ಹುಲಿ ವೇಷವೆಂದರೆ ಬರಿ ಕುಣಿತವಲ್ಲ, ಅದು ಕರಾವಳಿಗರ ಭಾವನೆ ಹಾಗೂ ಆರಾಧನೆಯ ರೂಪವಾಗಿದೆ.
ಕಡಲನಗರಿಯಲ್ಲಿ ನಡೆಯುವಂತಹ ಪ್ರತಿಯೊಂದು ಹಿಂದೂ ಸನಾತನ ಧರ್ಮದ ಆಚರಣೆಗಳಲ್ಲಿ ಹುಲಿ ವೇಷ ಮಿಂಚುತ್ತದೆ. ಕೆಲವರು ಹರಕೆ ರೂಪದಲ್ಲಿ ಹುಲಿ ವೇಷವನ್ನು ಧಾರಣೆ ಮಾಡುವ ವಾಡಿಕೆ ಮಂಗಳೂರು, ಉಡುಪಿಗಳಲ್ಲಿ ಹೆಚ್ಚಾಗಿವೆ. ಅಂತೆಯೇ ಈ ವರ್ಷದ ಜನ್ಮಾಷ್ಟಮಿಯ ಪ್ರಯುಕ್ತ ಉಡುಪಿಯ ನಿಟ್ಟೂರಿನಲ್ಲಿ ಹುಲಿವೇಷ ಸ್ಪರ್ಧೆ ನಡೆದಿದ್ದು, ಈ ಹುಲಿವೇಷ ತೊಟ್ಟು ಕುಣಿಯುತಿದ್ದ ವೇಳೆ ವೇಷಧಾರಿ ಮೇಲೆ ಆವೇಶ ಬಂದ ಅಚ್ಚರಿ ಘಟನೆ ನಡೆದಿದೆ.
ಮೈಮೇಲೆ ಆವೇಶ ಬಂದು ವೇದಿಕೆಗೆ ಹಾಕಿದ್ದ ರೆಡ್ ಕಾರ್ಪೆಟ್ ನ್ನ ಬಾಯಲ್ಲಿ ಕಚ್ಚಿ ಹರಿದು ಹಾಕಿದ್ದಾರೆ. ಈ ಸಂದರ್ಭ ಹುಲಿವೇಷಧಾರಿಯನ್ನ ನಿಯಂತ್ರಣಕ್ಕೆ ತರುವಲ್ಲಿ ಸಹ ವೇಷಧಾರಿಗಳು ಹರಸಾಹಸ ಪಟ್ಟಿದ್ದು, ಈ ವೇಳೆ ಸಹವೇಷಧಾರಿಗೂ ಕಚ್ಚಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಇನ್ನೂ ಹರಕೆ ಹೊತ್ತು ವೇಷಹಾಕುವವರ ಮೈಮೇಲೆ ಆವೇಶ ಬರುತ್ತದೆ ಎಂಬ ಪ್ರತೀತಿ ಕರಾವಳಿಗರಲ್ಲಿದೆ. ಆವೇಶ ಬಂದಲ್ಲಿ ವೇಷಧಾರಿಯನ್ನ ನಿಯಂತ್ರಣಕ್ಕೆ ತರದೇ ಹೋದ ಪಕ್ಷದಲ್ಲಿ ಕಾಡಿಗೆ ಓಡಿಹೊಗಬಹುದು, ಇನ್ನೊಂದು ಜೀವಿಯ ಮೇಲೆ ಆಕ್ರಮಣ ಮಾಡಬಹುದು ಎಂಬ ನಂಬಿಕೆ ತುಳುವರದ್ದಾಗಿದೆ.
ಇನ್ನೂ ಉಡುಪಿಯಲ್ಲಿ ನಡೆದ ಘಟನೆ ಎಲ್ಲರನ್ನ ಆಶ್ಚರ್ಯ ಚಕಿತರನ್ನಾಗಿ ಮಾಡಿಸಿದಂತು ಸತ್ಯದ ಮಾತಾಗಿದೆ.
72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಅತ್ಯುತ್ತಮ ಪೋಷಕ ನಟಿ ರಾಷ್ಟ್ರೀಯ ಪ್ರಶಸ್ತಿ ಪಡೆದ ಕಾಸರಗೋಡು ವರ್ಕಾಡಿ ಮೂಲದ ರೂಪಶ್ರೀ ವರ್ಕಾಡಿ…
ಬಿಜೆಪಿಯ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ ಅವರು ತಮ್ಮ ಹುದ್ದೆ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನುವ…
ದೇಶದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಏರಿಳಿತ ಮುಂದುವರಿದಿದೆ. ಶುಕ್ರವಾರ ಚಿನ್ನದ ಬೆಲೆ ಪ್ರತಿ ಗ್ರಾಂಗೆ 25 ರೂಪಾಯಿ ಏರಿಕೆಯಾದರೂ,…
ತುಮಕೂರಿನಲ್ಲಿ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸುತ್ತಿದ್ದ ಪೊಲೀಸ್ ಸಿಬ್ಬಂದಿಯ ಪುತ್ರನೇ ಹೈಡ್ರೋ ಗಾಂಜಾ…
ಪಾಕಿಸ್ತಾನದ ಬಲೂಚಿಸ್ತಾನ್ ಪ್ರಾಂತ್ಯದ ಕ್ವೆಟ್ಟಾ ಸಮೀಪದ ಕಲ್ಲಿದ್ದಲು ಗಣಿಯಲ್ಲಿ ಸಂಭವಿಸಿದ ಭೀಕರ ಮೀಥೇನ್ ಅನಿಲ ಸ್ಫೋಟದಲ್ಲಿ ಕನಿಷ್ಠ 32 ಕಾರ್ಮಿಕರು…
ಬೀರತಮ್ಮನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೀರತಮ್ಮನಹಳ್ಳಿ ಕೆರೆಗೆ ಕಿಡಿಗೇಡಿಗಳು ಕ್ರಿಮಿನಾಶಕ ವಸ್ತು ಹಾಕಿದ ಪರಿಣಾಮ ಲಕ್ಷಾಂತರ ರೂಪಾಯಿ ಮೌಲ್ಯದ ಮೀನುಗಳ…