ಮೂಡಬಿದಿರೆಯ ಶೋರಿನ್ ರಿಯೋ ಕರಾಟೆ ಅಸೋಸಿಯೇಶನ್ ಆಶ್ರಯದಲ್ಲಿ , ಸ್ವಾಮೀಸ್ ಸ್ಟ್ರೆಂಥ್ ಟ್ರೈನಿಂಗ್ ಎಂ.ಕೆ .ಅನಂತ್ರಾಜ್ ದೈಹಿಕ ಶಿಕ್ಷಣ ಕಾಲೇಜು ಸಹಯೋಗದೊಂದಿಗೆ, 20ನೇ ರಾಜ್ಯಮಟ್ಟದ ಕರಾಟೆ ಚಾಂಪಿಯನ್ ಶಿಫ್ ಸಮಾಜ ಮಂದಿರದಲ್ಲಿ ನಡೆದಿದೆ.
ಮಾಜಿ ಸಚಿವ ಕೆ.ಅಭಯಚಂದ್ರ ಜೈನ್ ದೀಪ ಬೆಳಗಿಸುವ ಮೂಲಕ ಕರಾಟೆ ಚಾಂಪಿಯನ್ ಶಿಪ್ ಗೆ ಚಾಲನೆ ನೀಡಿ ಶುಭ ಹಾರೈಸಿದ್ರು. ಬಳಿಕ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಸುದರ್ಶನ್ ಎಂ. ಮಾತನಾಡಿ, ಆತ್ಮರಕ್ಷಣೆಗೋಸ್ಕರ ಯಾವುದೇ ಆಯುಧಗಳನ್ನು ಬಳಸಿಕೊಳ್ಳದ ಸಾಹಸದ ಸಮರ ಕಲೆ ಕರಾಟೆ. ಆತ್ಮರಕ್ಷಣೆಯ ಜತೆಗೆ ಮನಸಿಗೆ ಏಕಾಗ್ರತೆಯನ್ನು, ಮಾನಸಿಕವಾಗಿ ಶಾರೀರಿಕವಾಗಿ ಒಬ್ಬ ವ್ಯಕ್ತಿ ಸದೃಢವಾಗಿ ಬೆಳೆಯಲು ಕರಾಟೆ ಸಹಕಾರಿಯಾಗುತ್ತದೆ ಎಂದರು.
ಇನ್ನೂ ಈ ಕಾರ್ಯಕ್ರಮದಲ್ಲಿ ಪುರಸಭಾ ನಿರ್ಗಮನ ಅಧ್ಯಕ್ಷ ಪ್ರಸಾದ್ ಕುಮಾರ್, ಮೊಹಮ್ಮದ್ ಶರೀಫ್, ರಾಜ್ಯ ಕರಾಟೆ ಶಿಕ್ಷಕರ ಸಂಘದ ಕೋಶಾಧಿಕಾರಿ ರವಿ ಕೋಟ್ಯಾನ್, ಪ್ರಧಾನ ಕಾರ್ಯದರ್ಶಿ ಸತೀಶ್ ಬೆಳ್ಮಣ್, ಉಡುಪಿ ಜಿಲ್ಲಾ ಕರಾಟೆ ಶಿಕ್ಷಕರ ಸಂಘದ ಅಧ್ಯಕ್ಷ ಕಿರಣ್ ಕುಂದಾಪುರ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದಲ್ಲಿರುವ ಸಂಸದರ ಕಚೇರಿಯಲ್ಲಿ ಸಾರ್ವಜನಿಕರ ಕುಂದು-ಕೊರತೆ…
ಸ್ವಚ್ಛತೆಯ ಬಗ್ಗೆ ತಿಳಿ ಹೇಳಬೇಕಾದ ಸರಕಾರಿ ಕಚೇರಿಯ ಮುಂಭಾಗದಲ್ಲಿ ರಾಶಿ ಹಾಕಲಾದ ಕಸದ ಬಗ್ಗೆ ಸಾರ್ವಜನಿಕರು ಮಾತನಾಡುವಂತಾಗಿದೆ. ಬಿಸಿರೋಡಿನ ಪುರಸಭಾ…
ಸಂಚರಿಸುತ್ತಿದ್ದ ಲಾರಿಯೊಂದಕ್ಕೆ ಆಕಸ್ಮಿಕವಾಗಿ ಬೆಂಕಿ ತಗುಲಿ ಲಾರಿ ಬೆಂಕಿಗಾಹುತಿಯಾದ ಘಟನೆ ಮೆಲ್ಕಾರಿನಲ್ಲಿ ನಡೆದಿದೆ. ಬೆಂಗಳೂರು ಮೂಲದ ಲಾರಿ ಇದಾಗಿದ್ದು, ಮಂಗಳೂರು…
ಬಾವಿಯೊಂದರ ಹೂಳೆತ್ತುವ ಕೆಲಸ ಮುಗಿಸಿ ಮೇಲೆ ಬರುವ ವೇಳೆ ಹಗ್ಗ ಜಾರಿ ಬಿದ್ದು ಗಾಯಗೊಂಡ ಘಟನೆ ಬಂಟ್ವಾಳ ತಾಲೂಕಿನ ಕುರಿಯಾಳದ…
ಕಡೇಶಿವಾಲಯ ನೆತ್ತರ ಬಾಬು ಪೂಜಾರಿಯವರ ಮನೆಗೆ ಸಿಡಿಲು ಬಡಿದು ಹಾನಿಯಾಗಿದ್ದು ಘಟನಾ ಸ್ಥಳಕ್ಕೆ ಬಂಟ್ವಾಳ ಶಾಸಕರಾದ ರಾಜೇಶ್ ನಾೈಕ್ ಉಳಿಪಾಡಿಯವರು…
ಬಂಟ್ವಾಳ: ಸಿಡಿಲು ಬಡಿದು ಹಾನಿಗೊಳಗಾದ ಇಳಿಯೂರು ಶ್ರೀ ಮಹಾವಿಷ್ಣು ದೇವಸ್ಥಾನಕ್ಕೆ ಬಿಜೆಪಿ ಮುಖಂಡ ಸಂದೇಶ್ ಶೆಟ್ಟಿ ಅರೆಬೆಟ್ಟು ಅವರು ರಾತ್ರಿ…