ಜನ ಮನದ ನಾಡಿ ಮಿಡಿತ

Advertisement

ಪುತ್ತೂರು : ಮನೆಯವರನ್ನು ಕಟ್ಟಿ ಹಾಕಿ ದರೋಡೆ; ಸ್ಥಳಕ್ಕೆ ಪಶ್ಚಿಮ ವಲಯ ಐಜಿಪಿ ಭೇಟಿ

ಪುತ್ತೂರು: ಪುತ್ತೂರು ಹೊರವಲಯದ ಬಡಗನ್ನೂರಿನಲ್ಲಿ ಗ್ರಾಮ ಪಂಚಾಯತ್ ಮಾಜಿ ಸದಸ್ಯರೋರ್ವರನ್ನು ಕಟ್ಟಿ ಹಾಕಿ ಅವರ ತಾಯಿಯಲ್ಲಿದ್ದ ಚಿನ್ನವನ್ನು ದರೋಡೆ ಮಾಡಿರುವುದಾಗಿ ತಿಳಿದು ಬಂದಿದೆ. ಪುತ್ತೂರು ಗ್ರಾಮಾಂತರ ಠಾಣೆ ದೂರು ದಾಖಲಾಗಿದೆ.


ಬಡಗನ್ನೂರು ಗ್ರಾಮ ಪಂಚಾಯತ್ ಮಾಜಿ ಸದಸ್ಯ ಗುರುಪ್ರಸಾದ್ ಬಡಗನ್ನೂರು ಇವರ ಮನೆಗೆ ತಡ ರಾತ್ರಿ ಸುಮಾರು 10 ಜನರ ತಂಡವೊಂದು ಬಾಗಿಲು ಮುರಿದು ಒಳನುಗ್ಗಿ ಗುರು ಮತ್ತು ತಾಯಿಯ ಕೈ ಕಾಲು ಕಟ್ಟಿ ಹಾಕಿ ತಾಯಿಯಲ್ಲಿದ್ದ ಚಿನ್ನ ಮತ್ತು ಸ್ವಲ್ಪ ಹಣವನ್ನು ದೋಚಿದ್ದಾರೆ. ದರೋಡೆ ಮಾಡಿ ಹಿಂತಿರುಗುವಾಗ ಅವರ ಮೊಬೈಲ್ ಗಳನ್ನು ಬಾವಿ ಎಸೆದು ಹೋಗಿದ್ದಾರೆ ಎಂದು ವರದಿಯಾಗಿದೆ.
ಇಂದು ಮದುವೆ ಸಮಾರಂಭದಲ್ಲಿ ಭಾಗವಹಿಸಲು ಗುರು ಅವರ ತಾಯಿ ಸಂಬಂಧಿಕರಿಂದ ಚಿನ್ನದ ಸರ ಪಡೆದುಕೊಂಡು ಬಂದಿದ್ದರು. ಅದನ್ನೇ ದರೋಡೆಕೋರರು ದೋಚಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಹೆಚ್ಚಿನ ಮಾಹಿತಿ ತನಿಖೆಯ ಬಳಿಕ ಲಭ್ಯವಾಗಲಿದೆ.
ಎಸ್ಪಿ ಸಿ ಬಿ ರಿಷ್ಯಂತ್ ಮತ್ತು ಪೋಲಿಸ್ ತಂಡ ಸ್ಥಳಕ್ಕೆ ಆಗಮಿಸಿ ತನಿಖೆ ಕೈಗೊಂಡಿದೆ.

Leave a Reply

Your email address will not be published. Required fields are marked *

ರಾಷ್ಟ್ರ ಪ್ರಶಸ್ತಿ ವಿಜೇತೆ ರೂಪಶ್ರೀ ವರ್ಕಾಡಿಗೆ ಬಿಜೆಪಿ ಜಿಲ್ಲಾ ಘಟಕದಿಂದ ಸನ್ಮಾನ…!

ಬಿಜೆಪಿ ರಾಷ್ಟ್ರೀಯ ವಕ್ತಾರ ಹುದ್ದೆಗೆ ಪೂನಾವಾಲಾ ಗುಡ್‌ಬೈ?…

ಚಿನ್ನದ ದರದಲ್ಲಿ ಬದಲಾವಣೆ; ಹೊಸ ಬೆಲೆ ಪ್ರಕಟ…!

ತುಮಕೂರು: ಪೊಲೀಸ್ ಪುತ್ರನೇ ಹೈಡ್ರೋ ಗಾಂಜಾ ಜಾಲದ ರೂವಾರಿ..!

ಪಾಕಿಸ್ತಾನದಲ್ಲಿ ಭೀಕರ ಗಣಿ ಸ್ಫೋಟ; 32 ಕಾರ್ಮಿಕರ ದುರ್ಮರಣ…!

ಬೀರತಮ್ಮನಹಳ್ಳಿ ಕೆರೆಯಲ್ಲಿ ಮೀನುಗಳ ಮಾರಣಹೋಮ; ತನಿಖೆ ಆರಂಭ…!

ಕುಂದಾಪುರ: ಐವನ್ ಮಸ್ಕರೇನಸ್ ಹತ್ಯೆ; ಪೊಲೀಸ್ ತನಿಖೆಯಲ್ಲಿ ಹೊಸ ಮಾಹಿತಿ..!

ಉಡುಪಿ ಜಿಲ್ಲೆಯ ಕುಂದಾಪುರದಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ದಾಳಿ…!

ಬಂಟ್ವಾಳ: ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಕುಸಿತಗೊಂಡ ಮನೆಯ ಚಾವಣಿ…!

error: Content is protected !!