ಜನ ಮನದ ನಾಡಿ ಮಿಡಿತ

Advertisement

ಮಕ್ಕಳಲ್ಲಿ ಕಾಣಿಸಿಕೊಳ್ಳುವ ದೃಷ್ಟಿದೋಷದ ಬಗ್ಗೆ ಕಾಳಜಿ ವಹಿಸಿ: ಅಗರಿ ರಾಘವೇಂದ್ರ ರಾವ್

ಮುಲ್ಕಿ: ಸಂಚಾರಿ ಕಣ್ಣಿನ ಘಟಕ ವೆನ್ಲಾಕ್ ಆಸ್ಪತ್ರೆ ಮಂಗಳೂರು, ಪ್ರಾಥಮಿಕ ಆರೋಗ್ಯ ಕೇಂದ್ರ ಅತ್ತೂರು ಕೆಮ್ರಾಲ್, ಪಡುಪಣಂಬೂರು ಗ್ರಾಮ ಪಂಚಾಯತ್ , ನೆಹರು ಯುವ ಕೇಂದ್ರ ಮಂಗಳೂರು ರಜತ ಮಹೋತ್ಸವ ಸಮಿತಿ ಮಹಿಳಾ ಮಂಡಲ (ರಿ.)ತೋಕೂರು ,ಜಿಲ್ಲಾ ಮತ್ತು ರಾಜ್ಯ ಪ್ರಶಸ್ತಿ ವಿಜೇತ ಯುವಕ ಸಂಘ(ರಿ.) ತೋಕೂರು ಇವರ ಜಂಟಿ ಆಶ್ರಯದಲ್ಲಿ ತೋಕೂರಿನ ಯುವಕ ಸಂಘದ ಸುವರ್ಣ ಸಭಾಂಗಣದಲ್ಲಿ ಉಚಿತ ಕಣ್ಣಿನ ತಪಾಸಣಾ ಶಿಬಿರವು ನಡೆದಿದೆ.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಅಗರಿ ರಾಘವೇಂದ್ರ ರಾವ್ ರವರು ಮಾತಾನಾಡಿ, ಮಕ್ಕಳನ್ನು ಮೊಬೈಲ್ ನಿಂದ ದೂರವಿರಿಸಿ ಇತರ ಚಟುವಟಿಕೆಗಳಲ್ಲಿ ಭಾಗವಹಿಸುವಂತೆ ಪ್ರೆರೇಪಿಸಿ ಅವರನ್ನು ದೃಷ್ಟಿ ದೋಷದಿಂದ ದೂರವಿರಿಸಿ ಅವರ ಕಣ್ಣಿನ ಆರೋಗ್ಯ ಕಾಪಾಡುವುದು ತಾಯಂದಿರ ಕರ್ತವ್ಯವಾಗಿದೆ ಎಂದರು. ಬಳಿಕ ಅನಿಲ್ ರಾಮಾನುಜನ್ ಹಾಗೂ ಪದ್ಮ ಇವರು ಅಂಗಾಂಗ ದಾನ ಹಾಗೂ ನೇತ್ರದಾನದ ಮಹತ್ವದ ಬಗ್ಗೆ ಮಾಹಿತಿ ನೀಡಿದ್ರು.

76 ಮಂದಿ ಫಲಾನುಭವಿಗಳು ಇದರ ಸದುಪಯೋಗವನ್ನು ಪಡೆದುಕೊಂಡಿದ್ದು, 62 ಮಂದಿಗೆ ಮಹಿಳಾ ಮಂಡಲದ ವತಿಯಿಂದ ಉಚಿತವಾಗಿ ಓದುವ ಕನ್ನಡಕವನ್ನು ವಿತರಣೆ ಮಾಡಲಾಗಿದೆ. ಏಳು ಕಣ್ಣಿನ ಪೊರೆ ಉಳ್ಳವರನ್ನು ಪತ್ತೆ ಮಾಡಿ ಅವರಿಗೆ ಉಚಿತ ಕಣ್ಣಿನ ಪೊರೆ ಶಸ್ತ್ರ ಚಿಕಿತ್ಸೆ ಬಗ್ಗೆ ಮಾಹಿತಿ ನೀಡಿ ಬಳಿಕ ವೆನ್ಲಾಕ್ ಆಸ್ಪತ್ರೆಯಲ್ಲಿ ಉಚಿತ ಸೇವೆ ಪಡೆಯಲು ಶಿಫಾರಸ್ಸಿನ ದಿನಾಂಕ ನಿಗದಿ ಮಾಡಿದ್ದಾರೆ. ಇನ್ನೂ ಸಂದರ್ಭದಲ್ಲಿ ಮಹಿಳಾಮಂಡಲದ ಅಧ್ಯಕ್ಷೆ ಅನುಪಮಾ ಎ ರಾವ್, ಪವಿತ್ರ ಸುನಿಲ್, ವಿನೋದ ಭಟ್ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

error: Content is protected !!