ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಅತ್ಯಂತ ಹಳೆಯ ಪಾರ್ಕ್ ಎಂಬ ಹೆಗ್ಗಳಿಕೆ ಹೊಂದಿರುವ ಗಾಂಧಿನಗರ ಪಾರ್ಕ್ ಶಿಥಿಲಾವಸ್ಥೆಯಲ್ಲಿದ್ದು ಶಾಸಕ ವೇದವ್ಯಾಸ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
ಹಲವಾರು ವರ್ಷಗಳಿಂದ ಅಭಿವೃದ್ಧಿ ಕಾಣದಿದ್ದ ಈ ಪಾರ್ಕ್ ನಲ್ಲಿ ಮಳೆಗಾಲದಲ್ಲಿ ಹೆಚ್ಚಿನ ಸಮಸ್ಯೆ ಉಂಟಾಗುತ್ತಿರುವುದರಿಂದ ಇಲ್ಲಿ ದಿನನಿತ್ಯ ವಾಕಿಂಗ್ ಮಾಡುವ ಹಿರಿಯರು, ಮಹಿಳೆಯರು, ಮಕ್ಕಳು ಹಾಗೂ ಸಾರ್ವಜನಿಕರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ.
ಈ ನಿಟ್ಟಿನಲ್ಲಿ ಸ್ಥಳೀಯರಿಂದ ಮಾಹಿತಿ ಪಡೆದ ಶಾಸಕರು ಸ್ಥಳ ವೀಕ್ಷಣೆ ನಡೆಸಿ ಇಂಜಿನಿಯರ್ ಸಮ್ಮುಖದಲ್ಲಿ ಪಾರ್ಕಿನ ಸಮಗ್ರ ಅಭಿವೃದ್ಧಿಗೆ ಅಗತ್ಯವಿರುವ ಎಲ್ಲಾ ಯೋಜನೆಯ ರೂಪುರೇಷೆ ಸಿದ್ಧಪಡಿಸಿ ಶೀಘ್ರ ಕಾಮಗಾರಿ ಆರಂಭಿಸಲು ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ಕ್ರೀಡಾಭಿಮಾನಿಗಳಾದ ವಸಂತ್, ದೇವರಾಜ, ತರುಣ್, ಧೀರಜ್, ಪಾರ್ಕ್ ಕಮಿಟಿ ಸದಸ್ಯರುಗಳಾದ ನಂದಾ ಶೆಣೈ, ಅಜಿತ್ ರಾವ್, ವೆಂಕಟೇಶ್ ಆಚಾರ್, ಮೋಹನ್ ಆಚಾರ್, ಸ್ಥಳೀಯ ಕಾರ್ಪೊರೇಟರ್ ಸಂಧ್ಯಾ ಆಚಾರ್, ಪವನ್ ಶೆಣೈ, ಆನಂದ ರೈ, ವಸಂತ್ ಪೂಜಾರಿ, ಭಾಸ್ಕರ ಚಂದ್ರ ಶೆಟ್ಟಿ, ಮತ್ತು ಮಹಾನಗರ ಪಾಲಿಕೆ ಅಧಿಕಾರಿಗಳು ಉಪಸ್ಥಿತರಿದ್ದರು
ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದಲ್ಲಿರುವ ಸಂಸದರ ಕಚೇರಿಯಲ್ಲಿ ಸಾರ್ವಜನಿಕರ ಕುಂದು-ಕೊರತೆ…
ಸ್ವಚ್ಛತೆಯ ಬಗ್ಗೆ ತಿಳಿ ಹೇಳಬೇಕಾದ ಸರಕಾರಿ ಕಚೇರಿಯ ಮುಂಭಾಗದಲ್ಲಿ ರಾಶಿ ಹಾಕಲಾದ ಕಸದ ಬಗ್ಗೆ ಸಾರ್ವಜನಿಕರು ಮಾತನಾಡುವಂತಾಗಿದೆ. ಬಿಸಿರೋಡಿನ ಪುರಸಭಾ…
ಸಂಚರಿಸುತ್ತಿದ್ದ ಲಾರಿಯೊಂದಕ್ಕೆ ಆಕಸ್ಮಿಕವಾಗಿ ಬೆಂಕಿ ತಗುಲಿ ಲಾರಿ ಬೆಂಕಿಗಾಹುತಿಯಾದ ಘಟನೆ ಮೆಲ್ಕಾರಿನಲ್ಲಿ ನಡೆದಿದೆ. ಬೆಂಗಳೂರು ಮೂಲದ ಲಾರಿ ಇದಾಗಿದ್ದು, ಮಂಗಳೂರು…
ಬಾವಿಯೊಂದರ ಹೂಳೆತ್ತುವ ಕೆಲಸ ಮುಗಿಸಿ ಮೇಲೆ ಬರುವ ವೇಳೆ ಹಗ್ಗ ಜಾರಿ ಬಿದ್ದು ಗಾಯಗೊಂಡ ಘಟನೆ ಬಂಟ್ವಾಳ ತಾಲೂಕಿನ ಕುರಿಯಾಳದ…
ಕಡೇಶಿವಾಲಯ ನೆತ್ತರ ಬಾಬು ಪೂಜಾರಿಯವರ ಮನೆಗೆ ಸಿಡಿಲು ಬಡಿದು ಹಾನಿಯಾಗಿದ್ದು ಘಟನಾ ಸ್ಥಳಕ್ಕೆ ಬಂಟ್ವಾಳ ಶಾಸಕರಾದ ರಾಜೇಶ್ ನಾೈಕ್ ಉಳಿಪಾಡಿಯವರು…
ಬಂಟ್ವಾಳ: ಸಿಡಿಲು ಬಡಿದು ಹಾನಿಗೊಳಗಾದ ಇಳಿಯೂರು ಶ್ರೀ ಮಹಾವಿಷ್ಣು ದೇವಸ್ಥಾನಕ್ಕೆ ಬಿಜೆಪಿ ಮುಖಂಡ ಸಂದೇಶ್ ಶೆಟ್ಟಿ ಅರೆಬೆಟ್ಟು ಅವರು ರಾತ್ರಿ…