ಜನ ಮನದ ನಾಡಿ ಮಿಡಿತ

ಇತ್ತೀಚಿನ ಸುದ್ದಿ
ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..! ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…! ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು. ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…! ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು. ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..!
Advertisement

ಮೂಡುಬಿದಿರೆಯಲ್ಲಿ ಯಕ್ಷಗಾನೀಯ ಮೊಸರು ಕುಡಿಕೆ

ಮೂಡುಬಿದಿರೆ ಕರಾವಳಿ ಮಾತ್ರವಲ್ಲ ನಾಡಿನಲ್ಲೇ ವಿಶೇಷ ಎನ್ನಬಹುದಾದ ಯಕ್ಷಗಾನೀಯ ಹಿನ್ನೆಲೆಯ ಶ್ರೀ ಕೃಷ್ಣ ವೇಷಧಾರಿಯೇ ಮೊಸರ ಕುಡಿಕೆಗಳನ್ನು ಚಕ್ರಾಯುಧದಿಂದ ಒಡೆಯುವ ವಿಶೇಷ ಮೊಸರು ಕುಡಿಕೆ ಉತ್ಸವ ಗುರುವಾರ ಮೂಡುಬಿದಿರೆಯಲ್ಲಿ ನಡೆಯಲಿದೆ.

ಪೇಟೆಯ ರಾಜಬೀದಿಗೆ ಅಡ್ಡಲಾಗಿ ಕಟ್ಟುವ ಹಗ್ಗಗಳಲ್ಲಿ ತೂಗುವ ಮೊಸರ ಕುಡಿಕೆಗಳನ್ನು ಶ್ರೀಕೃಷ್ಣನೇ ಇಲ್ಲಿ ಯಕ್ಷಗಾನೀಯ ಚೆಂಡೆ ಮದ್ದಳೆ ಜಾಗಟೆಯ ಹಿಮ್ಮೇಳಕ್ಕೆ ಕುಣಿದು ಹಗ್ಗ ಜಗ್ಗಾಡುತ್ತಾ ಸತಾಯಿಸುವವರನ್ನೂ ಮಣಿಸಿ ಜಿಗಿದು ಮಡಿಕೆಗಳನ್ನು ಚಕ್ರಾಯುಧದಿಂದ ಒಡೆಯುವ ಸೊಬಗು ಬೇರೆಲ್ಲೂ ಕಾಣದ ವಿಶೇಷತೆ.

ಶತಮಾನ ಪೂರೈಸಿ ಮುನ್ನಡೆದಿರುವ ಈ ವಿಶಿಷ್ಟ ಉತ್ಸವ ಇಲ್ಲಿನ ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಶ್ರೀ ಕೃಷ್ಣ ಜನ್ಮಾಷ್ಟಮಿ ಉತ್ಸವಕ್ಕೆ ಪೂರಕವಾಗಿ ನಡೆದು ಬಂದಿದೆ.

ಪೇಟೆಯಲ್ಲಿ ಉತ್ಸವಕ್ಕೆ ಪೂರಕವಾಗಿ ಸಾಂಸ್ಕೃತಿಕ ಕಲಾಪಗಳು ರಾಜಬೀದಿಯನ್ನು ರಂಗೇರಿಸಲು ಸಜ್ಜಾಗಿ ಶ್ರೀಕೃಷ್ಣ ಫ್ರೆಂಡ್ಸ್‌ ಸರ್ಕಲ್: ಪೇಟೆಯ ಕೆನರಾ ಬ್ಯಾಂಕ್‌ ಜಂಕ್ಷನ್ ಬಳಿ ತನ್ನ 37 ನೇ ವರ್ಷದ ಸಾಂಸ್ಕೃತಿಕ ಕಲಾಪಕ್ಕೆ ಮುಂದಾಗಿರುವ ಶ್ರೀ ಕೃಷ್ಣ ಫ್ರೆಂಡ್ಸ್‌ ಸರ್ಕಲ್ ಬೆಳಿಗ್ಗೆ ಭಜನಾ ಕಾರ್ಯಕ್ರಮ,ಸ್ಯಾಕ್ರೋಫೋನ್ ವಾದನ, ಸಂಗೀತ ಗಾನ ಸಂಭ್ರಮ ಹಮ್ಮಿಕೊಂಡಿದೆ. ಸಂಜೆ ವಿಶ್ರಾಂತ ಪ್ರಾಚಾರ್ಯ, ಕಂಬಳ ವಿದ್ವಾಂಸ ಕೆ. ಗುಣಪಾಲ ಕಡಂಬ ಅವರಿಗೆ ಶ್ರೀ ಕೃಷ್ಣ ಪ್ರಶಸ್ತಿ ಪ್ರದಾನ ದ ಸಭಾ ಕಾರ್ಯಕ್ರಮ, ಬಹುಮಾನ ವಿತರಣೆ ಗಣ್ಯರ ಕೂಡುವಿಕೆಯಲ್ಲಿ ನಡೆಯಲಿದೆ.

ನ್ಯೂಸೆಂಟ್ರಲ್ ಫ್ರೆಂಡ್ಸ್‌ ಸರ್ಕಲ್‌ ಪೇಟೆಯ ಶ್ರೀ ಹನುಮಂತ ದೇವಸ್ಥಾನದ ಬಳಿ ಅಪರಾಹ್ನ 3ರಿಂದ ಸಂಗೀತ ರಸಮ೦ಜರಿ ನೃತ್ಯ ಕಾರ್ಯಕ್ರಮ ಹಮ್ಮಿಕೊ೦ಡಿದೆ. ಶ್ರೀಕೃಷ್ಣ ಫ್ರೆಂಡ್ಸ್‌ ಸರ್ಕಲ್: ಕೃಷ್ಣತ್ಸವ: ಜವನೆರ್‌ಬೆದ್ರ ಸಂಘಟನೆ ಇಲ್ಲಿನ ನಿಶ್ಮಿತಾ ಸರ್ಕಲ್ ಬಳಿ ಕೃಷ್ಣತ್ಸವ ಹಮ್ಮಿಕೊಂಡಿದೆ. ಸಂಜೆ 5ರಿಂದ ಯಕ್ಷ-ಗಾನ ವೈಭವ, ಯಕ್ಷಗಾನ ಸಂಘಟಕ ಎಂ.ದೇವಾನಂದ ಭಟ್ ಅವರಿಗೆ ಸಮ್ಮಾನ, ಬಳಿಕ ಶ್ರೀಕೃಷ್ಣಾಂತರಂಗ ಯಕ್ಷಗಾನ ಪ್ರದರ್ಶನವಿದೆ

Leave a Reply

Your email address will not be published. Required fields are marked *

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…!

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು.

ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..!

ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!

ಉಡುಪಿ: ನಾವುಂದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕಾರು ಮತ್ತು ಟ್ರಕ್ ನಡುವೆ ಭೀಕರ ಅಪಘಾತ….!

ಪುಂಜಾಲಕಟ್ಟೆ: ಪುಂಜಾಲಕಟ್ಟೆಯ ಬಸವನಗುಡಿ ಎಂಬಲ್ಲಿ ಸ್ಕೂಟರ್‌ಗೆ ಕೆ.ಎಸ್ ಆರ್ ಟಿಸಿ ಬಸ್ ಡಿ*ಕ್ಕಿ….!

error: Content is protected !!