ಜನ ಮನದ ನಾಡಿ ಮಿಡಿತ

Advertisement

ಇಂಡಿಯಾ- ಭಾರತ್‌ ಹೆಸರಿನ ವಿಚಾರವಾಗಿ ಯಾರು ಕೂಡ ಯಾವುದೇ ರೀತಿಯ ಹೇಳಿಕೆ ನೀಡಬೇಡಿ; ಪ್ರಧಾನಿ ಮೋದಿ

ಕಳೆದ ಎರಡು ದಿನಗಳಿಂದ ರಾಜಕೀಯ ವಲಯದಲ್ಲಿ ಇಂಡಿಯಾವನ್ನು ಭಾರತ ಎಂದು ಮರುನಾಮಕಾರಣ ವಿಚಾರ ಕೋಲಾಹಲವನ್ನು ಸೃಷ್ಟಿಸಿದೆ.

ಇದರ ಬೆನ್ನಲ್ಲೆ ಈ ವಿಚಾರವಾಗಿ ಯಾವುದೇ ರೀತಿಯ ಪ್ರತಿಕ್ರಿಯೆ ನೀಡದಂತೆ ಪ್ರಧಾನಿ ಮೋದಿ ಸಚಿವರಿಗೆ ಸೂಚನೆ ನೀಡಿದ್ದಾರೆ. ಇದೇ ಮೊದಲ ಬಾರಿಗೆ ಪ್ರಧಾನಿ ಮೋದಿ ತಮ್ಮ ಸಚಿವರೊಂದಿಗೆ ಈ ವಿಷಯದ ಬಗ್ಗೆ ಚರ್ಚಿಸಿದ್ದಾರೆ. ಕಳೆದ ಎರಡು ದಿನಗಳಿಂದ, ಪ್ರತಿಪಕ್ಷಗಳು ಈ ವಿಷಯದ ಬಗ್ಗೆ ಎರಡು ಸಭೆಗಳನ್ನು ನಡೆಸಿವೆ.
ಸೆಪ್ಟೆಂಬರ್ 18 ರಿಂದ ಪ್ರಾರಂಭವಾಗುವ ಸಂಸತ್ತಿನ ವಿಶೇಷ ಅಧಿವೇಶನದಲ್ಲಿ ಚರ್ಚಿಸಬಹುದಾದ 9 ವಿಷಯಗಳ ಪಟ್ಟಿಗಳ ಬಗ್ಗೆ ಸೋನಿಯಾ ಗಾಂಧಿ ಪ್ರಧಾನಿ ಮೋದಿಗೆ ಪತ್ರ ಬರೆದಿದ್ದಾರೆ. ರಾಷ್ಟ್ರಪತಿ ಕಚೇರಿಯಿಂದ ಜಿ20 ಪ್ರತಿನಿಧಿಗಳಿಗೆ ಕಳುಹಿಸಲಾದ ಔತಣಕೂಟದ ಆಮಂತ್ರಣದಲ್ಲಿ ದ್ರೌಪದಿ ಮುರ್ಮು ಅವರನ್ನು ‘ಪ್ರೆಸಿಡೆಂಟ್ ಆಫ್ ಇಂಡಿಯಾ’ ಬದಲಿಗೆ ‘ಪ್ರೆಸಿಡೆಂಟ್ ಆಫ್ ಭಾರತ್’ ಎಂದು ಕರೆಯಲಾಗಿದ್ದು ಈ ಕುರಿತು ಕಾಂಗ್ರೆಸ್ ಕಿಡಿ ಕಾರಿತ್ತು.

ಎಐಸಿಸಿ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಟ್ವಿಟರ್‌ನಲ್ಲಿ , ಸಂವಿಧಾನ ಒಂದನೇ ವಿಧಿಯಡಿ, ಭಾರತ, ಅದು ಇಂಡಿಯಾ, ರಾಜ್ಯಗಳ ಒಕ್ಕೂಟ ಎಂದು ಕರೆಯಲಾಗುತ್ತಿತ್ತು. ಆದರೆ ಈಗ ಈ ರಾಜ್ಯಗಳ ಒಕ್ಕೂಟ ಆಕ್ರಮಣಕ್ಕೆ ಒಳಗಾಗಿದೆ ಎಂದು ಆಕ್ರೋಶ ಹೊರಹಾಕಿದ್ದರು.

