ಜನ ಮನದ ನಾಡಿ ಮಿಡಿತ

Advertisement

ಬೆಂಗಳೂರು ಜೋಡಿ ಕೊಲೆ ಪ್ರಕರಣ: ಮಹಿಳೆಯ ಪ್ರಿಯಕರ ಬಂಧನ

ಬೆಂಗಳೂರಿನಲ್ಲಿ ಮಹಿಳೆ ಮತ್ತು ಆತನ ಮಗನ ಜೋಡಿ ಕೊಲೆ ಪ್ರಕರಣವನ್ನು ಆಕೆಯ ಪ್ರಿಯಕರನ ಬಂಧನದಿಂದ ಭೇದಿಸಲಾಗಿದೆ ಎಂದು ಕರ್ನಾಟಕ ಪೊಲೀಸರು ತಿಳಿಸಿದ್ದಾರೆ.


ನವನೀತಾ (33) ಕಾಲ್ ಸೆಂಟರ್ ಉದ್ಯೋಗಿ ಮತ್ತು ಅವರ 11 ವರ್ಷದ ಮಗ ಸೃಜನ್ ಅವರು ರವೀಂದ್ರನಗರದ ನಿವಾಸದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.

ಆರೋಪಿ 38 ವರ್ಷದ ಶೇಖರ್ ಅಲಿಯಾಸ್ ಶೇಖರಪ್ಪ ಎಂದು ಗುರುತಿಸಲಾಗಿದ್ದು, ಇವರು ಎಲೆಕ್ಟ್ರಿಷಿಯನ್ ಆಗಿ ಕೆಲಸ ಮಾಡುತಿದ್ದರು. ಶೇಖರ್‌ಗೆ ನವನೀತಾ ಪರಿಚಯವಾಗಿದ್ದು, ಆಕೆಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದನು ಎಂಬುದು ತನಿಖೆಯಿಂದ ತಿಳಿದುಬಂದಿದೆ. ಲೋಕೇಶ್ ಎಂಬ ಹೆಸರಿನ ವ್ಯಕ್ತಿಯೊಂದಿಗೆ ಸ್ನೇಹ ಬೆಳೆಸಿದ್ದಳು.
ವಿಷಯ ತಿಳಿದ ಶೇಖರ್ ನವನೀತಾ ಜೊತೆ ವಾಗ್ವಾದ ನಡೆಸಿದ್ದಾನೆ.

ಮಂಗಳವಾರ ರಾತ್ರಿ ಆಕೆಯ ನಿವಾಸಕ್ಕೆ ಬಂದ ನಂತರ ಶೇಖರ್ ಮತ್ತೊಮ್ಮೆ ವಿಷಯ ಪ್ರಸ್ತಾಪಿಸಿ ಆಕೆಯ ಕತ್ತು ಸೀಳಿದ್ದಾನೆ. ಬಳಿಕ ಆಕೆಯ ಮಗ ಸೃಜನ್ ನನ್ನು ತಲೆದಿಂಬಿನಿಂದ ಉಸಿರುಗಟ್ಟಿಸಿ ಕೊಲೆ ಮಾಡಿ,
ಆರೋಪಿ ಎಲ್ ಪಿಜಿ ಗ್ಯಾಸ್ ಸ್ಟೌ ಆನ್ ಮಾಡಿ ಅಡುಗೆ ಕೋಣೆಗೆ ಹೊರಗಿನಿಂದ ಬೀಗ ಹಾಕಿ ಪರಾರಿಯಾಗಿದ್ದಾನೆ.

ನವನೀತ ಆಂಧ್ರಪ್ರದೇಶದ ಅನಂತಪುರ ಮೂಲದವರಾಗಿದ್ದು, ಕಳೆದ ಮೂರು ವರ್ಷಗಳಿಂದ ಈ ಪ್ರದೇಶದಲ್ಲಿ ವಾಸಿಸುತ್ತಿದ್ದರು.ಅವಳ ಪತಿ ಚಂದ್ರು ಕುಡುಕನಾಗಿದ್ದರಿಂದ ಎರಡು ವರ್ಷಗಳಿಂದ ಪ್ರತ್ಯೇಕವಾಗಿ ವಾಸಿಸುತ್ತಿದ್ದಳು. ಅವರು ಇಬ್ಬರು ಗಂಡುಮಕ್ಕಳಿಗೆ ಪೋಷಕರಾಗಿದ್ದರು.

Leave a Reply

Your email address will not be published. Required fields are marked *

ಬಂಟ್ವಾಳ: ಶಾಲಾ ಬಸ್ ನಿಯಮ ಪರಿಶೀಲನೆ ; ಶಾಲಾ ಬಸ್‌ಗಳನ್ನು ಪರಿಶೀಲಿಸಿದ ಟ್ರಾಫಿಕ್ ಪೋಲಿಸ್ ಎಸ್.ಐ.ಆದರ್ಶ್…!

ಬಂಟ್ವಾಳ: ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿ ಕೃತಕ ನೆರೆ…..!

ಉಡುಪಿ: ಹೆಬ್ರಿಯಲ್ಲಿ ಅಂದರ್ ಬಾಹರ್ ಇಸ್ಪೀಟ್ ಜೂಜು ಅಡ್ಡೆಗೆ ಪೊಲೀಸರ ದಾಳಿ; 7 ಮಂದಿಯ ಬಂಧನ..!

ಬೆಳ್ತಂಗಡಿ: ಪಿಕಪ್ ವಾಹನ ಡಿಕ್ಕಿಯಾಗಿ ಸ್ಕೂಟರ್ ಸವಾರರಿಬ್ಬರು ಸಾ*ವು..!

ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಆಗ್ರಹ

ಕುಂದಾಪುರ: ಕಂಟೇನರ್ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಮೃತ್ಯು..!

ಬಂಟ್ವಾಳ: ಪುಂಜಾಲಕಟ್ಟೆ ಠಾಣಾ ವ್ಯಾಪ್ತಿಯ ಮನೆಯಲ್ಲಿ ನಡೆದ ಕಳವು ಪ್ರಕರಣದ ಆರೋಪಿಗಳು ಸರೆ..!

ಬೆಂಗಳೂರು: ಮುಖ್ಯಮಂತ್ರಿ ಡಿ. ಕೆ. ಶಿಯವರ ಅವರ ಮುಖ್ಯ ಸಲಹೆಗಾರರನ್ನಾಗಿ ಸುನಿಲ್ ಕಾನುಗೋಲು ನೇಮಕ…!

ಮಂಗಳೂರು: ಕಲ್ಲುಗುಡ್ಡೆ ನಿವಾಸಿ ಅರ್. ಪೈನ್ ಮೆಹತಾಬ್ (18) ನಾಪತ್ತೆ..!

error: Content is protected !!