ಮಂಗಳೂರು; ಮಂಗಳೂರು ವಿಶ್ವ ವಿದ್ಯಾನಿಲಯ ಕಾಲೇಜಿನಲ್ಲಿ ಬಿ ವಿ ಕಕ್ಕಿಲ್ಲಾಯ ಪ್ರತಿಷ್ಠಾನದಿಂದ ಉಪಾನ್ಯಾಸ ಕಾರ್ಯಕ್ರಮ ಆಯೋಜನೆ ಮಾಡಲಾಗಿದ್ದು, ಇದನ್ನ ವಿರೋಧಿಸಿ ಎಬಿವಿಪಿ ಪ್ರತಿಭಟನೆ ನಡೆಸಿದೆ. ಕಾಲೇಜಿನಲ್ಲಿ ಮೊದಲ ಸ್ವಾತಂತ್ರ್ಯ ಸಂಗ್ರಾಮ 1857 – ಜಂಟಿ ಬಲಿದಾನಗಳು , ಜಂಟಿ ವಾರಿಸುದಾರಿಕೆ ಕುರಿತು ಉಪನ್ಯಾಸ ಕಾರ್ಯಕ್ರಮ ಏರ್ಪಡಿಸಲಾಗಿದ್ದು, ಆದರೆ ವಿದ್ಯಾರ್ಥಿಗಳು ಈ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜನೆ ಮಾಡಬೇಡಿ ಎಂದು ಪ್ರತಿಭಟನೆ ನಡೆಸಿದ್ದಾರೆ.
ದೆಹಲಿ ವಿಶ್ವವಿದ್ಯಾನಿಲಯದ ನಿವೃತ್ತ ಪ್ರೊಫೆಸರ್ ಡಾ. ಶಂಸುಲ್ ಇಸ್ಲಾಂ ಅವರು ಉಪನ್ಯಾಸ ನೀಡಲಿದ್ದಾರೆ ಎಂಬ ಕಾರಣಕ್ಕೆ ಎಬಿವಿಪಿ ಭಾರೀ ವಿರೋಧ ವ್ಯಕ್ತಪಡಿಸಿದೆ. ವಿವಾದಾತ್ಮಕ ವ್ಯಕ್ತಿಗಳನ್ನು ಕಾರ್ಯಕ್ರಮಕ್ಕೆ ಕರೆಸಿ, ಕಾಲೇಜಿನಲ್ಲಿ ಸಂಘರ್ಷ ವಾತಾವರಣ ಸೃಷ್ಠಿಗೆ ಸಂಚು ಮಾಡುತ್ತಿದ್ದಾರೆ ಎಂಬ ಆರೋಪ ಕೇಳಿಬರುತ್ತಿದ್ದು, ಈ ಹಿನ್ನಲೆ ಕಾರ್ಯಕ್ರಮ ನಡೆಯದಂತೆ ತಡೆಯಲು ಎಬಿವಿಪಿ ಯೋಜನೆ ರೂಪಿಸಿದೆ.
ಅದಲ್ಲದೇ ಆರ್ ಎಸ್ ಎಸ್ ನ ತೀವ್ರ ವಿರೋಧಿ ಆಗಿರುವ ಡಾ ಶಂಸುಲ್ ಇಸ್ಲಾಂ ರವರು ಕಾಲೇಜಿನಲ್ಲಿ ಉಪನ್ಯಾಸ ನೀಡಲು ಅರ್ಹರಲ್ಲ ಎಂಬ ಮನೋಭಾವನೆ ವಿದ್ಯಾರ್ಥಿಗಳದ್ದಾಗಿದೆ. ಈ ಹಿನ್ನಲೆ ವಿದ್ಯಾರ್ಥಿಗಳು ಗೋ ಬ್ಯಾಕ್ ಶಂಸುಲ್ ಎಂದು ಘೋಷಣೆ ಕೂಗುವ ಮೂಲಕ ಪ್ರತಿಭಟನೆ ನಡೆಸಿದ್ದಾರೆ.
ಬಂಟ್ವಾಳ ತಾಲೂಕಿನ ತೆಂಕಬೆಳ್ಳೂರು ಗ್ರಾಮದ ಕಾಗುಡ್ಡೆ ಎಂಬಲ್ಲಿ ರಾತ್ರಿ ಸುರಿದ ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಮನೆಯ ಚಾವಣಿ…
ಬಂಟ್ವಾಳ ತಾಲೂಕಿನ ಸಜೀಪಮೂಡ ಗ್ರಾಮದ ಕೊಳಕೆ ಎಂಬಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಸಂಭವಿಸಿದಂತಹ ಅವಘಡದಲ್ಲಿ ಮನೆಯ ಪೀಠೋಪಕರಣಗಳು ಹಾಗೂ ದಿನನಿತ್ಯ…
ವಾಷಿಂಗ್ಟನ್ ಕರ್ನಾಟಕದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಯು. ಟಿ. ಖಾದರ್ ಫರೀದ್ ಅವರ ಸಾರ್ವಜನಿಕ ಸೇವೆ…
ಫಿಫಾ ವಿಶ್ವಕಪ್ 2026ರ ಫೈನಲ್ ಹಾಗೂ ಸೆಮಿಫೈನಲ್ ಪಂದ್ಯಗಳ ವೇಳೆ ನಡೆದ ಗಲಾಟೆ ಮತ್ತು ನಿಯಮ ಉಲ್ಲಂಘನೆಗಳ ಹಿನ್ನೆಲೆಯಲ್ಲಿ, ಅರ್ಜೆಂಟೀನಾ…
'ನ್ಯೂಯಾರ್ಕ್ ಟೈಮ್ಸ್' ತನ್ನ ವರದಿಯಲ್ಲಿ 'ಪಾಕಿಸ್ತಾನಿ ಕಾಶ್ಮೀರ' ಎಂದು ಉಲ್ಲೇಖಿಸಿರುವುದಕ್ಕೆ ಭಾರತ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಅಮೆರಿಕದಲ್ಲಿರುವ ಭಾರತೀಯ ರಾಯಭಾರ…
ಚೀನಾ ಪಾಕಿಸ್ತಾನದ ಮೂಲಕ ಇರಾನ್ಗೆ 400 ರಾಕೆಟ್ ಲಾಂಚರ್ಗಳನ್ನು ಪೂರೈಸಿದೆ ಎಂಬ ವರದಿಗಳು ಜಾಗತಿಕ ಆತಂಕಕ್ಕೆ ಕಾರಣವಾಗಿವೆ. ಈ ಕುರಿತು…