ಮುಲ್ಕಿ: ಪುನರೂರು ನಂದಿ ಫ್ರೆಂಡ್ಸ್ ವತಿಯಿಂದ 25ನೇ ವರ್ಷದ ಮೊಸರು ಕುಡಿಕೆ ಉತ್ಸವದ ಅಂಗವಾಗಿ ಧಾರ್ಮಿಕ ಸಭೆ ಪುನರೂರು ಶ್ರೀ ವಿಶ್ವನಾಥ ದೇವಸ್ಥಾನದ ದ್ವಾರದ ಬಳಿ ಬೃಹತ್ ವೇದಿಕೆಯಲ್ಲಿ ನಡೆದಿದೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಸಾಪ ಮಾಜಿ ರಾಜ್ಯಾಧ್ಯಕ್ಷ ಧರ್ಮದರ್ಶಿ ಡಾ. ಹರಿಕೃಷ್ಣ ಪುನರೂರು ವಹಿಸಿದ್ರು, ಬಳಿಕ, ಕಟೀಲು ಕ್ಷೇತ್ರದ ಅರ್ಚಕ ಲಕ್ಷ್ಮೀನಾರಾಯಣ ಆಸ್ರಣ್ಣ ಆಶೀರ್ವಚನ ನೀಡಿ, ದೇವರ ಸೇವೆಯ ಮನೋಭಾವದಿಂದ ಶಾಂತಿ ನೆಮ್ಮದಿ ಸಾಧ್ಯವಾಗಿದ್ದು ದಾರ್ಮಿಕ ಹಾಗೂ ಗ್ರಾಮೀಣ ಭಾಗದಲ್ಲಿ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಸಂಸ್ಥೆಯ ಪ್ರೋತ್ಸಾಹ ಅಭಿನಂದನೀಯ ಎಂದರು.
ಮುಖ್ಯ ಅತಿಥಿಗಳಾಗಿ ಪುನರೂರು ವಿಶ್ವನಾಥ ದೇವಸ್ಥಾನದ ಆಡಳಿತ ಮೊಕ್ತೇಸರ ಪಟೇಲ್ ವಾಸುದೇವರಾವ್, ಉದ್ಯಮಿ ರಾಮಮೂರ್ತಿ ರಾವ್, ಕಿನ್ನಿಗೋಳಿ ಯುಗಪುರುಷ ಸಂಪಾದಕ ಭುವನಾಭಿರಾಮ ಉಡುಪ, ಉದ್ಯಮಿ ಶ್ರೀಕಾಂತ್ ಶೆಟ್ಟಿ ಕೆಂಚನಕೆರೆ, ದ.ಕ.ಪದ್ಮಶಾಲಿ ಸಭಾದ ಪುರಂದರ ಶೆಟ್ಟಿಗಾರ್, ಉದ್ಯಮಿಗಳಾದ ರಘುರಾಮ ಪುನರೂರು, ಸುರೇಶ್ ರಾವ್ ಶ್ರೀನಿಧಿ, ಅಜಿತ್ ಕೆರೆಕಾಡು, ಪೃಥ್ವಿರಾಜ್ ಆಚಾರ್ಯ ಕಿನ್ನಿಗೋಳಿ, ನಂದಿ ಫ್ರೆಂಡ್ಸ್ ನ ಅಧ್ಯಕ್ಷ ವಿಶ್ವನಾಥ ರಾವ್, ಪುನರೂರು ಪ್ರತಿಷ್ಠಾನದ ಅಧ್ಯಕ್ಷ ದೇವ ಪ್ರಸಾದ್ ಪುನರೂರು, ಗೋಪಿನಾಥ ರಾವ್ ಮತ್ತಿತರರು ಉಪಸ್ಥಿತರಿದ್ದರು.
ನಿತೇಶ್ ಶೆಟ್ಟಿ ಎಕ್ಕಾರ್ ಕಾರ್ಯಕ್ರಮವನ್ನು ನಿರೂಪಿಸಿದ್ದು, ಬಳಿಕ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ನಡೆದ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು.
ತುಳುನಾಡಿನ ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿಯ ಬೆಳವಣಿಗೆಗೆ ಕಯ್ಯಾರ ಕಿಞ್ಞಣ್ಣ ರೈ ಅವರ ಕೊಡುಗೆ ಅಪಾರವಾಗಿದ್ದು, ಅವರನ್ನು ಈ ನಾಡಿನ…
ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಕಾರಣಗಿರಿ ಗ್ರಾಮ ಭಾರತಿ ಟ್ರಸ್ಟ್ ಹಾಗೂ ಕಲಾದರ್ಶನ ಮಾಸಪತ್ರಿಕೆ ಆಶ್ರಯದಲ್ಲಿ ಪ್ರಥಮ ಸುದ್ದಿ ವಾಹಕ…
72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಅತ್ಯುತ್ತಮ ಪೋಷಕ ನಟಿ ರಾಷ್ಟ್ರೀಯ ಪ್ರಶಸ್ತಿ ಪಡೆದ ಕಾಸರಗೋಡು ವರ್ಕಾಡಿ ಮೂಲದ ರೂಪಶ್ರೀ ವರ್ಕಾಡಿ…
ಬಿಜೆಪಿಯ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ ಅವರು ತಮ್ಮ ಹುದ್ದೆ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನುವ…
ದೇಶದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಏರಿಳಿತ ಮುಂದುವರಿದಿದೆ. ಶುಕ್ರವಾರ ಚಿನ್ನದ ಬೆಲೆ ಪ್ರತಿ ಗ್ರಾಂಗೆ 25 ರೂಪಾಯಿ ಏರಿಕೆಯಾದರೂ,…
ತುಮಕೂರಿನಲ್ಲಿ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸುತ್ತಿದ್ದ ಪೊಲೀಸ್ ಸಿಬ್ಬಂದಿಯ ಪುತ್ರನೇ ಹೈಡ್ರೋ ಗಾಂಜಾ…