ಪುತ್ತೂರು: ಪುತ್ತೂರು ಹೊರವಲಯದ ಬಡಗನ್ನೂರಿನಲ್ಲಿ ಗ್ರಾಮ ಪಂಚಾಯತ್ ಮಾಜಿ ಸದಸ್ಯರೋರ್ವರನ್ನು ಕಟ್ಟಿ ಹಾಕಿ ಅವರ ತಾಯಿಯಲ್ಲಿದ್ದ ಚಿನ್ನವನ್ನು ದರೋಡೆ ಮಾಡಿರುವುದಾಗಿ ತಿಳಿದು ಬಂದಿದೆ. ಪುತ್ತೂರು ಗ್ರಾಮಾಂತರ ಠಾಣೆ ದೂರು ದಾಖಲಾಗಿದೆ.
ಬಡಗನ್ನೂರು ಗ್ರಾಮ ಪಂಚಾಯತ್ ಮಾಜಿ ಸದಸ್ಯ ಗುರುಪ್ರಸಾದ್ ಬಡಗನ್ನೂರು ಇವರ ಮನೆಗೆ ತಡ ರಾತ್ರಿ ಸುಮಾರು 10 ಜನರ ತಂಡವೊಂದು ಬಾಗಿಲು ಮುರಿದು ಒಳನುಗ್ಗಿ ಗುರು ಮತ್ತು ತಾಯಿಯ ಕೈ ಕಾಲು ಕಟ್ಟಿ ಹಾಕಿ ತಾಯಿಯಲ್ಲಿದ್ದ ಚಿನ್ನ ಮತ್ತು ಸ್ವಲ್ಪ ಹಣವನ್ನು ದೋಚಿದ್ದಾರೆ. ದರೋಡೆ ಮಾಡಿ ಹಿಂತಿರುಗುವಾಗ ಅವರ ಮೊಬೈಲ್ ಗಳನ್ನು ಬಾವಿ ಎಸೆದು ಹೋಗಿದ್ದಾರೆ ಎಂದು ವರದಿಯಾಗಿದೆ.
ಇಂದು ಮದುವೆ ಸಮಾರಂಭದಲ್ಲಿ ಭಾಗವಹಿಸಲು ಗುರು ಅವರ ತಾಯಿ ಸಂಬಂಧಿಕರಿಂದ ಚಿನ್ನದ ಸರ ಪಡೆದುಕೊಂಡು ಬಂದಿದ್ದರು. ಅದನ್ನೇ ದರೋಡೆಕೋರರು ದೋಚಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಹೆಚ್ಚಿನ ಮಾಹಿತಿ ತನಿಖೆಯ ಬಳಿಕ ಲಭ್ಯವಾಗಲಿದೆ.
ಎಸ್ಪಿ ಸಿ ಬಿ ರಿಷ್ಯಂತ್ ಮತ್ತು ಪೋಲಿಸ್ ತಂಡ ಸ್ಥಳಕ್ಕೆ ಆಗಮಿಸಿ ತನಿಖೆ ಕೈಗೊಂಡಿದೆ.
ಮಂಗಳೂರು: ಇತ್ತೀಚೆಗೆ ನಿಧನ ಹೊಂದಿದ ಬಂಟರ ಯಾನೆ ನಾಡವರ ಮಾತೃ ಸಂಘದ ಮಾಜಿ ಕೋಶಾಧಿಕಾರಿ ಹಾಗೂ ಯೂನಿಯನ್ ಬ್ಯಾಂಕಿನ ನಿವೃತ್ತ…
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ್ಯರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್ನಲ್ಲಿ ಖಾಸಗಿ ಬಸ್ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…