ಮುಲ್ಕಿ: ಸಂಚಾರಿ ಕಣ್ಣಿನ ಘಟಕ ವೆನ್ಲಾಕ್ ಆಸ್ಪತ್ರೆ ಮಂಗಳೂರು, ಪ್ರಾಥಮಿಕ ಆರೋಗ್ಯ ಕೇಂದ್ರ ಅತ್ತೂರು ಕೆಮ್ರಾಲ್, ಪಡುಪಣಂಬೂರು ಗ್ರಾಮ ಪಂಚಾಯತ್ , ನೆಹರು ಯುವ ಕೇಂದ್ರ ಮಂಗಳೂರು ರಜತ ಮಹೋತ್ಸವ ಸಮಿತಿ ಮಹಿಳಾ ಮಂಡಲ (ರಿ.)ತೋಕೂರು ,ಜಿಲ್ಲಾ ಮತ್ತು ರಾಜ್ಯ ಪ್ರಶಸ್ತಿ ವಿಜೇತ ಯುವಕ ಸಂಘ(ರಿ.) ತೋಕೂರು ಇವರ ಜಂಟಿ ಆಶ್ರಯದಲ್ಲಿ ತೋಕೂರಿನ ಯುವಕ ಸಂಘದ ಸುವರ್ಣ ಸಭಾಂಗಣದಲ್ಲಿ ಉಚಿತ ಕಣ್ಣಿನ ತಪಾಸಣಾ ಶಿಬಿರವು ನಡೆದಿದೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಅಗರಿ ರಾಘವೇಂದ್ರ ರಾವ್ ರವರು ಮಾತಾನಾಡಿ, ಮಕ್ಕಳನ್ನು ಮೊಬೈಲ್ ನಿಂದ ದೂರವಿರಿಸಿ ಇತರ ಚಟುವಟಿಕೆಗಳಲ್ಲಿ ಭಾಗವಹಿಸುವಂತೆ ಪ್ರೆರೇಪಿಸಿ ಅವರನ್ನು ದೃಷ್ಟಿ ದೋಷದಿಂದ ದೂರವಿರಿಸಿ ಅವರ ಕಣ್ಣಿನ ಆರೋಗ್ಯ ಕಾಪಾಡುವುದು ತಾಯಂದಿರ ಕರ್ತವ್ಯವಾಗಿದೆ ಎಂದರು. ಬಳಿಕ ಅನಿಲ್ ರಾಮಾನುಜನ್ ಹಾಗೂ ಪದ್ಮ ಇವರು ಅಂಗಾಂಗ ದಾನ ಹಾಗೂ ನೇತ್ರದಾನದ ಮಹತ್ವದ ಬಗ್ಗೆ ಮಾಹಿತಿ ನೀಡಿದ್ರು.
76 ಮಂದಿ ಫಲಾನುಭವಿಗಳು ಇದರ ಸದುಪಯೋಗವನ್ನು ಪಡೆದುಕೊಂಡಿದ್ದು, 62 ಮಂದಿಗೆ ಮಹಿಳಾ ಮಂಡಲದ ವತಿಯಿಂದ ಉಚಿತವಾಗಿ ಓದುವ ಕನ್ನಡಕವನ್ನು ವಿತರಣೆ ಮಾಡಲಾಗಿದೆ. ಏಳು ಕಣ್ಣಿನ ಪೊರೆ ಉಳ್ಳವರನ್ನು ಪತ್ತೆ ಮಾಡಿ ಅವರಿಗೆ ಉಚಿತ ಕಣ್ಣಿನ ಪೊರೆ ಶಸ್ತ್ರ ಚಿಕಿತ್ಸೆ ಬಗ್ಗೆ ಮಾಹಿತಿ ನೀಡಿ ಬಳಿಕ ವೆನ್ಲಾಕ್ ಆಸ್ಪತ್ರೆಯಲ್ಲಿ ಉಚಿತ ಸೇವೆ ಪಡೆಯಲು ಶಿಫಾರಸ್ಸಿನ ದಿನಾಂಕ ನಿಗದಿ ಮಾಡಿದ್ದಾರೆ. ಇನ್ನೂ ಸಂದರ್ಭದಲ್ಲಿ ಮಹಿಳಾಮಂಡಲದ ಅಧ್ಯಕ್ಷೆ ಅನುಪಮಾ ಎ ರಾವ್, ಪವಿತ್ರ ಸುನಿಲ್, ವಿನೋದ ಭಟ್ ಉಪಸ್ಥಿತರಿದ್ದರು.
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…
ಬಂಟ್ವಾಳ ಪುರಸಭೆ ವ್ಯಾಪ್ತಿಯಲ್ಲಿ ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟಿದ್ದು, ಸಾರ್ವಜನಿಕರ ಆರೋಗ್ಯ ಹಾಗೂ ಪರಿಸರದ ಮೇಲೆ ಗಂಭೀರ ಪರಿಣಾಮ ಬೀರುವ…
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…