ಯಮುನ ಬಸ್ಸಿಗಾಗಿ ಕಾಯುತ್ತಿದ್ದ ಶಾಲಾ ಮಕ್ಕಳ ಮೇಲೆ ಖಾಸಗಿ ಬಸ್ ಹರಿದು ಓರ್ವ ವಿದ್ಯಾರ್ಥಿನಿ ಸಾವನ್ನಪ್ಪಿದ್ದ, ಘಟನೆ ಚಿಕ್ಕಮಗಳೂರು ತರೀಕೆರೆ ತಾಲೂಕಿನ ಸೀತಾಪುರ ಕಾವಲ್ ದುಗ್ಲಾಪುರ ಗೇಟ್ನಲ್ಲಿ ನಡೆದಿದೆ.
ಬಾವಿಕೆರೆ ಸರ್ಕಾರಿ ಪ್ರೌಢಶಾಲೆಯಲ್ಲಿ 9 ನೇ ತರಗತಿ ವಿದ್ಯಾಭ್ಯಾಸ ಮಾಡುತ್ತಿದ್ದ ತರೀಕೆರೆ ತಾಲೂಕಿನ ಸೀತಾಪುರ ಕಾವಲು ನಿವಾಸಿ ತುಳಸಿ (15) ಮೃತ ವಿದ್ಯಾರ್ಥಿನಿಯಾಗಿದ್ದು . ನಿವೇದಿತ (14) ಎಂಬ ವಿದ್ಯಾರ್ಥಿನಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಓವರ್ ಸ್ಪೀಡ್ನಿಂದ ನಿಯಂತ್ರಣ ತಪ್ಪಿದ ಖಾಸಗಿ ಬಸ್ ಏಕಾಏಕಿ ರಸ್ತೆ ಬದಿ ನಿಂತಿದ್ದ ಮಕ್ಕಳಿಗೆ ಡಿಕ್ಕಿ ಹೊಡೆದ ನಂತರ ರಸ್ತೆ ಬದಿಯಲ್ಲಿದ್ದ ಮರ ಹಾಗೂ ಮನೆಯ ಗೋಡೆಗೆ ಗುದ್ದಿದೆ. ಈ ಘಟನೆಯಲ್ಲಿ ರಸ್ತೆ ಬದಿಯಿದ್ದ ಮನೆಯ ಮುಂಭಾಗದ ಛಾವಣಿಯೂ ಸಂಪೂರ್ಣ ಜಖಂ ಆಗಿದೆ.
ಐವರು ಮಕ್ಕಳು ಕೂದಲೆಳೆ ಅಂತರದಲ್ಲಿ ಪಾರಾಗಿದ್ದು, ಅತಿ ವೇಗವಾಗಿ ಬಸ್ ಚಲಾಯಿಸಿಕೊಂಡು ಬಂದ ಚಾಲಕನ ವಿರುದ್ಧ ಕೋಪಗೊಂಡ ಸ್ಥಳೀಯರು ಬಸ್ಸಿನ ಮೇಲೆ ಕಲ್ಲು ತೂರಾಟ ಮಾಡಿ ಬಸ್ಸಾನ ಗಾಜು ಪುಡಿ ಮಾಡಿ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.
ಇನ್ನೂ ಸ್ಥಳಕ್ಕೆ ತರೀಕೆರೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ
72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಅತ್ಯುತ್ತಮ ಪೋಷಕ ನಟಿ ರಾಷ್ಟ್ರೀಯ ಪ್ರಶಸ್ತಿ ಪಡೆದ ಕಾಸರಗೋಡು ವರ್ಕಾಡಿ ಮೂಲದ ರೂಪಶ್ರೀ ವರ್ಕಾಡಿ…
ಬಿಜೆಪಿಯ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ ಅವರು ತಮ್ಮ ಹುದ್ದೆ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನುವ…
ದೇಶದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಏರಿಳಿತ ಮುಂದುವರಿದಿದೆ. ಶುಕ್ರವಾರ ಚಿನ್ನದ ಬೆಲೆ ಪ್ರತಿ ಗ್ರಾಂಗೆ 25 ರೂಪಾಯಿ ಏರಿಕೆಯಾದರೂ,…
ತುಮಕೂರಿನಲ್ಲಿ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸುತ್ತಿದ್ದ ಪೊಲೀಸ್ ಸಿಬ್ಬಂದಿಯ ಪುತ್ರನೇ ಹೈಡ್ರೋ ಗಾಂಜಾ…
ಪಾಕಿಸ್ತಾನದ ಬಲೂಚಿಸ್ತಾನ್ ಪ್ರಾಂತ್ಯದ ಕ್ವೆಟ್ಟಾ ಸಮೀಪದ ಕಲ್ಲಿದ್ದಲು ಗಣಿಯಲ್ಲಿ ಸಂಭವಿಸಿದ ಭೀಕರ ಮೀಥೇನ್ ಅನಿಲ ಸ್ಫೋಟದಲ್ಲಿ ಕನಿಷ್ಠ 32 ಕಾರ್ಮಿಕರು…
ಬೀರತಮ್ಮನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೀರತಮ್ಮನಹಳ್ಳಿ ಕೆರೆಗೆ ಕಿಡಿಗೇಡಿಗಳು ಕ್ರಿಮಿನಾಶಕ ವಸ್ತು ಹಾಕಿದ ಪರಿಣಾಮ ಲಕ್ಷಾಂತರ ರೂಪಾಯಿ ಮೌಲ್ಯದ ಮೀನುಗಳ…