ಎರಡು ದಿನಗಳ ಹಿಂದಷ್ಟೇ ರಾಷ್ಟ್ರೀಯ ಸ್ವಯಂಸೇವಕ ಸಂಘದ ಮುಖ್ಯಸ್ಥ ಮೋಹನ್ ಭಾಗವತ್ ಅವರು ಇಂಡಿಯಾ ಎಂದು ಹೇಳುವುದನ್ನು ಇನ್ನು ಬಿಡಿ, ಭಾರತ ಎಂದು ಹೇಳಿ ಎಂದು ಮನವಿ ಮಾಡಿಕೊಂಡ ನಂತರ ಈ ವಿಷಯ ಬೆಳಕಿಗೆ ಬಂದಿದೆ.

ಹೀಗಾಗಿ ಇಂಡಿಯಾ- ಭಾರತ್‌ ಹೆಸರಿನ ವಿಚಾರವಾಗಿ ಯಾರು ಕೂಡ ಯಾವುದೇ ರೀತಿಯ ಹೇಳಿಕೆ ನೀಡಬೇಡಿ ಅದರಿಂದ ದೂರವಿರಿ ಎಂದು ತಮ್ಮ ಮಂತ್ರಿಗಳಿಗೆ ಸೂಚನೆ ಮೋದಿ ಸಂದೇಶ ರವಾನೆ ಮಾಡಿದ್ದಾರೆ ಎನ್ನಲಾಗಿದೆ.

Leave a Reply

Your email address will not be published. Required fields are marked *

ಮೂಡುಬಿದಿರೆ: ಗರ್ಭಿಣಿ ದನಗಳ ಮೇಲೆ ಕತ್ತಿಯಿಂದ ಹ*ಲ್ಲೆ…..!

ಮಂಗಳೂರು: ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನ; ಮೂವರು ಆರೋಪಿಗಳ ಬಂಧನ..!

ಬಂಟ್ವಾಳ: ಪಾಣೆಮಂಗಳೂರಿನಲ್ಲಿ ಅಕ್ರಮ ಮರಳುಗಾರಿಕೆ ಆರೋಪ; ನೇತ್ರಾವತಿ ನದಿಯಲ್ಲಿ ಮರಳು ದಂಧೆ…!

ಬಂಟ್ವಾಳ: ಶಾಲಾ ಬಸ್ ನಿಯಮ ಪರಿಶೀಲನೆ ; ಶಾಲಾ ಬಸ್‌ಗಳನ್ನು ಪರಿಶೀಲಿಸಿದ ಟ್ರಾಫಿಕ್ ಪೋಲಿಸ್ ಎಸ್.ಐ.ಆದರ್ಶ್…!

ಬಂಟ್ವಾಳ: ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿ ಕೃತಕ ನೆರೆ…..!

ಉಡುಪಿ: ಹೆಬ್ರಿಯಲ್ಲಿ ಅಂದರ್ ಬಾಹರ್ ಇಸ್ಪೀಟ್ ಜೂಜು ಅಡ್ಡೆಗೆ ಪೊಲೀಸರ ದಾಳಿ; 7 ಮಂದಿಯ ಬಂಧನ..!

ಬೆಳ್ತಂಗಡಿ: ಪಿಕಪ್ ವಾಹನ ಡಿಕ್ಕಿಯಾಗಿ ಸ್ಕೂಟರ್ ಸವಾರರಿಬ್ಬರು ಸಾ*ವು..!

ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಆಗ್ರಹ

ಕುಂದಾಪುರ: ಕಂಟೇನರ್ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಮೃತ್ಯು..!

error: Content is protected !!