ಮಂಗಳೂರು; ಮಂಗಳೂರು ನಗರ ವ್ಯಾಪ್ತಿಯಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆಗೆ ಹಲವು ಕಠಿಣ ನಿಯಮಗಳನ್ನು ಹೇರಲು ಮಂಗಳೂರು ಪೊಲೀಸ್ ಕಮಿಷನರ್ ಆದೇಶ ಹೊರಡಿಸಿದ್ದಾರೆ.
ಇದು ಸಾಂಪ್ರದಾಯಿಕ ಹಬ್ಬದ ಆಚರಣೆ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತದೆ. ಕಾನೂನುಗಳನ್ನು ನೆಪವಾಗಿಟ್ಟುಕೊಂಡು ಹಬ್ಬದ ಆಚರಣೆಯ ಮೇಲೆ ನಿಯಂತ್ರಣ ಹೇರುವುದು ಸರಿಯಲ್ಲ. ಹಬ್ಬ ಆಚರಿಸುವ ಸಮಿತಿಯ ಪ್ರಮುಖರ ಫೋಟೋಗಳನ್ನು, ಆಚರಿಸುವ ಜಾಗದ ದಾಖಲೆಗಳನ್ನು ಠಾಣೆಗೆ ತಂದೊಪ್ಪಿಸಬೇಕು ಎಂಬ ನಿರ್ದೇಶನ ಸಮಂಜಸವಾದುದಲ್ಲ. ಸಮಿತಿಯಲ್ಲಿರುವ ಸದಸ್ಯರೆಲ್ಲರೂ ಗೌರವಾನ್ವಿತ ವ್ಯಕ್ತಿಗಳಾಗಿದ್ದಾರೆ. ಅವರ ಫೋಟೋಗಳನ್ನು ಠಾಣೆಗೆ ತರಿಸುವ ವ್ಯವಸ್ಥೆ ಎಷ್ಟು ಸರಿ ?
ಇನ್ನೂ ಹಬ್ಬದ ಆಚರಣೆಯ ಸಂದರ್ಭ ಮೆರವಣಿಗೆಗಳನ್ನು ರಾತ್ರಿ 10 ಗಂಟೆಯೊಳಗೆ ಮುಗಿಸಬೇಕು ಎಂಬ ನಿಯಮ ಹೇಳಿರುವುದು ಮೆರವಣಿಗೆಯನ್ನು ಹತ್ತಿಕ್ಕುವ ಯತ್ನದ ಒಂದು ಭಾಗವಾಗಿದೆ. ಮಂಗಳೂರು ವಿವಿಯಲ್ಲಿ ಕೂಡಾ ಗಣೇಶ ಹಬ್ಬ ಆಚರಣೆ ಮಾಡಬಾರದು ಎಂಬ ಸೂಚನೆಯೂ ಕಾಂಗ್ರೆಸ್ ಸರಕಾರದ ಹಿಡನ್ ಅಜೆಂಡಾವೇ ಆಗಿದೆ. ಸಾಂಪ್ರದಾಯಿಕವಾಗಿ ಈ ಹಿಂದಿನಂತೆ ನಡೆದು ಬಂದ ಹಬ್ಬವು ಯಥಾಸ್ಥಿತಿ ಆಚರಣೆಗೆ ಆಡಳಿತ ಅವಕಾಶ ಮಾಡಿಕೊಡಬೇಕು. ಬಿಜೆಪಿ ಸರ್ಕಾರ ಆಡಳಿತವಿದ್ದ ಸಂದರ್ಭ ಹಬ್ಬದ ಆಚರಣೆಗಳಿಗೆ ಯಾವುದೇ ಕಟ್ಟುನಿಟ್ಟಿನ ನಿಬಂಧನೆಗಳನ್ನು ವಿಧಿಸಲಾಗಿರಲಿಲ್ಲ. ಇದೀಗ ಕಾಂಗ್ರೆಸ್ ಆಡಳಿತಕ್ಕೆ ಬಂದ ಬಳಿಕ ಹಿಂದೂಗಳ ಸಾಂಪ್ರದಾಯಕ ಹಬ್ಬದ ಆಚರಣೆಗಳ ಮೇಲೆ ನಿಯಂತ್ರಣ ಹೇರಿ ಹಿಂದುಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವ ಕೆಲಸವನ್ನು ಮಾಡಲಾಗುತ್ತಿದೆ. ಯಾವುದೇ ಕಾರಣಕ್ಕೂ ಹಬ್ಬದ ಆಚರಣೆಗೆ ಅಡ್ಡಿಪಡಿಸುವುದನ್ನು ನಾವು ಸಹಿಸುವುದಿಲ್ಲ ಎಂದು ಶಾಸಕ ವೇದವ್ಯಾಸ್ ಕಾಮತ್ ಪ್ರಕಟಣೆ ಮೂಲಕ ಎಚ್ಚರಿಸಿದ್ದಾರೆ.
ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…
ಕೆಎಸ್ಆರ್ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…