ್ಲಿ ಸಂಭವಿಸಿದ ಭೀಕರ ಮೀಥೇನ್ ಅನಿಲ ಸ್ಫೋಟದಲ್ಲಿ ಕನಿಷ್ಠ 32 ಕಾರ್ಮಿಕರು…
ಬೀರತಮ್ಮನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೀರತಮ್ಮನಹಳ್ಳಿ ಕೆರೆಗೆ ಕಿಡಿಗೇಡಿಗಳು ಕ್ರಿಮಿನಾಶಕ ವಸ್ತು ಹಾಕಿದ ಪರಿಣಾಮ ಲಕ್ಷಾಂತರ ರೂಪಾಯಿ ಮೌಲ್ಯದ ಮೀನುಗಳ…