ಲೊರೆಟ್ಟೊ ಮಾತಾ ಚರ್ಚಿನಲ್ಲಿ ಕನ್ಯಾ ಮಾತೆಯ ಹುಟ್ಟುಹಬ್ಬದ ದಿನವಾದ (ಮೊಂತಿ ಫೆಸ್ತ್ ) ತೆನೆಹಬ್ಬ ವನ್ನು ಭಕ್ತಿ ಪೂರ್ವಕವಾಗಿ ವಿಜ್ರಂಭಣೆಯಿಂದ ಆಚರಿಸಲಾಯಿತು.
ಚರ್ಚ್ ಧರ್ಮಗುರುಗಳಾದ ವ. ಫ್ರಾನ್ಸಿಸ್ ಕ್ರಾಸ್ತ , ಲೋರೆಟ್ಟೋ ಆಂಗ್ಲಮಾಧ್ಯಮ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ವಂ. ಜೇಸನ್ ಮೋನಿಸ್ ಪ್ರಧಾನ ಧರ್ಮಗುರುಗಳಾಗಿ ಹಾಗೂ ವಂ ಪ್ರತಾಪ್ ನಾಯಕ್ ಬಲಿಪೂಜೆಯನ್ನು ಅರ್ಪಿಸಿದರು. ಚರ್ಚ್ ಧರ್ಮಗುರುಗಳು ದೆವರವಾಕ್ಯದ ಸಂದೇಶದಲ್ಲಿ ಹೆಣ್ಣು ಮಕ್ಕಳು ಹಾಗೂ ಮಹಿಳೆಯರ ತ್ಯಾಗಮಯ ಜೀವನದ ಬಗ್ಗೆ ಅರ್ಥ ಪೂರ್ಣ ಪ್ರವಚನ ನೀಡಿದರು.
ಪೂಜೆಯಲ್ಲಿ ಮಕ್ಕಳು,ಭಕ್ತಾದಿಗಳು ಭಕ್ತಿ-ಶ್ರದ್ಧೆಯಿಂದ ಪಾಲ್ಗೊಂಡರು. ಕನ್ಯಾಮಾತೆಯ ಪಲ್ಲಕ್ಕಿಯನ್ನು ಮೆರವಣಿಗೆಯಲ್ಲಿ ಕೊಂಡೊಯ್ಯಲಾಯಿತು..ಬಲಿ ಪೂಜೆಯಲ್ಲಿ ಭಕ್ತಾದಿಗಳು ಭಕ್ತಿಯಿಂದ ಎಲ್ಲಾರೂ ಪಾಲ್ಗೊಳ್ಳಲುಚರ್ಚ್ ವಠಾರದಲ್ಲಿ ಎಲ್ ಇ ಡಿ ಪರದೆಯನ್ನು ಅಳವಡಿಸಲಾಗಿತ್ತು. ಕಳೆದ 9 ದಿನಗಳಿಂದ ನಡೆದ ಮಾತೆ ಮರಿಯಮ್ಮನವರ ನೋವೆನಾ ಪ್ರಾರ್ಥನೆಗೆ ಮಕ್ಕಳು ಹೂಗಳನ್ನು ಅರ್ಪಿಸಿದರು ಹಾಗೆ ಮಕ್ಕಳಿಗೆ ಸಿಹಿತಿಂಡಿಗಳನ್ನು ವಿತರಿಸಲಾಯಿತು . ವಿವಿಧಬಗೆಯ ಹೂಗಳನ್ನು ತಂದ ಮಕ್ಕಳಿಗೆ ಬಹುಮಾನ ವಿತರಿಸಲಾಯಿತು ಹಾಗೂ ಸಂಭ್ರಮಕ್ಕೆ ಸಹಕರಿಸಿದ ಎಲ್ಲರಿಗೂ ತೆನೆಯನ್ನು ನೀಡಿ ಗೌರವಿಸಲಾಯಿತು.
ಬಲಿ ಪೂಜೆ ಬಳಿಕ ಆಗಮಿಸಿದ ಭಕ್ತಾದಿಗಳಿಗೆ ಉಪಹಾರ , ಹಾಗೂ ಕಬ್ಬನ್ನು ನೀಡಲಾಯಿತು. ಮಾತೆ ಮರಿಯಮ್ಮನವರ ಪಲ್ಲಕ್ಕಿಯನ್ನು ಹೂಗಳಿಂದ ಶೃಂಗರಿಸಲಾಗಿತ್ತು. ಚರ್ಚ್ ಪಾಲನಾ ಮಂಡಳಿ ನೇತೃತ್ವ ವಹಿಸಿದ್ದರು. ಧರ್ಮಗುರುಗಳು ಇಂದಿನ ಸಮಾರಂಭಕ್ಕೆ ಸಹಕರಿಸಿದ ಎಲ್ಲರನ್ನೂ ಧರ್ಮ ಗುರುಗಳು ಸ್ಮರಿಸಿ, ವಂದಿಸಿದರು
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…