ಮೂಡಬಿದಿರೆ: ಪ್ರಗತಿಪರ ಕೃಷಿಕ, ಸಾಮಾಜಿಕ ಮುಂದಾಳು ಹಂಡೇಲುಗುತ್ತು ಧನಕೀರ್ತಿ ಬಲಿಪ ಅವರು ಮೂಡುಬಿದಿರೆ ತುಳುಕೂಟ(ರಿ)ದ ಅಧ್ಯಕ್ಷರಾಗಿ ಪುನರಾಯ್ಕೆಗೊಂಡಿದ್ದಾರೆ.
ಕನ್ನಡ ಭವನದಲ್ಲಿರುವ ತುಳುಕೂಟದ ಕಛೇರಿಯಲ್ಲಿ ಇತ್ತೀಚೆಗೆ ನಡೆದ ಕೂಟದ ಮಹಾಸಭೆಯಲ್ಲಿ ಮುಂದಿನ ಮೂರು ವರ್ಷಗಳ ಅವಧಿಗೆ ಗೌರವಾಧ್ಯಕ್ಷರಾಗಿರುವ ನ್ಯಾಯವಾದಿ ಬಾಹುಬಲಿ ಪ್ರಸಾದ್ ಅವರ ನೇತೃತ್ವದಲ್ಲಿ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಿತು.
ಡಾ.ಎಂ. ಮೋಹನ ಆಳ್ವ ಗೌರವಾಧ್ಯಕ್ಷರಾಗಿ, ಚಂದ್ರಹಾಸ ದೇವಾಡಿಗ ಕಾರ್ಯಾಧ್ಯಕ್ಷರಾಗಿ, ಸಂಪತ್ ಸಾಮ್ರಾಜ್ಯ ಶಿರ್ತಾಡಿ, ಜಯಂತಿ ಎಸ್.ಬಂಗೇರ ಉಪಾಧ್ಯಕ್ಷರಾಗಿ, ಕೆ.ವೇಣುಗೋಪಾಲ ಶೆಟ್ಟಿ ಪ್ರಧಾನ ಕಾರ್ಯದರ್ಶಿಯಾಗಿ ಹಾಗೂ ಸದಾನಂದ ನಾರಾವಿ ಜೊತೆ ಕಾರ್ಯದರ್ಶಿಯಾಗಿ, ಸುಭಾಶ್ಚಂದ್ರ ಚೌಟ ಕೋಶಾಧಿಕಾರಿಯಾಗಿ ಪುನರಾಯ್ಕೆಯಾಗಿರುತ್ತಾರೆ.
ವಕೀಲರಾದ ಶ್ವೇತಾ ಜೈನ್ ಉಪಾಧ್ಯಕ್ಷರಾಗಿ ಮತ್ತು ಪ್ರತೀಕ್ ಸಾಲ್ಯಾನ್ ಹಾಗೂ ಪುಷ್ಪರಾಜ್ ಜೈನ್ ಅವರನ್ನು ಸಂಘಟನಾ ಕಾರ್ಯದರ್ಶಿಗಳಾಗಿ ಹೊಸದಾಗಿ ನೇಮಕ ಮಾಡಲಾಗಿದೆ. ಜಿನೇಂದ್ರ ಜೈನ್, ಜಯಪ್ರಕಾಶ್ ಪಡಿವಾಳ್, ವಿಶ್ವನಾಥ ಬೋವಿ, ಸುರೇಶ್ ಕೋಟ್ಯಾನ್, ಯತಿರಾಜ್ ಶೆಟ್ಟಿ, ಪದ್ಮನಾಭ ಮಿಜಾರು, ಗುರು ಎಂ.ಪಿ, ಪ್ರಸಾದ್ ಭಂಡಾರಿ, ಚೇತನಾ ಹೆಗ್ಡೆ, ಸುಮ ಸಿ.ದೇವಾಡಿಗ ಮತ್ತು ನಾರಾಯಣ ಕುಂದರ್ ಅವರನ್ನು ಕಾರ್ಯಕಾರಿ ಸಮಿತಿಯ ನೂತನ ಸದಸ್ಯರನ್ನಾಗಿ ಆಯ್ಕೆ ಮಾಡಲಾಗಿದೆ.
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…
ಬಂಟ್ವಾಳ ಪುರಸಭೆ ವ್ಯಾಪ್ತಿಯಲ್ಲಿ ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟಿದ್ದು, ಸಾರ್ವಜನಿಕರ ಆರೋಗ್ಯ ಹಾಗೂ ಪರಿಸರದ ಮೇಲೆ ಗಂಭೀರ ಪರಿಣಾಮ ಬೀರುವ…
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…