ಯಮುನ ಬಸ್ಸಿಗಾಗಿ ಕಾಯುತ್ತಿದ್ದ ಶಾಲಾ ಮಕ್ಕಳ ಮೇಲೆ ಖಾಸಗಿ ಬಸ್ ಹರಿದು ಓರ್ವ ವಿದ್ಯಾರ್ಥಿನಿ ಸಾವನ್ನಪ್ಪಿದ್ದ, ಘಟನೆ ಚಿಕ್ಕಮಗಳೂರು ತರೀಕೆರೆ ತಾಲೂಕಿನ ಸೀತಾಪುರ ಕಾವಲ್ ದುಗ್ಲಾಪುರ ಗೇಟ್ನಲ್ಲಿ ನಡೆದಿದೆ.
ಬಾವಿಕೆರೆ ಸರ್ಕಾರಿ ಪ್ರೌಢಶಾಲೆಯಲ್ಲಿ 9 ನೇ ತರಗತಿ ವಿದ್ಯಾಭ್ಯಾಸ ಮಾಡುತ್ತಿದ್ದ ತರೀಕೆರೆ ತಾಲೂಕಿನ ಸೀತಾಪುರ ಕಾವಲು ನಿವಾಸಿ ತುಳಸಿ (15) ಮೃತ ವಿದ್ಯಾರ್ಥಿನಿಯಾಗಿದ್ದು . ನಿವೇದಿತ (14) ಎಂಬ ವಿದ್ಯಾರ್ಥಿನಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಓವರ್ ಸ್ಪೀಡ್ನಿಂದ ನಿಯಂತ್ರಣ ತಪ್ಪಿದ ಖಾಸಗಿ ಬಸ್ ಏಕಾಏಕಿ ರಸ್ತೆ ಬದಿ ನಿಂತಿದ್ದ ಮಕ್ಕಳಿಗೆ ಡಿಕ್ಕಿ ಹೊಡೆದ ನಂತರ ರಸ್ತೆ ಬದಿಯಲ್ಲಿದ್ದ ಮರ ಹಾಗೂ ಮನೆಯ ಗೋಡೆಗೆ ಗುದ್ದಿದೆ. ಈ ಘಟನೆಯಲ್ಲಿ ರಸ್ತೆ ಬದಿಯಿದ್ದ ಮನೆಯ ಮುಂಭಾಗದ ಛಾವಣಿಯೂ ಸಂಪೂರ್ಣ ಜಖಂ ಆಗಿದೆ.
ಐವರು ಮಕ್ಕಳು ಕೂದಲೆಳೆ ಅಂತರದಲ್ಲಿ ಪಾರಾಗಿದ್ದು, ಅತಿ ವೇಗವಾಗಿ ಬಸ್ ಚಲಾಯಿಸಿಕೊಂಡು ಬಂದ ಚಾಲಕನ ವಿರುದ್ಧ ಕೋಪಗೊಂಡ ಸ್ಥಳೀಯರು ಬಸ್ಸಿನ ಮೇಲೆ ಕಲ್ಲು ತೂರಾಟ ಮಾಡಿ ಬಸ್ಸಾನ ಗಾಜು ಪುಡಿ ಮಾಡಿ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.
ಇನ್ನೂ ಸ್ಥಳಕ್ಕೆ ತರೀಕೆರೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ
ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…
ಕೆಎಸ್ಆರ್ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…