ಹುಲಿ ವೇಷವೆಂದರೆ ಬರಿ ಕುಣಿತವಲ್ಲ, ಅದು ಕರಾವಳಿಗರ ಭಾವನೆ ಹಾಗೂ ಆರಾಧನೆಯ ರೂಪವಾಗಿದೆ.
ಕಡಲನಗರಿಯಲ್ಲಿ ನಡೆಯುವಂತಹ ಪ್ರತಿಯೊಂದು ಹಿಂದೂ ಸನಾತನ ಧರ್ಮದ ಆಚರಣೆಗಳಲ್ಲಿ ಹುಲಿ ವೇಷ ಮಿಂಚುತ್ತದೆ. ಕೆಲವರು ಹರಕೆ ರೂಪದಲ್ಲಿ ಹುಲಿ ವೇಷವನ್ನು ಧಾರಣೆ ಮಾಡುವ ವಾಡಿಕೆ ಮಂಗಳೂರು, ಉಡುಪಿಗಳಲ್ಲಿ ಹೆಚ್ಚಾಗಿವೆ. ಅಂತೆಯೇ ಈ ವರ್ಷದ ಜನ್ಮಾಷ್ಟಮಿಯ ಪ್ರಯುಕ್ತ ಉಡುಪಿಯ ನಿಟ್ಟೂರಿನಲ್ಲಿ ಹುಲಿವೇಷ ಸ್ಪರ್ಧೆ ನಡೆದಿದ್ದು, ಈ ಹುಲಿವೇಷ ತೊಟ್ಟು ಕುಣಿಯುತಿದ್ದ ವೇಳೆ ವೇಷಧಾರಿ ಮೇಲೆ ಆವೇಶ ಬಂದ ಅಚ್ಚರಿ ಘಟನೆ ನಡೆದಿದೆ.
ಮೈಮೇಲೆ ಆವೇಶ ಬಂದು ವೇದಿಕೆಗೆ ಹಾಕಿದ್ದ ರೆಡ್ ಕಾರ್ಪೆಟ್ ನ್ನ ಬಾಯಲ್ಲಿ ಕಚ್ಚಿ ಹರಿದು ಹಾಕಿದ್ದಾರೆ. ಈ ಸಂದರ್ಭ ಹುಲಿವೇಷಧಾರಿಯನ್ನ ನಿಯಂತ್ರಣಕ್ಕೆ ತರುವಲ್ಲಿ ಸಹ ವೇಷಧಾರಿಗಳು ಹರಸಾಹಸ ಪಟ್ಟಿದ್ದು, ಈ ವೇಳೆ ಸಹವೇಷಧಾರಿಗೂ ಕಚ್ಚಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಇನ್ನೂ ಹರಕೆ ಹೊತ್ತು ವೇಷಹಾಕುವವರ ಮೈಮೇಲೆ ಆವೇಶ ಬರುತ್ತದೆ ಎಂಬ ಪ್ರತೀತಿ ಕರಾವಳಿಗರಲ್ಲಿದೆ. ಆವೇಶ ಬಂದಲ್ಲಿ ವೇಷಧಾರಿಯನ್ನ ನಿಯಂತ್ರಣಕ್ಕೆ ತರದೇ ಹೋದ ಪಕ್ಷದಲ್ಲಿ ಕಾಡಿಗೆ ಓಡಿಹೊಗಬಹುದು, ಇನ್ನೊಂದು ಜೀವಿಯ ಮೇಲೆ ಆಕ್ರಮಣ ಮಾಡಬಹುದು ಎಂಬ ನಂಬಿಕೆ ತುಳುವರದ್ದಾಗಿದೆ.
ಇನ್ನೂ ಉಡುಪಿಯಲ್ಲಿ ನಡೆದ ಘಟನೆ ಎಲ್ಲರನ್ನ ಆಶ್ಚರ್ಯ ಚಕಿತರನ್ನಾಗಿ ಮಾಡಿಸಿದಂತು ಸತ್ಯದ ಮಾತಾಗಿದೆ.
ನೆರೆಮನೆಯ ದನಗಳು ತನ್ನ ತೋಟಕ್ಕೆ ಬಂದು ಹಾನಿಗೊಳಿಸಿವೆ ಎಂಬ ಆಕ್ರೋಶದಿಂದ ಹಟ್ಟಿಯಲ್ಲಿ ಕಟ್ಟಿಹಾಕಿದ್ದ ದನಗಳಿಗೆ ಕತ್ತಿಯಿಂದ ಕಡಿದು ಹಲ್ಲೆ ನಡೆಸಿ…
ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನಿಸಿದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಮಂಗಳೂರು ದಕ್ಷಿಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಿಷೇಧಿತ ಮಾದಕ…
ಪುರಸಭಾ ವ್ಯಾಪ್ತಿಯ ಪಾಣೆಮಂಗಳೂರು ಎಂಬಲ್ಲಿ ನೇತ್ರಾವತಿ ನದಿಯಿಂದ ಅಕ್ರಮವಾಗಿ ಮರಳು ತೆಗೆದು ಮಾರಾಟ ಮಾಡುತ್ತಿದ್ದಾರೆ ಎಂದು ಆರೋಪ ವ್ಯಕ್ತಪಡಿಸಿ, ಇವರ…
ಖಾಸಗಿ ಸಂಸ್ಥೆಗಳಿಗೆ ಸಂಬಂಧಿಸಿದಂತೆ ಶಾಲಾ ಮಕ್ಕಳನ್ನು ಕರೆದುಕೊಂಡು ಹೋಗುವ ಸ್ಕೂಲ್ ಬಸ್ಗಳು ಕಾನೂನು ಮತ್ತು ನಿಯಮಗಳನ್ನು ಪಾಲಿಸುತ್ತಿದೆಯಾ ಎಂಬ ಬಗ್ಗೆ…
ಕೆಲ ದಿನಗಳಿಂದ ಸುರಿಯುತ್ತಿರುವ ಮಳೆಗೆ ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿಯಿಂದ ಹಳೇ ಸೇತುವೆ ಕಡೆಗೆ ಸಾಗುವ ದಾರಿಯ…
ಹೆಬ್ರಿ ಸಮೀಪದ ಹೊಸೂರು ಎಂಬಲ್ಲಿ ಇಸ್ಪೀಟ್ ಜೂಜಾಟ ನಡೆಸುತ್ತಿದ್ದ ಆರೋಪದಲ್ಲಿ ಏಳು ಮಂದಿಯನ್ನು ಹೆಬ್ರಿ ಪೊಲೀಸರು ಬಂಧಿಸಿದ್ದಾರೆ. ಜೂಜಾಟ ನಡೆಯುತ್ತಿರುವ…