ಮೂಡುಬಿದಿರೆ ಕರಾವಳಿ ಮಾತ್ರವಲ್ಲ ನಾಡಿನಲ್ಲೇ ವಿಶೇಷ ಎನ್ನಬಹುದಾದ ಯಕ್ಷಗಾನೀಯ ಹಿನ್ನೆಲೆಯ ಶ್ರೀ ಕೃಷ್ಣ ವೇಷಧಾರಿಯೇ ಮೊಸರ ಕುಡಿಕೆಗಳನ್ನು ಚಕ್ರಾಯುಧದಿಂದ ಒಡೆಯುವ ವಿಶೇಷ ಮೊಸರು ಕುಡಿಕೆ ಉತ್ಸವ ಗುರುವಾರ ಮೂಡುಬಿದಿರೆಯಲ್ಲಿ ನಡೆಯಲಿದೆ.
ಪೇಟೆಯ ರಾಜಬೀದಿಗೆ ಅಡ್ಡಲಾಗಿ ಕಟ್ಟುವ ಹಗ್ಗಗಳಲ್ಲಿ ತೂಗುವ ಮೊಸರ ಕುಡಿಕೆಗಳನ್ನು ಶ್ರೀಕೃಷ್ಣನೇ ಇಲ್ಲಿ ಯಕ್ಷಗಾನೀಯ ಚೆಂಡೆ ಮದ್ದಳೆ ಜಾಗಟೆಯ ಹಿಮ್ಮೇಳಕ್ಕೆ ಕುಣಿದು ಹಗ್ಗ ಜಗ್ಗಾಡುತ್ತಾ ಸತಾಯಿಸುವವರನ್ನೂ ಮಣಿಸಿ ಜಿಗಿದು ಮಡಿಕೆಗಳನ್ನು ಚಕ್ರಾಯುಧದಿಂದ ಒಡೆಯುವ ಸೊಬಗು ಬೇರೆಲ್ಲೂ ಕಾಣದ ವಿಶೇಷತೆ.
ಶತಮಾನ ಪೂರೈಸಿ ಮುನ್ನಡೆದಿರುವ ಈ ವಿಶಿಷ್ಟ ಉತ್ಸವ ಇಲ್ಲಿನ ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಶ್ರೀ ಕೃಷ್ಣ ಜನ್ಮಾಷ್ಟಮಿ ಉತ್ಸವಕ್ಕೆ ಪೂರಕವಾಗಿ ನಡೆದು ಬಂದಿದೆ.
ಪೇಟೆಯಲ್ಲಿ ಉತ್ಸವಕ್ಕೆ ಪೂರಕವಾಗಿ ಸಾಂಸ್ಕೃತಿಕ ಕಲಾಪಗಳು ರಾಜಬೀದಿಯನ್ನು ರಂಗೇರಿಸಲು ಸಜ್ಜಾಗಿ ಶ್ರೀಕೃಷ್ಣ ಫ್ರೆಂಡ್ಸ್ ಸರ್ಕಲ್: ಪೇಟೆಯ ಕೆನರಾ ಬ್ಯಾಂಕ್ ಜಂಕ್ಷನ್ ಬಳಿ ತನ್ನ 37 ನೇ ವರ್ಷದ ಸಾಂಸ್ಕೃತಿಕ ಕಲಾಪಕ್ಕೆ ಮುಂದಾಗಿರುವ ಶ್ರೀ ಕೃಷ್ಣ ಫ್ರೆಂಡ್ಸ್ ಸರ್ಕಲ್ ಬೆಳಿಗ್ಗೆ ಭಜನಾ ಕಾರ್ಯಕ್ರಮ,ಸ್ಯಾಕ್ರೋಫೋನ್ ವಾದನ, ಸಂಗೀತ ಗಾನ ಸಂಭ್ರಮ ಹಮ್ಮಿಕೊಂಡಿದೆ. ಸಂಜೆ ವಿಶ್ರಾಂತ ಪ್ರಾಚಾರ್ಯ, ಕಂಬಳ ವಿದ್ವಾಂಸ ಕೆ. ಗುಣಪಾಲ ಕಡಂಬ ಅವರಿಗೆ ಶ್ರೀ ಕೃಷ್ಣ ಪ್ರಶಸ್ತಿ ಪ್ರದಾನ ದ ಸಭಾ ಕಾರ್ಯಕ್ರಮ, ಬಹುಮಾನ ವಿತರಣೆ ಗಣ್ಯರ ಕೂಡುವಿಕೆಯಲ್ಲಿ ನಡೆಯಲಿದೆ.
ನ್ಯೂಸೆಂಟ್ರಲ್ ಫ್ರೆಂಡ್ಸ್ ಸರ್ಕಲ್ ಪೇಟೆಯ ಶ್ರೀ ಹನುಮಂತ ದೇವಸ್ಥಾನದ ಬಳಿ ಅಪರಾಹ್ನ 3ರಿಂದ ಸಂಗೀತ ರಸಮ೦ಜರಿ ನೃತ್ಯ ಕಾರ್ಯಕ್ರಮ ಹಮ್ಮಿಕೊ೦ಡಿದೆ. ಶ್ರೀಕೃಷ್ಣ ಫ್ರೆಂಡ್ಸ್ ಸರ್ಕಲ್: ಕೃಷ್ಣತ್ಸವ: ಜವನೆರ್ಬೆದ್ರ ಸಂಘಟನೆ ಇಲ್ಲಿನ ನಿಶ್ಮಿತಾ ಸರ್ಕಲ್ ಬಳಿ ಕೃಷ್ಣತ್ಸವ ಹಮ್ಮಿಕೊಂಡಿದೆ. ಸಂಜೆ 5ರಿಂದ ಯಕ್ಷ-ಗಾನ ವೈಭವ, ಯಕ್ಷಗಾನ ಸಂಘಟಕ ಎಂ.ದೇವಾನಂದ ಭಟ್ ಅವರಿಗೆ ಸಮ್ಮಾನ, ಬಳಿಕ ಶ್ರೀಕೃಷ್ಣಾಂತರಂಗ ಯಕ್ಷಗಾನ ಪ್ರದರ್ಶನವಿದೆ
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…