ಮುಲ್ಕಿ: ಸಂಚಾರಿ ಕಣ್ಣಿನ ಘಟಕ ವೆನ್ಲಾಕ್ ಆಸ್ಪತ್ರೆ ಮಂಗಳೂರು, ಪ್ರಾಥಮಿಕ ಆರೋಗ್ಯ ಕೇಂದ್ರ ಅತ್ತೂರು ಕೆಮ್ರಾಲ್, ಪಡುಪಣಂಬೂರು ಗ್ರಾಮ ಪಂಚಾಯತ್ , ನೆಹರು ಯುವ ಕೇಂದ್ರ ಮಂಗಳೂರು ರಜತ ಮಹೋತ್ಸವ ಸಮಿತಿ ಮಹಿಳಾ ಮಂಡಲ (ರಿ.)ತೋಕೂರು ,ಜಿಲ್ಲಾ ಮತ್ತು ರಾಜ್ಯ ಪ್ರಶಸ್ತಿ ವಿಜೇತ ಯುವಕ ಸಂಘ(ರಿ.) ತೋಕೂರು ಇವರ ಜಂಟಿ ಆಶ್ರಯದಲ್ಲಿ ತೋಕೂರಿನ ಯುವಕ ಸಂಘದ ಸುವರ್ಣ ಸಭಾಂಗಣದಲ್ಲಿ ಉಚಿತ ಕಣ್ಣಿನ ತಪಾಸಣಾ ಶಿಬಿರವು ನಡೆದಿದೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಅಗರಿ ರಾಘವೇಂದ್ರ ರಾವ್ ರವರು ಮಾತಾನಾಡಿ, ಮಕ್ಕಳನ್ನು ಮೊಬೈಲ್ ನಿಂದ ದೂರವಿರಿಸಿ ಇತರ ಚಟುವಟಿಕೆಗಳಲ್ಲಿ ಭಾಗವಹಿಸುವಂತೆ ಪ್ರೆರೇಪಿಸಿ ಅವರನ್ನು ದೃಷ್ಟಿ ದೋಷದಿಂದ ದೂರವಿರಿಸಿ ಅವರ ಕಣ್ಣಿನ ಆರೋಗ್ಯ ಕಾಪಾಡುವುದು ತಾಯಂದಿರ ಕರ್ತವ್ಯವಾಗಿದೆ ಎಂದರು. ಬಳಿಕ ಅನಿಲ್ ರಾಮಾನುಜನ್ ಹಾಗೂ ಪದ್ಮ ಇವರು ಅಂಗಾಂಗ ದಾನ ಹಾಗೂ ನೇತ್ರದಾನದ ಮಹತ್ವದ ಬಗ್ಗೆ ಮಾಹಿತಿ ನೀಡಿದ್ರು.
76 ಮಂದಿ ಫಲಾನುಭವಿಗಳು ಇದರ ಸದುಪಯೋಗವನ್ನು ಪಡೆದುಕೊಂಡಿದ್ದು, 62 ಮಂದಿಗೆ ಮಹಿಳಾ ಮಂಡಲದ ವತಿಯಿಂದ ಉಚಿತವಾಗಿ ಓದುವ ಕನ್ನಡಕವನ್ನು ವಿತರಣೆ ಮಾಡಲಾಗಿದೆ. ಏಳು ಕಣ್ಣಿನ ಪೊರೆ ಉಳ್ಳವರನ್ನು ಪತ್ತೆ ಮಾಡಿ ಅವರಿಗೆ ಉಚಿತ ಕಣ್ಣಿನ ಪೊರೆ ಶಸ್ತ್ರ ಚಿಕಿತ್ಸೆ ಬಗ್ಗೆ ಮಾಹಿತಿ ನೀಡಿ ಬಳಿಕ ವೆನ್ಲಾಕ್ ಆಸ್ಪತ್ರೆಯಲ್ಲಿ ಉಚಿತ ಸೇವೆ ಪಡೆಯಲು ಶಿಫಾರಸ್ಸಿನ ದಿನಾಂಕ ನಿಗದಿ ಮಾಡಿದ್ದಾರೆ. ಇನ್ನೂ ಸಂದರ್ಭದಲ್ಲಿ ಮಹಿಳಾಮಂಡಲದ ಅಧ್ಯಕ್ಷೆ ಅನುಪಮಾ ಎ ರಾವ್, ಪವಿತ್ರ ಸುನಿಲ್, ವಿನೋದ ಭಟ್ ಉಪಸ್ಥಿತರಿದ್ದರು.
ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದಲ್ಲಿರುವ ಸಂಸದರ ಕಚೇರಿಯಲ್ಲಿ ಸಾರ್ವಜನಿಕರ ಕುಂದು-ಕೊರತೆ…
ಸ್ವಚ್ಛತೆಯ ಬಗ್ಗೆ ತಿಳಿ ಹೇಳಬೇಕಾದ ಸರಕಾರಿ ಕಚೇರಿಯ ಮುಂಭಾಗದಲ್ಲಿ ರಾಶಿ ಹಾಕಲಾದ ಕಸದ ಬಗ್ಗೆ ಸಾರ್ವಜನಿಕರು ಮಾತನಾಡುವಂತಾಗಿದೆ. ಬಿಸಿರೋಡಿನ ಪುರಸಭಾ…
ಸಂಚರಿಸುತ್ತಿದ್ದ ಲಾರಿಯೊಂದಕ್ಕೆ ಆಕಸ್ಮಿಕವಾಗಿ ಬೆಂಕಿ ತಗುಲಿ ಲಾರಿ ಬೆಂಕಿಗಾಹುತಿಯಾದ ಘಟನೆ ಮೆಲ್ಕಾರಿನಲ್ಲಿ ನಡೆದಿದೆ. ಬೆಂಗಳೂರು ಮೂಲದ ಲಾರಿ ಇದಾಗಿದ್ದು, ಮಂಗಳೂರು…
ಬಾವಿಯೊಂದರ ಹೂಳೆತ್ತುವ ಕೆಲಸ ಮುಗಿಸಿ ಮೇಲೆ ಬರುವ ವೇಳೆ ಹಗ್ಗ ಜಾರಿ ಬಿದ್ದು ಗಾಯಗೊಂಡ ಘಟನೆ ಬಂಟ್ವಾಳ ತಾಲೂಕಿನ ಕುರಿಯಾಳದ…
ಕಡೇಶಿವಾಲಯ ನೆತ್ತರ ಬಾಬು ಪೂಜಾರಿಯವರ ಮನೆಗೆ ಸಿಡಿಲು ಬಡಿದು ಹಾನಿಯಾಗಿದ್ದು ಘಟನಾ ಸ್ಥಳಕ್ಕೆ ಬಂಟ್ವಾಳ ಶಾಸಕರಾದ ರಾಜೇಶ್ ನಾೈಕ್ ಉಳಿಪಾಡಿಯವರು…
ಬಂಟ್ವಾಳ: ಸಿಡಿಲು ಬಡಿದು ಹಾನಿಗೊಳಗಾದ ಇಳಿಯೂರು ಶ್ರೀ ಮಹಾವಿಷ್ಣು ದೇವಸ್ಥಾನಕ್ಕೆ ಬಿಜೆಪಿ ಮುಖಂಡ ಸಂದೇಶ್ ಶೆಟ್ಟಿ ಅರೆಬೆಟ್ಟು ಅವರು ರಾತ್ರಿ…