ನಮ್ಮ ಸಮಾಜದಲ್ಲಿ ಅಸಮಾನತೆ ಇರುವವರೆಗೂ ಮೀಸಲಾತಿ ಮುಂದುವರಿಯಬೇಕು ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಮುಖ್ಯಸ್ಥ ಮೋಹನ್ ಭಾಗವತ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಇವರು ನಾಗ್ಪುರದ ಕಾರ್ಯಕ್ರಮವೊಂದರಲ್ಲಿ ಮಾತನಾಡಿ, 1947ರಲ್ಲಿ ಭಾರತದಿಂದ ಪ್ರತ್ಯೇಕಗೊಂಡವರು ಈಗ ತಾವು ತಪ್ಪು ಮಾಡಿದ್ದೇವೆ ಎಂದು ಭಾವಿಸುತ್ತಿರುವಂತೆ, ಇಂದಿನ ಯುವಪೀಳಿಗೆ ವಯಸ್ಕರಾಗುವ ಮೊದಲು ಅಖಂಡ ಭಾರತ ಅಥವಾ ಅವಿಭಜಿತ ಭಾರತದ ಕನಸು ನನಸಾಗಲಿದೆ. ನಮ್ಮ ಸಾಮಾಜಿಕ ವ್ಯವಸ್ಥೆಯಲ್ಲಿ ನಮ್ಮವರನ್ನೇ ನಾವು ಕತ್ತಲೆಯಲ್ಲಿ ಇರಿಸಿದ್ದೇವೆ. ನಾವು ಅವರ ಬಗ್ಗೆ ಯಾವುದೇ ಕಾಳಜಿ ವಹಿಸಿಲ್ಲ. ಇದರ ಪರಿಣಾಮ ಇದು 2000 ವರ್ಷಗಳವರೆಗೂ ಮುಂದುವರೆದಿದ್ದು, ನಾವು ಅವರಿಗೆ ಸಮಾನತೆಯನ್ನು ನೀಡುವವರೆಗೆ, ಕೆಲವು ವಿಶೇಷ ಪರಿಹಾರಗಳನ್ನು ಒದಗಿಸಬೇಕಾಗುತ್ತದೆ. ಇದರಲ್ಲಿ ಮೀಸಲಾತಿಯೂ ಕೂಡಾ ಒಂದು. ನಮ್ಮ ಸಮಾಜದಲ್ಲಿ ತಾರತಮ್ಯ ಹೋಗಿಲ್ಲ. ಅಸಮಾನತೆ ಇರುವವರೆಗೂ ಮೀಸಲಾತಿ ಮುಂದುವರಿಯಬೇಕು. ನಾವು ಸಂವಿಧಾನದಲ್ಲಿ ಒದಗಿಸಿರುವ ಮೀಸಲಾತಿಗೆ ಎಲ್ಲಾ ರೀತಿಯ ಬೆಂಬಲ ನೀಡುತ್ತೇವೆ. ಮೀಸಲಾತಿ ಎಂದರೆ ಗೌರವವನ್ನು ನೀಡುವುದಾಗಿದೆ. ಇದು ಆರ್ಥಿಕ ಅಥವಾ ರಾಜಕೀಯ ಸಮಾನತೆಯನ್ನು ಖಚಿತಪಡಿಸುವ ವಿಷಯವಲ್ಲ ಎಂದು ಭಾಗವತ್ ಹೇಳಿದ್ದಾರೆ.
72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಅತ್ಯುತ್ತಮ ಪೋಷಕ ನಟಿ ರಾಷ್ಟ್ರೀಯ ಪ್ರಶಸ್ತಿ ಪಡೆದ ಕಾಸರಗೋಡು ವರ್ಕಾಡಿ ಮೂಲದ ರೂಪಶ್ರೀ ವರ್ಕಾಡಿ…
ಬಿಜೆಪಿಯ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ ಅವರು ತಮ್ಮ ಹುದ್ದೆ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನುವ…
ದೇಶದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಏರಿಳಿತ ಮುಂದುವರಿದಿದೆ. ಶುಕ್ರವಾರ ಚಿನ್ನದ ಬೆಲೆ ಪ್ರತಿ ಗ್ರಾಂಗೆ 25 ರೂಪಾಯಿ ಏರಿಕೆಯಾದರೂ,…
ತುಮಕೂರಿನಲ್ಲಿ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸುತ್ತಿದ್ದ ಪೊಲೀಸ್ ಸಿಬ್ಬಂದಿಯ ಪುತ್ರನೇ ಹೈಡ್ರೋ ಗಾಂಜಾ…
ಪಾಕಿಸ್ತಾನದ ಬಲೂಚಿಸ್ತಾನ್ ಪ್ರಾಂತ್ಯದ ಕ್ವೆಟ್ಟಾ ಸಮೀಪದ ಕಲ್ಲಿದ್ದಲು ಗಣಿಯಲ್ಲಿ ಸಂಭವಿಸಿದ ಭೀಕರ ಮೀಥೇನ್ ಅನಿಲ ಸ್ಫೋಟದಲ್ಲಿ ಕನಿಷ್ಠ 32 ಕಾರ್ಮಿಕರು…
ಬೀರತಮ್ಮನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೀರತಮ್ಮನಹಳ್ಳಿ ಕೆರೆಗೆ ಕಿಡಿಗೇಡಿಗಳು ಕ್ರಿಮಿನಾಶಕ ವಸ್ತು ಹಾಕಿದ ಪರಿಣಾಮ ಲಕ್ಷಾಂತರ ರೂಪಾಯಿ ಮೌಲ್ಯದ ಮೀನುಗಳ…