ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಅತ್ಯಂತ ಹಳೆಯ ಪಾರ್ಕ್ ಎಂಬ ಹೆಗ್ಗಳಿಕೆ ಹೊಂದಿರುವ ಗಾಂಧಿನಗರ ಪಾರ್ಕ್ ಶಿಥಿಲಾವಸ್ಥೆಯಲ್ಲಿದ್ದು ಶಾಸಕ ವೇದವ್ಯಾಸ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
ಹಲವಾರು ವರ್ಷಗಳಿಂದ ಅಭಿವೃದ್ಧಿ ಕಾಣದಿದ್ದ ಈ ಪಾರ್ಕ್ ನಲ್ಲಿ ಮಳೆಗಾಲದಲ್ಲಿ ಹೆಚ್ಚಿನ ಸಮಸ್ಯೆ ಉಂಟಾಗುತ್ತಿರುವುದರಿಂದ ಇಲ್ಲಿ ದಿನನಿತ್ಯ ವಾಕಿಂಗ್ ಮಾಡುವ ಹಿರಿಯರು, ಮಹಿಳೆಯರು, ಮಕ್ಕಳು ಹಾಗೂ ಸಾರ್ವಜನಿಕರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ.
ಈ ನಿಟ್ಟಿನಲ್ಲಿ ಸ್ಥಳೀಯರಿಂದ ಮಾಹಿತಿ ಪಡೆದ ಶಾಸಕರು ಸ್ಥಳ ವೀಕ್ಷಣೆ ನಡೆಸಿ ಇಂಜಿನಿಯರ್ ಸಮ್ಮುಖದಲ್ಲಿ ಪಾರ್ಕಿನ ಸಮಗ್ರ ಅಭಿವೃದ್ಧಿಗೆ ಅಗತ್ಯವಿರುವ ಎಲ್ಲಾ ಯೋಜನೆಯ ರೂಪುರೇಷೆ ಸಿದ್ಧಪಡಿಸಿ ಶೀಘ್ರ ಕಾಮಗಾರಿ ಆರಂಭಿಸಲು ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ಕ್ರೀಡಾಭಿಮಾನಿಗಳಾದ ವಸಂತ್, ದೇವರಾಜ, ತರುಣ್, ಧೀರಜ್, ಪಾರ್ಕ್ ಕಮಿಟಿ ಸದಸ್ಯರುಗಳಾದ ನಂದಾ ಶೆಣೈ, ಅಜಿತ್ ರಾವ್, ವೆಂಕಟೇಶ್ ಆಚಾರ್, ಮೋಹನ್ ಆಚಾರ್, ಸ್ಥಳೀಯ ಕಾರ್ಪೊರೇಟರ್ ಸಂಧ್ಯಾ ಆಚಾರ್, ಪವನ್ ಶೆಣೈ, ಆನಂದ ರೈ, ವಸಂತ್ ಪೂಜಾರಿ, ಭಾಸ್ಕರ ಚಂದ್ರ ಶೆಟ್ಟಿ, ಮತ್ತು ಮಹಾನಗರ ಪಾಲಿಕೆ ಅಧಿಕಾರಿಗಳು ಉಪಸ್ಥಿತರಿದ್ದರು
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…
ಬಂಟ್ವಾಳ ಪುರಸಭೆ ವ್ಯಾಪ್ತಿಯಲ್ಲಿ ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟಿದ್ದು, ಸಾರ್ವಜನಿಕರ ಆರೋಗ್ಯ ಹಾಗೂ ಪರಿಸರದ ಮೇಲೆ ಗಂಭೀರ ಪರಿಣಾಮ ಬೀರುವ…
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…