ಜನ ಮನದ ನಾಡಿ ಮಿಡಿತ

Advertisement

ಮೂಡಬಿದಿರೆ ತುಳುಕೂಟದ ಅಧ್ಯಕ್ಷರಾಗಿ ಧನಕೀರ್ತಿ ಬಲಿಪ ಪುನರಾಯ್ಕೆ


ಮೂಡಬಿದಿರೆ: ಪ್ರಗತಿಪರ ಕೃಷಿಕ, ಸಾಮಾಜಿಕ ಮುಂದಾಳು ಹಂಡೇಲುಗುತ್ತು ಧನಕೀರ್ತಿ ಬಲಿಪ ಅವರು ಮೂಡುಬಿದಿರೆ ತುಳುಕೂಟ(ರಿ)ದ ಅಧ್ಯಕ್ಷರಾಗಿ ಪುನರಾಯ್ಕೆಗೊಂಡಿದ್ದಾರೆ.


ಕನ್ನಡ ಭವನದಲ್ಲಿರುವ ತುಳುಕೂಟದ ಕಛೇರಿಯಲ್ಲಿ ಇತ್ತೀಚೆಗೆ ನಡೆದ ಕೂಟದ ಮಹಾಸಭೆಯಲ್ಲಿ ಮುಂದಿನ ಮೂರು ವರ್ಷಗಳ ಅವಧಿಗೆ ಗೌರವಾಧ್ಯಕ್ಷರಾಗಿರುವ ನ್ಯಾಯವಾದಿ ಬಾಹುಬಲಿ ಪ್ರಸಾದ್ ಅವರ ನೇತೃತ್ವದಲ್ಲಿ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಿತು.
ಡಾ.ಎಂ. ಮೋಹನ ಆಳ್ವ ಗೌರವಾಧ್ಯಕ್ಷರಾಗಿ, ಚಂದ್ರಹಾಸ ದೇವಾಡಿಗ ಕಾರ್ಯಾಧ್ಯಕ್ಷರಾಗಿ, ಸಂಪತ್ ಸಾಮ್ರಾಜ್ಯ ಶಿರ್ತಾಡಿ, ಜಯಂತಿ ಎಸ್.ಬಂಗೇರ ಉಪಾಧ್ಯಕ್ಷರಾಗಿ, ಕೆ.ವೇಣುಗೋಪಾಲ ಶೆಟ್ಟಿ ಪ್ರಧಾನ ಕಾರ್ಯದರ್ಶಿಯಾಗಿ ಹಾಗೂ ಸದಾನಂದ ನಾರಾವಿ ಜೊತೆ ಕಾರ್ಯದರ್ಶಿಯಾಗಿ, ಸುಭಾಶ್ಚಂದ್ರ ಚೌಟ ಕೋಶಾಧಿಕಾರಿಯಾಗಿ ಪುನರಾಯ್ಕೆಯಾಗಿರುತ್ತಾರೆ.

ವಕೀಲರಾದ ಶ್ವೇತಾ ಜೈನ್ ಉಪಾಧ್ಯಕ್ಷರಾಗಿ ಮತ್ತು ಪ್ರತೀಕ್ ಸಾಲ್ಯಾನ್ ಹಾಗೂ ಪುಷ್ಪರಾಜ್ ಜೈನ್ ಅವರನ್ನು ಸಂಘಟನಾ ಕಾರ್ಯದರ್ಶಿಗಳಾಗಿ ಹೊಸದಾಗಿ ನೇಮಕ ಮಾಡಲಾಗಿದೆ. ಜಿನೇಂದ್ರ ಜೈನ್, ಜಯಪ್ರಕಾಶ್ ಪಡಿವಾಳ್, ವಿಶ್ವನಾಥ ಬೋವಿ, ಸುರೇಶ್ ಕೋಟ್ಯಾನ್, ಯತಿರಾಜ್ ಶೆಟ್ಟಿ, ಪದ್ಮನಾಭ ಮಿಜಾರು, ಗುರು ಎಂ.ಪಿ, ಪ್ರಸಾದ್ ಭಂಡಾರಿ, ಚೇತನಾ ಹೆಗ್ಡೆ, ಸುಮ ಸಿ.ದೇವಾಡಿಗ ಮತ್ತು ನಾರಾಯಣ ಕುಂದರ್ ಅವರನ್ನು ಕಾರ್ಯಕಾರಿ ಸಮಿತಿಯ ನೂತನ ಸದಸ್ಯರನ್ನಾಗಿ ಆಯ್ಕೆ ಮಾಡಲಾಗಿದೆ.

Leave a Reply

Your email address will not be published. Required fields are marked *

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

error: Content is protected !!