ದಕ್ಷಿಣ ಕನ್ನಡ : ಕರಾವಳಿ ಕರ್ನಾಟಕದಲ್ಲಿ ತೀವ್ರ ಮಳೆ ಕೊರತೆ ಕಾಡುತ್ತಿದ್ದು, ಪ್ರಸ್ತುತ ಬತ್ತದ ಬೆಳೆಗಾರರು ಕಂಗಾಲಾಗಿದ್ದಾರೆ, ಹೀಗೆ ಮುಂದುವರೆದ ಲ್ಲಿ ಮುಂದಿನ ದಿನಗಳಲ್ಲಿ ಇತರ ಬೆಳೆಗಳಿಗೂ ನೀರಿನ ಅಭಾವ ತಲೆದೋರುವ ಎಲ್ಲ ಸಾಧ್ಯತೆಗಳಿವೆ, ಮುಂದಿನ ದಿನಗಳಲ್ಲಿ ಕುಡಿಯುವ ನೀರಿಗೂ ಬರಗಾಲ ಬರುವ ಸಾಧ್ಯತೆ ಇದೆ, ಆಹಾರ ಉತ್ಪನ್ನಕ್ಕಾಗಿ ಪರದಾಡುವ ಕಾಲ ಎದುರಾಗಬಹುದು.
ಕರಾವಳಿ ಕರ್ನಾಟಕದ ಪ್ರಮುಖ ಆಹಾರ ಭತ್ತದಿಂದ ಬೆಳೆಯುವ ಅನ್ನ, ಬತ್ತದ ಬೆಳೆಯೇ ಈಗ ನೀರಿನ ಅಭಾವದಿಂದ ತೀವ್ರ ಸಂಕಷ್ಟಕ್ಕೆ ತುತ್ತಾಗಿದ್ದು ಮುಂದಿನ ದಿನಗಳಲ್ಲಿ ಅಕ್ಕಿ ಬೆಲೆ ತೀವ್ರ ಗತಿಯಲ್ಲಿ ಇರುವ ಸಾಧ್ಯತೆ ಇದೆ, ಅದೇ ರೀತಿ ವಾಣಿಜ್ಯ ಬೆಳೆಗಳು ಕೂಡ ಆಹಾರ ಉತ್ಪನ್ನ ಕೊರತೆಗೆ ಕಾರಣವಾಗಬಹುದು ಎಂಬುದು ತಜ್ಞರ ಅಭಿಪ್ರಾಯ. ಕರಾವಳಿ ಕರ್ನಾಟಕದ ರೈತರಿಂದ ಭತ್ತದ ಸಸಿಗಳ ಒಣಗುವಿಕೆಯ ಕುರಿತು ಸಮಸ್ಯೆ ವರದಿಯಾದ ಹಿನ್ನೆಲೆ, ವಲಯ ಕೃಷಿ ಮತ್ತು ತೋಟಗಾರಿಕಾ ಸಂಶೋಧನಾ ಕೇಂದ್ರದ ವರದಿಯ ಪ್ರಕಾರ ಆಗಸ್ಟ್ ತಿಂಗಳಿನಲ್ಲಿ ಮಳೆಯಾಗದೇ ಇರುವುದರಿಂದ ಪ್ರಮುಖವಾಗಿ ಭತ್ತದ ಬೆಳೆ ಸೋತು ಸೊರಗುತ್ತಿರುತ್ತದೆ. ಗದ್ದೆಗಳಲ್ಲಿ ನೀರಿಲ್ಲದ ಕಾರಣ ಕಳೆಗಳು ಹಾಗೂ ನೀರಿನ ಸಮಸ್ಯೆಯಿಂದಾಗಿ ಮೇಲು ಗೊಬ್ಬರ ಕೊಡಲು ಸಾಧ್ಯವಾಗದೇ ಇದ್ದುದರಿಂದ ಪೋಷಕಾಂಶಗಳ ಕೊರತೆ ಕಾಣುತ್ತಿದೆ.
ಮುಖ್ಯವಾಗಿ ಪೋಟಾಷ್ ಕೊರತೆಯಿಂದಾಗಿ ಭತ್ತದ ಎಲೆಗಳು ಕೆಂಪು ಬಣ್ಣಕ್ಕೆ ತಿರುಗಿ ಹೆಚ್ಚು ತೆಂಡೆಗಳು ಒಡೆಯದೇ ಒಣಗುವ ಸ್ಥಿತಿಯಲ್ಲಿರುತ್ತದೆ. ಎಲೆಗಳು ಕೆಂಪಾಗುತ್ತಿರುವುದು ಹೆಚ್ಚಾಗಿ ಕಂಡುಬಂದಿದ್ದು, ಯಾವುದೇ ಕೀಟ ರೋಗದ ಭಾದೆ ಇರುವುದಿಲ್ಲ ಎಂಬ ಅಂಶಗಳನ್ನು ಗಮನಿಸಲಾಗಿರುತ್ತದೆ, ನೀರಿನ ಕೊರತೆ ಮೂಲ ಕಾರಣ ಎನ್ನಲಾಗಿದೆ.
ನೀರೊದಗಿಸುವ ಸಾಧ್ಯತೆಯಿರುವ ಕಡೆ ಮಳೆಗಾಗಿ ಕಾಯದೇ ಕೂಡಲೇ ನೀರು ಒದಗಿಸುವುದು, ಭೂಮಿಯ ಫಲವತ್ತತೆ ಪರೀಕ್ಷೆ ಮಾಡಿಸುವುದು, ನೀರು ಒದಗಿಸಿದ ಗದ್ದೆಗಳಿಗೆ ಯುರಿಯಾ 30 ಕೆ.ಜಿ ಹಾಗೂ ಎಂ.ಒ.ಪಿ 15 ಕಿ.ಗ್ರಾಂ ಪ್ರತಿ ಎಕರೆಗೆ ಮೇಲು ಗೊಬ್ಬರವಾಗಿ ನೀಡುವುದು ಹಾಗೂ ಗದ್ದೆಗಳಲ್ಲಿ ಕಳೆ ನಿಯಂತ್ರಣ ಮಾಡುವ ಮೂಲಕ ವೈಜ್ಞಾನಿಕ ಸಲಹೆಗಳನ್ನು ಅನುಸರಿಸುವಂತೆ ಕೃಷಿ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…
ಬಂಟ್ವಾಳ ಪುರಸಭೆ ವ್ಯಾಪ್ತಿಯಲ್ಲಿ ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟಿದ್ದು, ಸಾರ್ವಜನಿಕರ ಆರೋಗ್ಯ ಹಾಗೂ ಪರಿಸರದ ಮೇಲೆ ಗಂಭೀರ ಪರಿಣಾಮ ಬೀರುವ…
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…