ಜನ ಮನದ ನಾಡಿ ಮಿಡಿತ

Advertisement

ಪುನರೂರು ನಂದಿ ಫ್ರೆಂಡ್ಸ್ ವತಿಯಿಂದ 25ನೇ ವರ್ಷದ ಮೊಸರು ಕುಡಿಕೆ ಉತ್ಸವದ ಅಂಗವಾಗಿ ಧಾರ್ಮಿಕ ಸಭೆ

ಮುಲ್ಕಿ: ಪುನರೂರು ನಂದಿ ಫ್ರೆಂಡ್ಸ್ ವತಿಯಿಂದ 25ನೇ ವರ್ಷದ ಮೊಸರು ಕುಡಿಕೆ ಉತ್ಸವದ ಅಂಗವಾಗಿ ಧಾರ್ಮಿಕ ಸಭೆ ಪುನರೂರು ಶ್ರೀ ವಿಶ್ವನಾಥ ದೇವಸ್ಥಾನದ ದ್ವಾರದ ಬಳಿ ಬೃಹತ್ ವೇದಿಕೆಯಲ್ಲಿ ನಡೆದಿದೆ.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಸಾಪ ಮಾಜಿ ರಾಜ್ಯಾಧ್ಯಕ್ಷ ಧರ್ಮದರ್ಶಿ ಡಾ. ಹರಿಕೃಷ್ಣ ಪುನರೂರು ವಹಿಸಿದ್ರು, ಬಳಿಕ, ಕಟೀಲು ಕ್ಷೇತ್ರದ ಅರ್ಚಕ ಲಕ್ಷ್ಮೀನಾರಾಯಣ ಆಸ್ರಣ್ಣ ಆಶೀರ್ವಚನ ನೀಡಿ, ದೇವರ ಸೇವೆಯ ಮನೋಭಾವದಿಂದ ಶಾಂತಿ ನೆಮ್ಮದಿ ಸಾಧ್ಯವಾಗಿದ್ದು ದಾರ್ಮಿಕ ಹಾಗೂ ಗ್ರಾಮೀಣ ಭಾಗದಲ್ಲಿ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಸಂಸ್ಥೆಯ ಪ್ರೋತ್ಸಾಹ ಅಭಿನಂದನೀಯ ಎಂದರು.


ಮುಖ್ಯ ಅತಿಥಿಗಳಾಗಿ ಪುನರೂರು ವಿಶ್ವನಾಥ ದೇವಸ್ಥಾನದ ಆಡಳಿತ ಮೊಕ್ತೇಸರ ಪಟೇಲ್ ವಾಸುದೇವರಾವ್, ಉದ್ಯಮಿ ರಾಮಮೂರ್ತಿ ರಾವ್, ಕಿನ್ನಿಗೋಳಿ ಯುಗಪುರುಷ ಸಂಪಾದಕ ಭುವನಾಭಿರಾಮ ಉಡುಪ, ಉದ್ಯಮಿ ಶ್ರೀಕಾಂತ್ ಶೆಟ್ಟಿ ಕೆಂಚನಕೆರೆ, ದ.ಕ.ಪದ್ಮಶಾಲಿ ಸಭಾದ ಪುರಂದರ ಶೆಟ್ಟಿಗಾರ್, ಉದ್ಯಮಿಗಳಾದ ರಘುರಾಮ ಪುನರೂರು, ಸುರೇಶ್ ರಾವ್ ಶ್ರೀನಿಧಿ, ಅಜಿತ್ ಕೆರೆಕಾಡು, ಪೃಥ್ವಿರಾಜ್ ಆಚಾರ್ಯ ಕಿನ್ನಿಗೋಳಿ, ನಂದಿ ಫ್ರೆಂಡ್ಸ್ ನ ಅಧ್ಯಕ್ಷ ವಿಶ್ವನಾಥ ರಾವ್, ಪುನರೂರು ಪ್ರತಿಷ್ಠಾನದ ಅಧ್ಯಕ್ಷ ದೇವ ಪ್ರಸಾದ್ ಪುನರೂರು, ಗೋಪಿನಾಥ ರಾವ್ ಮತ್ತಿತರರು ಉಪಸ್ಥಿತರಿದ್ದರು.


ನಿತೇಶ್ ಶೆಟ್ಟಿ ಎಕ್ಕಾರ್ ಕಾರ್ಯಕ್ರಮವನ್ನು ನಿರೂಪಿಸಿದ್ದು, ಬಳಿಕ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ನಡೆದ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು.

Leave a Reply

Your email address will not be published. Required fields are marked *

ಉಡುಪಿ: ತುಳುನಾಡಿಗೆ ಕಯ್ಯಾರ ಕಿಞ್ಞಣ್ಣ ರೈ ಕೊಡುಗೆ ಅಪಾರ: ಜಯಕರ ಶೆಟ್ಟಿ

ಮಂಗಳೂರು: ಮಂಗಳೂರು ಪತ್ರಕರ್ತ ಸುರೇಶ್ ಡಿ. ಪಳ್ಳಿಗೆ ನಾರದ ಪುರಸ್ಕಾರ ಘೋಷಣೆ

ರಾಷ್ಟ್ರ ಪ್ರಶಸ್ತಿ ವಿಜೇತೆ ರೂಪಶ್ರೀ ವರ್ಕಾಡಿಗೆ ಬಿಜೆಪಿ ಜಿಲ್ಲಾ ಘಟಕದಿಂದ ಸನ್ಮಾನ…!

ಬಿಜೆಪಿ ರಾಷ್ಟ್ರೀಯ ವಕ್ತಾರ ಹುದ್ದೆಗೆ ಪೂನಾವಾಲಾ ಗುಡ್‌ಬೈ?…

ಚಿನ್ನದ ದರದಲ್ಲಿ ಬದಲಾವಣೆ; ಹೊಸ ಬೆಲೆ ಪ್ರಕಟ…!

ತುಮಕೂರು: ಪೊಲೀಸ್ ಪುತ್ರನೇ ಹೈಡ್ರೋ ಗಾಂಜಾ ಜಾಲದ ರೂವಾರಿ..!

ಪಾಕಿಸ್ತಾನದಲ್ಲಿ ಭೀಕರ ಗಣಿ ಸ್ಫೋಟ; 32 ಕಾರ್ಮಿಕರ ದುರ್ಮರಣ…!

ಬೀರತಮ್ಮನಹಳ್ಳಿ ಕೆರೆಯಲ್ಲಿ ಮೀನುಗಳ ಮಾರಣಹೋಮ; ತನಿಖೆ ಆರಂಭ…!

ಕುಂದಾಪುರ: ಐವನ್ ಮಸ್ಕರೇನಸ್ ಹತ್ಯೆ; ಪೊಲೀಸ್ ತನಿಖೆಯಲ್ಲಿ ಹೊಸ ಮಾಹಿತಿ..!

error: Content is protected !!