ಮಂಗಳೂರು; ಮಂಗಳೂರು ನಗರ ವ್ಯಾಪ್ತಿಯಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆಗೆ ಹಲವು ಕಠಿಣ ನಿಯಮಗಳನ್ನು ಹೇರಲು ಮಂಗಳೂರು ಪೊಲೀಸ್ ಕಮಿಷನರ್ ಆದೇಶ ಹೊರಡಿಸಿದ್ದಾರೆ.
ಇದು ಸಾಂಪ್ರದಾಯಿಕ ಹಬ್ಬದ ಆಚರಣೆ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತದೆ. ಕಾನೂನುಗಳನ್ನು ನೆಪವಾಗಿಟ್ಟುಕೊಂಡು ಹಬ್ಬದ ಆಚರಣೆಯ ಮೇಲೆ ನಿಯಂತ್ರಣ ಹೇರುವುದು ಸರಿಯಲ್ಲ. ಹಬ್ಬ ಆಚರಿಸುವ ಸಮಿತಿಯ ಪ್ರಮುಖರ ಫೋಟೋಗಳನ್ನು, ಆಚರಿಸುವ ಜಾಗದ ದಾಖಲೆಗಳನ್ನು ಠಾಣೆಗೆ ತಂದೊಪ್ಪಿಸಬೇಕು ಎಂಬ ನಿರ್ದೇಶನ ಸಮಂಜಸವಾದುದಲ್ಲ. ಸಮಿತಿಯಲ್ಲಿರುವ ಸದಸ್ಯರೆಲ್ಲರೂ ಗೌರವಾನ್ವಿತ ವ್ಯಕ್ತಿಗಳಾಗಿದ್ದಾರೆ. ಅವರ ಫೋಟೋಗಳನ್ನು ಠಾಣೆಗೆ ತರಿಸುವ ವ್ಯವಸ್ಥೆ ಎಷ್ಟು ಸರಿ ?
ಇನ್ನೂ ಹಬ್ಬದ ಆಚರಣೆಯ ಸಂದರ್ಭ ಮೆರವಣಿಗೆಗಳನ್ನು ರಾತ್ರಿ 10 ಗಂಟೆಯೊಳಗೆ ಮುಗಿಸಬೇಕು ಎಂಬ ನಿಯಮ ಹೇಳಿರುವುದು ಮೆರವಣಿಗೆಯನ್ನು ಹತ್ತಿಕ್ಕುವ ಯತ್ನದ ಒಂದು ಭಾಗವಾಗಿದೆ. ಮಂಗಳೂರು ವಿವಿಯಲ್ಲಿ ಕೂಡಾ ಗಣೇಶ ಹಬ್ಬ ಆಚರಣೆ ಮಾಡಬಾರದು ಎಂಬ ಸೂಚನೆಯೂ ಕಾಂಗ್ರೆಸ್ ಸರಕಾರದ ಹಿಡನ್ ಅಜೆಂಡಾವೇ ಆಗಿದೆ. ಸಾಂಪ್ರದಾಯಿಕವಾಗಿ ಈ ಹಿಂದಿನಂತೆ ನಡೆದು ಬಂದ ಹಬ್ಬವು ಯಥಾಸ್ಥಿತಿ ಆಚರಣೆಗೆ ಆಡಳಿತ ಅವಕಾಶ ಮಾಡಿಕೊಡಬೇಕು. ಬಿಜೆಪಿ ಸರ್ಕಾರ ಆಡಳಿತವಿದ್ದ ಸಂದರ್ಭ ಹಬ್ಬದ ಆಚರಣೆಗಳಿಗೆ ಯಾವುದೇ ಕಟ್ಟುನಿಟ್ಟಿನ ನಿಬಂಧನೆಗಳನ್ನು ವಿಧಿಸಲಾಗಿರಲಿಲ್ಲ. ಇದೀಗ ಕಾಂಗ್ರೆಸ್ ಆಡಳಿತಕ್ಕೆ ಬಂದ ಬಳಿಕ ಹಿಂದೂಗಳ ಸಾಂಪ್ರದಾಯಕ ಹಬ್ಬದ ಆಚರಣೆಗಳ ಮೇಲೆ ನಿಯಂತ್ರಣ ಹೇರಿ ಹಿಂದುಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವ ಕೆಲಸವನ್ನು ಮಾಡಲಾಗುತ್ತಿದೆ. ಯಾವುದೇ ಕಾರಣಕ್ಕೂ ಹಬ್ಬದ ಆಚರಣೆಗೆ ಅಡ್ಡಿಪಡಿಸುವುದನ್ನು ನಾವು ಸಹಿಸುವುದಿಲ್ಲ ಎಂದು ಶಾಸಕ ವೇದವ್ಯಾಸ್ ಕಾಮತ್ ಪ್ರಕಟಣೆ ಮೂಲಕ ಎಚ್ಚರಿಸಿದ್ದಾರೆ.
ನೆರೆಮನೆಯ ದನಗಳು ತನ್ನ ತೋಟಕ್ಕೆ ಬಂದು ಹಾನಿಗೊಳಿಸಿವೆ ಎಂಬ ಆಕ್ರೋಶದಿಂದ ಹಟ್ಟಿಯಲ್ಲಿ ಕಟ್ಟಿಹಾಕಿದ್ದ ದನಗಳಿಗೆ ಕತ್ತಿಯಿಂದ ಕಡಿದು ಹಲ್ಲೆ ನಡೆಸಿ…
ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನಿಸಿದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಮಂಗಳೂರು ದಕ್ಷಿಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಿಷೇಧಿತ ಮಾದಕ…
ಪುರಸಭಾ ವ್ಯಾಪ್ತಿಯ ಪಾಣೆಮಂಗಳೂರು ಎಂಬಲ್ಲಿ ನೇತ್ರಾವತಿ ನದಿಯಿಂದ ಅಕ್ರಮವಾಗಿ ಮರಳು ತೆಗೆದು ಮಾರಾಟ ಮಾಡುತ್ತಿದ್ದಾರೆ ಎಂದು ಆರೋಪ ವ್ಯಕ್ತಪಡಿಸಿ, ಇವರ…
ಖಾಸಗಿ ಸಂಸ್ಥೆಗಳಿಗೆ ಸಂಬಂಧಿಸಿದಂತೆ ಶಾಲಾ ಮಕ್ಕಳನ್ನು ಕರೆದುಕೊಂಡು ಹೋಗುವ ಸ್ಕೂಲ್ ಬಸ್ಗಳು ಕಾನೂನು ಮತ್ತು ನಿಯಮಗಳನ್ನು ಪಾಲಿಸುತ್ತಿದೆಯಾ ಎಂಬ ಬಗ್ಗೆ…
ಕೆಲ ದಿನಗಳಿಂದ ಸುರಿಯುತ್ತಿರುವ ಮಳೆಗೆ ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿಯಿಂದ ಹಳೇ ಸೇತುವೆ ಕಡೆಗೆ ಸಾಗುವ ದಾರಿಯ…
ಹೆಬ್ರಿ ಸಮೀಪದ ಹೊಸೂರು ಎಂಬಲ್ಲಿ ಇಸ್ಪೀಟ್ ಜೂಜಾಟ ನಡೆಸುತ್ತಿದ್ದ ಆರೋಪದಲ್ಲಿ ಏಳು ಮಂದಿಯನ್ನು ಹೆಬ್ರಿ ಪೊಲೀಸರು ಬಂಧಿಸಿದ್ದಾರೆ. ಜೂಜಾಟ ನಡೆಯುತ್ತಿರುವ…