ಪುತ್ತೂರು: ಪುತ್ತೂರು ಹೊರವಲಯದ ಬಡಗನ್ನೂರಿನಲ್ಲಿ ಗ್ರಾಮ ಪಂಚಾಯತ್ ಮಾಜಿ ಸದಸ್ಯರೋರ್ವರನ್ನು ಕಟ್ಟಿ ಹಾಕಿ ಅವರ ತಾಯಿಯಲ್ಲಿದ್ದ ಚಿನ್ನವನ್ನು ದರೋಡೆ ಮಾಡಿರುವುದಾಗಿ ತಿಳಿದು ಬಂದಿದೆ. ಪುತ್ತೂರು ಗ್ರಾಮಾಂತರ ಠಾಣೆ ದೂರು ದಾಖಲಾಗಿದೆ.
ಬಡಗನ್ನೂರು ಗ್ರಾಮ ಪಂಚಾಯತ್ ಮಾಜಿ ಸದಸ್ಯ ಗುರುಪ್ರಸಾದ್ ಬಡಗನ್ನೂರು ಇವರ ಮನೆಗೆ ತಡ ರಾತ್ರಿ ಸುಮಾರು 10 ಜನರ ತಂಡವೊಂದು ಬಾಗಿಲು ಮುರಿದು ಒಳನುಗ್ಗಿ ಗುರು ಮತ್ತು ತಾಯಿಯ ಕೈ ಕಾಲು ಕಟ್ಟಿ ಹಾಕಿ ತಾಯಿಯಲ್ಲಿದ್ದ ಚಿನ್ನ ಮತ್ತು ಸ್ವಲ್ಪ ಹಣವನ್ನು ದೋಚಿದ್ದಾರೆ. ದರೋಡೆ ಮಾಡಿ ಹಿಂತಿರುಗುವಾಗ ಅವರ ಮೊಬೈಲ್ ಗಳನ್ನು ಬಾವಿ ಎಸೆದು ಹೋಗಿದ್ದಾರೆ ಎಂದು ವರದಿಯಾಗಿದೆ.
ಇಂದು ಮದುವೆ ಸಮಾರಂಭದಲ್ಲಿ ಭಾಗವಹಿಸಲು ಗುರು ಅವರ ತಾಯಿ ಸಂಬಂಧಿಕರಿಂದ ಚಿನ್ನದ ಸರ ಪಡೆದುಕೊಂಡು ಬಂದಿದ್ದರು. ಅದನ್ನೇ ದರೋಡೆಕೋರರು ದೋಚಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಹೆಚ್ಚಿನ ಮಾಹಿತಿ ತನಿಖೆಯ ಬಳಿಕ ಲಭ್ಯವಾಗಲಿದೆ.
ಎಸ್ಪಿ ಸಿ ಬಿ ರಿಷ್ಯಂತ್ ಮತ್ತು ಪೋಲಿಸ್ ತಂಡ ಸ್ಥಳಕ್ಕೆ ಆಗಮಿಸಿ ತನಿಖೆ ಕೈಗೊಂಡಿದೆ.
ನೆರೆಮನೆಯ ದನಗಳು ತನ್ನ ತೋಟಕ್ಕೆ ಬಂದು ಹಾನಿಗೊಳಿಸಿವೆ ಎಂಬ ಆಕ್ರೋಶದಿಂದ ಹಟ್ಟಿಯಲ್ಲಿ ಕಟ್ಟಿಹಾಕಿದ್ದ ದನಗಳಿಗೆ ಕತ್ತಿಯಿಂದ ಕಡಿದು ಹಲ್ಲೆ ನಡೆಸಿ…
ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನಿಸಿದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಮಂಗಳೂರು ದಕ್ಷಿಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಿಷೇಧಿತ ಮಾದಕ…
ಪುರಸಭಾ ವ್ಯಾಪ್ತಿಯ ಪಾಣೆಮಂಗಳೂರು ಎಂಬಲ್ಲಿ ನೇತ್ರಾವತಿ ನದಿಯಿಂದ ಅಕ್ರಮವಾಗಿ ಮರಳು ತೆಗೆದು ಮಾರಾಟ ಮಾಡುತ್ತಿದ್ದಾರೆ ಎಂದು ಆರೋಪ ವ್ಯಕ್ತಪಡಿಸಿ, ಇವರ…
ಖಾಸಗಿ ಸಂಸ್ಥೆಗಳಿಗೆ ಸಂಬಂಧಿಸಿದಂತೆ ಶಾಲಾ ಮಕ್ಕಳನ್ನು ಕರೆದುಕೊಂಡು ಹೋಗುವ ಸ್ಕೂಲ್ ಬಸ್ಗಳು ಕಾನೂನು ಮತ್ತು ನಿಯಮಗಳನ್ನು ಪಾಲಿಸುತ್ತಿದೆಯಾ ಎಂಬ ಬಗ್ಗೆ…
ಕೆಲ ದಿನಗಳಿಂದ ಸುರಿಯುತ್ತಿರುವ ಮಳೆಗೆ ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿಯಿಂದ ಹಳೇ ಸೇತುವೆ ಕಡೆಗೆ ಸಾಗುವ ದಾರಿಯ…
ಹೆಬ್ರಿ ಸಮೀಪದ ಹೊಸೂರು ಎಂಬಲ್ಲಿ ಇಸ್ಪೀಟ್ ಜೂಜಾಟ ನಡೆಸುತ್ತಿದ್ದ ಆರೋಪದಲ್ಲಿ ಏಳು ಮಂದಿಯನ್ನು ಹೆಬ್ರಿ ಪೊಲೀಸರು ಬಂಧಿಸಿದ್ದಾರೆ. ಜೂಜಾಟ ನಡೆಯುತ್ತಿರುವ…