ಮೂಡಬಿದಿರೆ: ಪ್ರಗತಿಪರ ಕೃಷಿಕ, ಸಾಮಾಜಿಕ ಮುಂದಾಳು ಹಂಡೇಲುಗುತ್ತು ಧನಕೀರ್ತಿ ಬಲಿಪ ಅವರು ಮೂಡುಬಿದಿರೆ ತುಳುಕೂಟ(ರಿ)ದ ಅಧ್ಯಕ್ಷರಾಗಿ ಪುನರಾಯ್ಕೆಗೊಂಡಿದ್ದಾರೆ.
ಕನ್ನಡ ಭವನದಲ್ಲಿರುವ ತುಳುಕೂಟದ ಕಛೇರಿಯಲ್ಲಿ ಇತ್ತೀಚೆಗೆ ನಡೆದ ಕೂಟದ ಮಹಾಸಭೆಯಲ್ಲಿ ಮುಂದಿನ ಮೂರು ವರ್ಷಗಳ ಅವಧಿಗೆ ಗೌರವಾಧ್ಯಕ್ಷರಾಗಿರುವ ನ್ಯಾಯವಾದಿ ಬಾಹುಬಲಿ ಪ್ರಸಾದ್ ಅವರ ನೇತೃತ್ವದಲ್ಲಿ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಿತು.
ಡಾ.ಎಂ. ಮೋಹನ ಆಳ್ವ ಗೌರವಾಧ್ಯಕ್ಷರಾಗಿ, ಚಂದ್ರಹಾಸ ದೇವಾಡಿಗ ಕಾರ್ಯಾಧ್ಯಕ್ಷರಾಗಿ, ಸಂಪತ್ ಸಾಮ್ರಾಜ್ಯ ಶಿರ್ತಾಡಿ, ಜಯಂತಿ ಎಸ್.ಬಂಗೇರ ಉಪಾಧ್ಯಕ್ಷರಾಗಿ, ಕೆ.ವೇಣುಗೋಪಾಲ ಶೆಟ್ಟಿ ಪ್ರಧಾನ ಕಾರ್ಯದರ್ಶಿಯಾಗಿ ಹಾಗೂ ಸದಾನಂದ ನಾರಾವಿ ಜೊತೆ ಕಾರ್ಯದರ್ಶಿಯಾಗಿ, ಸುಭಾಶ್ಚಂದ್ರ ಚೌಟ ಕೋಶಾಧಿಕಾರಿಯಾಗಿ ಪುನರಾಯ್ಕೆಯಾಗಿರುತ್ತಾರೆ.
ವಕೀಲರಾದ ಶ್ವೇತಾ ಜೈನ್ ಉಪಾಧ್ಯಕ್ಷರಾಗಿ ಮತ್ತು ಪ್ರತೀಕ್ ಸಾಲ್ಯಾನ್ ಹಾಗೂ ಪುಷ್ಪರಾಜ್ ಜೈನ್ ಅವರನ್ನು ಸಂಘಟನಾ ಕಾರ್ಯದರ್ಶಿಗಳಾಗಿ ಹೊಸದಾಗಿ ನೇಮಕ ಮಾಡಲಾಗಿದೆ. ಜಿನೇಂದ್ರ ಜೈನ್, ಜಯಪ್ರಕಾಶ್ ಪಡಿವಾಳ್, ವಿಶ್ವನಾಥ ಬೋವಿ, ಸುರೇಶ್ ಕೋಟ್ಯಾನ್, ಯತಿರಾಜ್ ಶೆಟ್ಟಿ, ಪದ್ಮನಾಭ ಮಿಜಾರು, ಗುರು ಎಂ.ಪಿ, ಪ್ರಸಾದ್ ಭಂಡಾರಿ, ಚೇತನಾ ಹೆಗ್ಡೆ, ಸುಮ ಸಿ.ದೇವಾಡಿಗ ಮತ್ತು ನಾರಾಯಣ ಕುಂದರ್ ಅವರನ್ನು ಕಾರ್ಯಕಾರಿ ಸಮಿತಿಯ ನೂತನ ಸದಸ್ಯರನ್ನಾಗಿ ಆಯ್ಕೆ ಮಾಡಲಾಗಿದೆ.
ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದಲ್ಲಿರುವ ಸಂಸದರ ಕಚೇರಿಯಲ್ಲಿ ಸಾರ್ವಜನಿಕರ ಕುಂದು-ಕೊರತೆ…
ಸ್ವಚ್ಛತೆಯ ಬಗ್ಗೆ ತಿಳಿ ಹೇಳಬೇಕಾದ ಸರಕಾರಿ ಕಚೇರಿಯ ಮುಂಭಾಗದಲ್ಲಿ ರಾಶಿ ಹಾಕಲಾದ ಕಸದ ಬಗ್ಗೆ ಸಾರ್ವಜನಿಕರು ಮಾತನಾಡುವಂತಾಗಿದೆ. ಬಿಸಿರೋಡಿನ ಪುರಸಭಾ…
ಸಂಚರಿಸುತ್ತಿದ್ದ ಲಾರಿಯೊಂದಕ್ಕೆ ಆಕಸ್ಮಿಕವಾಗಿ ಬೆಂಕಿ ತಗುಲಿ ಲಾರಿ ಬೆಂಕಿಗಾಹುತಿಯಾದ ಘಟನೆ ಮೆಲ್ಕಾರಿನಲ್ಲಿ ನಡೆದಿದೆ. ಬೆಂಗಳೂರು ಮೂಲದ ಲಾರಿ ಇದಾಗಿದ್ದು, ಮಂಗಳೂರು…
ಬಾವಿಯೊಂದರ ಹೂಳೆತ್ತುವ ಕೆಲಸ ಮುಗಿಸಿ ಮೇಲೆ ಬರುವ ವೇಳೆ ಹಗ್ಗ ಜಾರಿ ಬಿದ್ದು ಗಾಯಗೊಂಡ ಘಟನೆ ಬಂಟ್ವಾಳ ತಾಲೂಕಿನ ಕುರಿಯಾಳದ…
ಕಡೇಶಿವಾಲಯ ನೆತ್ತರ ಬಾಬು ಪೂಜಾರಿಯವರ ಮನೆಗೆ ಸಿಡಿಲು ಬಡಿದು ಹಾನಿಯಾಗಿದ್ದು ಘಟನಾ ಸ್ಥಳಕ್ಕೆ ಬಂಟ್ವಾಳ ಶಾಸಕರಾದ ರಾಜೇಶ್ ನಾೈಕ್ ಉಳಿಪಾಡಿಯವರು…
ಬಂಟ್ವಾಳ: ಸಿಡಿಲು ಬಡಿದು ಹಾನಿಗೊಳಗಾದ ಇಳಿಯೂರು ಶ್ರೀ ಮಹಾವಿಷ್ಣು ದೇವಸ್ಥಾನಕ್ಕೆ ಬಿಜೆಪಿ ಮುಖಂಡ ಸಂದೇಶ್ ಶೆಟ್ಟಿ ಅರೆಬೆಟ್ಟು ಅವರು ರಾತ್ರಿ…