ಕಳೆದ ಎರಡು ದಿನಗಳಿಂದ ರಾಜಕೀಯ ವಲಯದಲ್ಲಿ ಇಂಡಿಯಾವನ್ನು ಭಾರತ ಎಂದು ಮರುನಾಮಕಾರಣ ವಿಚಾರ ಕೋಲಾಹಲವನ್ನು ಸೃಷ್ಟಿಸಿದೆ.
ಇದರ ಬೆನ್ನಲ್ಲೆ ಈ ವಿಚಾರವಾಗಿ ಯಾವುದೇ ರೀತಿಯ ಪ್ರತಿಕ್ರಿಯೆ ನೀಡದಂತೆ ಪ್ರಧಾನಿ ಮೋದಿ ಸಚಿವರಿಗೆ ಸೂಚನೆ ನೀಡಿದ್ದಾರೆ. ಇದೇ ಮೊದಲ ಬಾರಿಗೆ ಪ್ರಧಾನಿ ಮೋದಿ ತಮ್ಮ ಸಚಿವರೊಂದಿಗೆ ಈ ವಿಷಯದ ಬಗ್ಗೆ ಚರ್ಚಿಸಿದ್ದಾರೆ. ಕಳೆದ ಎರಡು ದಿನಗಳಿಂದ, ಪ್ರತಿಪಕ್ಷಗಳು ಈ ವಿಷಯದ ಬಗ್ಗೆ ಎರಡು ಸಭೆಗಳನ್ನು ನಡೆಸಿವೆ.
ಸೆಪ್ಟೆಂಬರ್ 18 ರಿಂದ ಪ್ರಾರಂಭವಾಗುವ ಸಂಸತ್ತಿನ ವಿಶೇಷ ಅಧಿವೇಶನದಲ್ಲಿ ಚರ್ಚಿಸಬಹುದಾದ 9 ವಿಷಯಗಳ ಪಟ್ಟಿಗಳ ಬಗ್ಗೆ ಸೋನಿಯಾ ಗಾಂಧಿ ಪ್ರಧಾನಿ ಮೋದಿಗೆ ಪತ್ರ ಬರೆದಿದ್ದಾರೆ. ರಾಷ್ಟ್ರಪತಿ ಕಚೇರಿಯಿಂದ ಜಿ20 ಪ್ರತಿನಿಧಿಗಳಿಗೆ ಕಳುಹಿಸಲಾದ ಔತಣಕೂಟದ ಆಮಂತ್ರಣದಲ್ಲಿ ದ್ರೌಪದಿ ಮುರ್ಮು ಅವರನ್ನು ‘ಪ್ರೆಸಿಡೆಂಟ್ ಆಫ್ ಇಂಡಿಯಾ’ ಬದಲಿಗೆ ‘ಪ್ರೆಸಿಡೆಂಟ್ ಆಫ್ ಭಾರತ್’ ಎಂದು ಕರೆಯಲಾಗಿದ್ದು ಈ ಕುರಿತು ಕಾಂಗ್ರೆಸ್ ಕಿಡಿ ಕಾರಿತ್ತು.
ಎಐಸಿಸಿ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಟ್ವಿಟರ್ನಲ್ಲಿ , ಸಂವಿಧಾನ ಒಂದನೇ ವಿಧಿಯಡಿ, ಭಾರತ, ಅದು ಇಂಡಿಯಾ, ರಾಜ್ಯಗಳ ಒಕ್ಕೂಟ ಎಂದು ಕರೆಯಲಾಗುತ್ತಿತ್ತು. ಆದರೆ ಈಗ ಈ ರಾಜ್ಯಗಳ ಒಕ್ಕೂಟ ಆಕ್ರಮಣಕ್ಕೆ ಒಳಗಾಗಿದೆ ಎಂದು ಆಕ್ರೋಶ ಹೊರಹಾಕಿದ್ದರು.
ಎರಡು ದಿನಗಳ ಹಿಂದಷ್ಟೇ ರಾಷ್ಟ್ರೀಯ ಸ್ವಯಂಸೇವಕ ಸಂಘದ ಮುಖ್ಯಸ್ಥ ಮೋಹನ್ ಭಾಗವತ್ ಅವರು ಇಂಡಿಯಾ ಎಂದು ಹೇಳುವುದನ್ನು ಇನ್ನು ಬಿಡಿ, ಭಾರತ ಎಂದು ಹೇಳಿ ಎಂದು ಮನವಿ ಮಾಡಿಕೊಂಡ ನಂತರ ಈ ವಿಷಯ ಬೆಳಕಿಗೆ ಬಂದಿದೆ.
ಹೀಗಾಗಿ ಇಂಡಿಯಾ- ಭಾರತ್ ಹೆಸರಿನ ವಿಚಾರವಾಗಿ ಯಾರು ಕೂಡ ಯಾವುದೇ ರೀತಿಯ ಹೇಳಿಕೆ ನೀಡಬೇಡಿ ಅದರಿಂದ ದೂರವಿರಿ ಎಂದು ತಮ್ಮ ಮಂತ್ರಿಗಳಿಗೆ ಸೂಚನೆ ಮೋದಿ ಸಂದೇಶ ರವಾನೆ ಮಾಡಿದ್ದಾರೆ ಎನ್ನಲಾಗಿದೆ.
72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಅತ್ಯುತ್ತಮ ಪೋಷಕ ನಟಿ ರಾಷ್ಟ್ರೀಯ ಪ್ರಶಸ್ತಿ ಪಡೆದ ಕಾಸರಗೋಡು ವರ್ಕಾಡಿ ಮೂಲದ ರೂಪಶ್ರೀ ವರ್ಕಾಡಿ…
ಬಿಜೆಪಿಯ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ ಅವರು ತಮ್ಮ ಹುದ್ದೆ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನುವ…
ದೇಶದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಏರಿಳಿತ ಮುಂದುವರಿದಿದೆ. ಶುಕ್ರವಾರ ಚಿನ್ನದ ಬೆಲೆ ಪ್ರತಿ ಗ್ರಾಂಗೆ 25 ರೂಪಾಯಿ ಏರಿಕೆಯಾದರೂ,…
ತುಮಕೂರಿನಲ್ಲಿ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸುತ್ತಿದ್ದ ಪೊಲೀಸ್ ಸಿಬ್ಬಂದಿಯ ಪುತ್ರನೇ ಹೈಡ್ರೋ ಗಾಂಜಾ…
ಪಾಕಿಸ್ತಾನದ ಬಲೂಚಿಸ್ತಾನ್ ಪ್ರಾಂತ್ಯದ ಕ್ವೆಟ್ಟಾ ಸಮೀಪದ ಕಲ್ಲಿದ್ದಲು ಗಣಿಯಲ್ಲಿ ಸಂಭವಿಸಿದ ಭೀಕರ ಮೀಥೇನ್ ಅನಿಲ ಸ್ಫೋಟದಲ್ಲಿ ಕನಿಷ್ಠ 32 ಕಾರ್ಮಿಕರು…
ಬೀರತಮ್ಮನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೀರತಮ್ಮನಹಳ್ಳಿ ಕೆರೆಗೆ ಕಿಡಿಗೇಡಿಗಳು ಕ್ರಿಮಿನಾಶಕ ವಸ್ತು ಹಾಕಿದ ಪರಿಣಾಮ ಲಕ್ಷಾಂತರ ರೂಪಾಯಿ ಮೌಲ್ಯದ ಮೀನುಗಳ…