ಆಂಧ್ರಪ್ರದೇಶ: ದಿಢೀರ್ ಬೆಳವಣಿಗೆಯೊಂದರಲ್ಲಿ, ಆಂಧ್ರ ಪ್ರದೇಶದ ಮಾಜಿ ಮುಖ್ಯಮಂತ್ರಿ ಹಾಗೂ ತೆಲುಗು ದೇಶಂ ಪಕ್ಷದ ಅಧ್ಯಕ್ಷ ಎನ್. ಚಂದ್ರಬಾಬು ನಾಯ್ಡು ಅವರನ್ನು ಆಂಧ್ರಪ್ರದೇಶ ಪೊಲೀಸರು ಬಂಧಿಸಿದ್ದಾರೆ. ಆಂಧ್ರಪ್ರದೇಶದ ನಂಧ್ಯಾಲದಲ್ಲಿರುವ ಆರ್.ಕೆ. ಫಂಕ್ಷನ್ ಹಾಲ್ ಗೆ ಸೆ. 9ರ ಬೆಳಗಿನ ಜಾವ ಸುಮಾರು 3 ಗಂಟೆಗೆ ಆಗಮಿಸಿದ ದೊಡ್ಡ ಪೊಲೀಸ್ ಪಡೆಯು, ಫಂಕ್ಷನ್ ಹಾಲ್ ನಲ್ಲಿದ್ದ ಚಂದ್ರಬಾಬು ನಾಯ್ಡು ಅವರನ್ನು ವಶಕ್ಕೆ ಪಡೆದುಕೊಂಡಿದೆ.
ಸ್ಕಿಲ್ ಹಗರಣದ ಪ್ರಮುಖ ಆರೋಪಿ ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ, ಟಿಡಿಪಿ ಮುಖ್ಯಸ್ಥ ಚಂದ್ರಬಾಬು ನಾಯ್ಡು ನಿನ್ನೆ ಮಧ್ಯರಾತ್ರಿ ಸಿಐಡಿ ಪೊಲೀಸರು ಬಂಧಿಸಿದ್ದಾರೆ.
ಭ್ರಷ್ಟಾಚಾರ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಈ ಬಂಧನಗಳನ್ನು ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ. ಹಗರಣ ಸಂಬಂಧ ಸೂಕ್ತ ಉತ್ತರ ನೀಡದ ಹಿನ್ನೆಲೆಯಲ್ಲಿ ಹೈಕೋರ್ಟ್ ಸೂಚನೆ ಮೇರೆಗೆ ಬಂಧಿಸಲಾಗಿದೆ. ನಾಯ್ಡುವರನ್ನು ನಂಧ್ಯಾಲ ಆಸ್ಪತ್ರೆಗೆ ವೈದ್ಯಕೀಯ ತಪಾಸಣೆಗಾಗಿ ಕರೆದೊಯ್ಯಲಾಗಿತ್ತು. ವೈದ್ಯಕೀಯ ಪರೀಕ್ಷೆಯ ನಂತರ ಅವರನ್ನು ಪೊಲೀಸ್ ಕಸ್ಟಡಿಗೆ ತೆಗೆದುಕೊಳ್ಳಲಾಗಿದ್ದು, ಸೆ. 9ರಂದೇ ಅವರನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗುತ್ತದೆ ಎಂದು ಹೇಳಲಾಗಿದೆ.
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…
ಬಂಟ್ವಾಳ ಪುರಸಭೆ ವ್ಯಾಪ್ತಿಯಲ್ಲಿ ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟಿದ್ದು, ಸಾರ್ವಜನಿಕರ ಆರೋಗ್ಯ ಹಾಗೂ ಪರಿಸರದ ಮೇಲೆ ಗಂಭೀರ ಪರಿಣಾಮ ಬೀರುವ…
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…