ಜನ ಮನದ ನಾಡಿ ಮಿಡಿತ

Advertisement

ಇಂಡಿಯಾ- ಭಾರತ್‌ ಹೆಸರಿನ ವಿಚಾರವಾಗಿ ಯಾರು ಕೂಡ ಯಾವುದೇ ರೀತಿಯ ಹೇಳಿಕೆ ನೀಡಬೇಡಿ; ಪ್ರಧಾನಿ ಮೋದಿ

ಕಳೆದ ಎರಡು ದಿನಗಳಿಂದ ರಾಜಕೀಯ ವಲಯದಲ್ಲಿ ಇಂಡಿಯಾವನ್ನು ಭಾರತ ಎಂದು ಮರುನಾಮಕಾರಣ ವಿಚಾರ ಕೋಲಾಹಲವನ್ನು ಸೃಷ್ಟಿಸಿದೆ.

ಇದರ ಬೆನ್ನಲ್ಲೆ ಈ ವಿಚಾರವಾಗಿ ಯಾವುದೇ ರೀತಿಯ ಪ್ರತಿಕ್ರಿಯೆ ನೀಡದಂತೆ ಪ್ರಧಾನಿ ಮೋದಿ ಸಚಿವರಿಗೆ ಸೂಚನೆ ನೀಡಿದ್ದಾರೆ. ಇದೇ ಮೊದಲ ಬಾರಿಗೆ ಪ್ರಧಾನಿ ಮೋದಿ ತಮ್ಮ ಸಚಿವರೊಂದಿಗೆ ಈ ವಿಷಯದ ಬಗ್ಗೆ ಚರ್ಚಿಸಿದ್ದಾರೆ. ಕಳೆದ ಎರಡು ದಿನಗಳಿಂದ, ಪ್ರತಿಪಕ್ಷಗಳು ಈ ವಿಷಯದ ಬಗ್ಗೆ ಎರಡು ಸಭೆಗಳನ್ನು ನಡೆಸಿವೆ.
ಸೆಪ್ಟೆಂಬರ್ 18 ರಿಂದ ಪ್ರಾರಂಭವಾಗುವ ಸಂಸತ್ತಿನ ವಿಶೇಷ ಅಧಿವೇಶನದಲ್ಲಿ ಚರ್ಚಿಸಬಹುದಾದ 9 ವಿಷಯಗಳ ಪಟ್ಟಿಗಳ ಬಗ್ಗೆ ಸೋನಿಯಾ ಗಾಂಧಿ ಪ್ರಧಾನಿ ಮೋದಿಗೆ ಪತ್ರ ಬರೆದಿದ್ದಾರೆ. ರಾಷ್ಟ್ರಪತಿ ಕಚೇರಿಯಿಂದ ಜಿ20 ಪ್ರತಿನಿಧಿಗಳಿಗೆ ಕಳುಹಿಸಲಾದ ಔತಣಕೂಟದ ಆಮಂತ್ರಣದಲ್ಲಿ ದ್ರೌಪದಿ ಮುರ್ಮು ಅವರನ್ನು ‘ಪ್ರೆಸಿಡೆಂಟ್ ಆಫ್ ಇಂಡಿಯಾ’ ಬದಲಿಗೆ ‘ಪ್ರೆಸಿಡೆಂಟ್ ಆಫ್ ಭಾರತ್’ ಎಂದು ಕರೆಯಲಾಗಿದ್ದು ಈ ಕುರಿತು ಕಾಂಗ್ರೆಸ್ ಕಿಡಿ ಕಾರಿತ್ತು.

ಎಐಸಿಸಿ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಟ್ವಿಟರ್‌ನಲ್ಲಿ , ಸಂವಿಧಾನ ಒಂದನೇ ವಿಧಿಯಡಿ, ಭಾರತ, ಅದು ಇಂಡಿಯಾ, ರಾಜ್ಯಗಳ ಒಕ್ಕೂಟ ಎಂದು ಕರೆಯಲಾಗುತ್ತಿತ್ತು. ಆದರೆ ಈಗ ಈ ರಾಜ್ಯಗಳ ಒಕ್ಕೂಟ ಆಕ್ರಮಣಕ್ಕೆ ಒಳಗಾಗಿದೆ ಎಂದು ಆಕ್ರೋಶ ಹೊರಹಾಕಿದ್ದರು.

ಎರಡು ದಿನಗಳ ಹಿಂದಷ್ಟೇ ರಾಷ್ಟ್ರೀಯ ಸ್ವಯಂಸೇವಕ ಸಂಘದ ಮುಖ್ಯಸ್ಥ ಮೋಹನ್ ಭಾಗವತ್ ಅವರು ಇಂಡಿಯಾ ಎಂದು ಹೇಳುವುದನ್ನು ಇನ್ನು ಬಿಡಿ, ಭಾರತ ಎಂದು ಹೇಳಿ ಎಂದು ಮನವಿ ಮಾಡಿಕೊಂಡ ನಂತರ ಈ ವಿಷಯ ಬೆಳಕಿಗೆ ಬಂದಿದೆ.

ಹೀಗಾಗಿ ಇಂಡಿಯಾ- ಭಾರತ್‌ ಹೆಸರಿನ ವಿಚಾರವಾಗಿ ಯಾರು ಕೂಡ ಯಾವುದೇ ರೀತಿಯ ಹೇಳಿಕೆ ನೀಡಬೇಡಿ ಅದರಿಂದ ದೂರವಿರಿ ಎಂದು ತಮ್ಮ ಮಂತ್ರಿಗಳಿಗೆ ಸೂಚನೆ ಮೋದಿ ಸಂದೇಶ ರವಾನೆ ಮಾಡಿದ್ದಾರೆ ಎನ್ನಲಾಗಿದೆ.

Leave a Reply

Your email address will not be published. Required fields are marked *

ಉಡುಪಿ: ಜಾನಪದ ಕಲಾವಿದ ಡಾ. ಗಣೇಶ್ ಗಂಗೊಳ್ಳಿ ಇನ್ನಿಲ್ಲ….!

ಉಡುಪಿ: ಕೆಎಸ್‌ಆರ್‌ಟಿಸಿ ಬಸ್ ಡಿ*ಕ್ಕಿ ಹೊಡೆದು ಮಹಿಳೆ ಮೃ*ತ್ಯು….!

ಸುಬ್ರಹ್ಮಣ್ಯ: ಕನ್ನಡಚಿತ್ರ ನಟ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ..!

ಮಂಗಳೂರು: ಕೌಡಿಚ್ಚಾರಿನಲ್ಲಿ ಪಿಕಪ್ ವಾಹನ ಮೋರಿಗೆ ಢಿ*ಕ್ಕಿ…!

ಮಂಗಳೂರು: ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿ*ಕ್ಕಿ; ಮಹಿಳೆಗೆ ಗಾಯ….!

ಬಂಟ್ವಾಳ: ವಸತಿಗೃಹದ ಮುಂಭಾಗದಲ್ಲಿದ್ದ ಸ್ಕೂಟರ್ ಕಳವು; ಇಬ್ಬರ ಬಂಧನ!

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

error: Content is protected !!