ಪುತ್ತೂರು: ಅಕ್ರಮ ಸಕ್ರಮ ಕಡತ ವಿಲೇವಾರಿ ಮಾಡುವುದಾಗಿ ಹೇಳಿ ಮಹಿಳೆಯಿಂದ ಪಡೆದ ಲಂಚದ ಹಣವನ್ನು ಹಿಂತಿರುಗಿಸುವಂತೆ ಪುತ್ತೂರು ಶಾಸಕರಾದ ಅಶೋಕ್ ರೈಯವರು ಗ್ರಾಮವೊಂದರ ಉಗ್ರಾಣಿಗೆ ಸೂಚನೆಯನ್ನು ನೀಡಿದ್ದಾರೆ.
ಕುಂಡಡ್ಕದಲ್ಲಿ ಶ್ರೀ ಕೃಷ್ಣ ಅಷ್ಟಮಿ ಕಾರ್ಯಕ್ರಮಕ್ಕೆ ತೆರಳಿದ ಶಾಸಕರ ಬಳಿ ಬಂದ ಚಂದ್ರಾವತಿ ಎಂಬ ಮಹಿಳೆ ನಾನು ಶಕುಂತಳಾ ಶೆಟ್ಟಿ ಶಾಸಕರಾಗಿದ್ದ ಸಂದರ್ಭದಲ್ಲಿ ಅಕ್ರಮ ಸಕ್ರಮಕ್ಕೆ ಅರ್ಜಿ ಹಾಕಿದ್ದೆ ನನ್ನ ಮನೆ ಸರಕಾರಿ ಜಾಗದಲ್ಲಿದೆ.
ನನ್ನ ಮನೆ ಇರುವ ಜಾಗವನ್ನು ಸಕ್ರಮ ಮಾಡಿಕೊಡಬೇಕೆಂದು ಅರ್ಜಿ ಸಲ್ಲಿಸಿದ್ದೇನೆ. ಸಲ್ಲಿಸಿದ ಅರ್ಜಿಯ ಎಲ್ಲಾ ದಾಖಲೆಗಳು ನನ್ನ ಬಳಿ ಇದೆ . ನಾನು ಅರ್ಜಿ ಕೊಟ್ಟಾಗ ನನ್ನಿಂದ ನನ್ನ ಗ್ರಾಮದ ಉಗ್ರಾಣಿ ಒಟ್ಟು 30 ಸಾವಿರ ಹಣವನ್ನು ಲಂಚವಾಗಿ ಪಡೆದುಕೊಂಡಿದ್ದಾರೆ. ಏಳು ವರ್ಷ ಕಳೆದರೂ ನನಗೆ ಅಕ್ರಮ ಸಕ್ರಮದಲ್ಲಿ ಜಾಗ ರೆಕಾರ್ಡ್ ಆಗಲಿಲ್ಲ, ನಾನು ಬಡವೆ, ನನ್ನಲ್ಲಿ ಏನೂ ಇಲ್ಲ. ನಾನು ಬೀಡಿಕಟ್ಟಿ ಜೀವನ ಮಾಡುವುದು, ಆದರೂ ನನ್ನಿಂದ ಹಣಪಡೆದುಕೊಂಡಿದ್ದಾರೆ.
ಹಣ ಕೊಟ್ಟರೂ ಕೆಲಸ ಮಾಡಿಲ್ಲ ನನಗೆ ನ್ಯಾಯ ಕೊಡಿ ಎಂದು ಶಾಸಕರಲ್ಲಿ ಮನವಿ ಮಾಡಿದ್ದಾರೆ. ಕೂಡಲೇ ಹಣ ಪಡೆದುಕೊಂಡ ಉಗ್ರಾಣಿಗೆ ಕರೆ ಮಾಡಿದ ಶಾಸಕರು ಬಡ ಮಹಿಳೆಯಿಂದ ಲಂಚವಾಗಿ ಪಡೆದುಕೊಂಡ 30 ಸಾವಿರ ಹಣವನ್ನು ವಾರದೊಳಗೆ ಮಹಿಳೆಗೆ ಪಾವತಿಸಿಬೇಕು ಇಲ್ಲವಾದರೆ ಕೆಲಸದಿಂದ ಸಸ್ಪೆಂಡ್ ಮಾಡುವುದಾಗಿ ಎಚ್ಚರಿಕೆ ನೀಡಿದ್ದಾರೆ.
ಮಹಿಳೆಗೆ ಸಾಂತ್ವನ ಹೇಳಿದ ಶಾಸಕರು ನಿಮ್ಮ ಅರ್ಜಿಯನ್ನು ವಿಲೇವಾರಿ ಮಾಡುವಂತೆ ಸೂಚನೆ ಕೊಡುತ್ತೇನೆ. ಅಕ್ರಮ ಸಕ್ರಮ ಸಮಿತಿಯಾದ ತಕ್ಷಣವೇ ನಿಮ್ಮ ಜಾಗ ನಿಮಗೆ ರೆಕಾರ್ಡ್ ಆಗಲಿದೆ ಎಂದು ಹೇಳಿದಾಗ ಮಹಿಳೆ ಶಾಸಕರಿಗೆ ಧನ್ಯವಾದ ತಿಳಿಸಿದ್ದಾರೆ.
ಟೈಲ್ಸ್ ಸಾಗಿಸುತ್ತಿದ್ದ ಪಾಜೆರೋ ಕಾರೊಂದು ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಬ್ರಹ್ಮಾವರ ಸಮೀಪದ ಧರ್ಮಾವರಂ ಪೆಟ್ರೋಲ್ ಬಂಕ್ ಬಳಿ ಸಂಭವಿಸಿದೆ.…
ತೆಂಗಿನ ಮರದಿಂದ ಬಿದ್ದ ತೆಂಗಿನಕಾಯಿ ತಲೆಗೆ ಬಡಿದ ಪರಿಣಾಮ ಒಂದೂವರೆ ವರ್ಷದ ಗಂಡು ಮಗು ಮೃತಪಟ್ಟ ದಾರುಣ ಘಟನೆ ಬ್ರಹ್ಮಾವರ…
ನೆರೆಮನೆಯ ದನಗಳು ತನ್ನ ತೋಟಕ್ಕೆ ಬಂದು ಹಾನಿಗೊಳಿಸಿವೆ ಎಂಬ ಆಕ್ರೋಶದಿಂದ ಹಟ್ಟಿಯಲ್ಲಿ ಕಟ್ಟಿಹಾಕಿದ್ದ ದನಗಳಿಗೆ ಕತ್ತಿಯಿಂದ ಕಡಿದು ಹಲ್ಲೆ ನಡೆಸಿ…
ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನಿಸಿದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಮಂಗಳೂರು ದಕ್ಷಿಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಿಷೇಧಿತ ಮಾದಕ…
ಪುರಸಭಾ ವ್ಯಾಪ್ತಿಯ ಪಾಣೆಮಂಗಳೂರು ಎಂಬಲ್ಲಿ ನೇತ್ರಾವತಿ ನದಿಯಿಂದ ಅಕ್ರಮವಾಗಿ ಮರಳು ತೆಗೆದು ಮಾರಾಟ ಮಾಡುತ್ತಿದ್ದಾರೆ ಎಂದು ಆರೋಪ ವ್ಯಕ್ತಪಡಿಸಿ, ಇವರ…
ಖಾಸಗಿ ಸಂಸ್ಥೆಗಳಿಗೆ ಸಂಬಂಧಿಸಿದಂತೆ ಶಾಲಾ ಮಕ್ಕಳನ್ನು ಕರೆದುಕೊಂಡು ಹೋಗುವ ಸ್ಕೂಲ್ ಬಸ್ಗಳು ಕಾನೂನು ಮತ್ತು ನಿಯಮಗಳನ್ನು ಪಾಲಿಸುತ್ತಿದೆಯಾ ಎಂಬ ಬಗ್ಗೆ…